SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 25, 2025
ಶಿವಮೊಗ್ಗ | ಅಖಿಲ ಕರ್ನಾಟಕ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಎಪ್ರಿಲ್ 13 ರಂದು ಚುನಾವಣೆ ನಡೆಯುತ್ತಿದೆ ಎಂದು ಬ್ರಾಹ್ಮಣ ಮುಖಂಡ ದತ್ತಾತ್ರಿ ತಿಳಿಸಿದರು.
ಇಂದು ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರುಏ.13 ರಂದು ನಗರದ ವಾಸವಿ ವಿದ್ಯಾಲಯದಲ್ಲಿ ಬೆಳಗ್ಗೆ 8.00 ರಿಂದ ಸಂಜೆ 4.00 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ನಮ್ಮ ಸಮುದಾಯದಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಘುನಾಥ್ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಶಿವಮೊಗ್ಗ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ರಘುರಾಮ್ ಸ್ಪರ್ಧಿಸುತ್ತಿದ್ದಾರೆ ಎಂದರು.
ಅಭ್ಯರ್ಥಿಗಳು ಬೆಂಗಳೂರಿನಲ್ಲಿ ನಾಮಿನೇಷನ್ ಮಾಡಲಿದ್ದಾರೆ. ಎಲ್ಲಾ ತಾಲ್ಲೂಕುಗಳಲ್ಲಿ ತಂಡ ರಚನೆ ಮಾಡಿದ್ದೇವೆ. ಒಟ್ಟು 1687 ವೋಟ್ ಶಿವಮೊಗ್ಗದಲ್ಲಿದೆ. ಸಾಗರದಲ್ಲಿ 900 ವೋಟ್ ಗಳಿವೆ. ಹಾಗೆಯೇ ಇಷ್ಟು ವರ್ಷ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾ ಪಪ್ರತಿನಿಧಿ ಸ್ಥಾನದ ಅಧಿಕಾರ ಅವದಿ 3 ವರ್ಷ ಇತ್ತು ಈಬಾರಿ ಅದನ್ನು 5 ವರ್ಷಕ್ಕೆ ಹೆಚ್ಚಿಸಿದ್ದೇವೆ ಎಂದರು.
ಹಾಗೆಯೇ ಈ ಬಾರಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುವ ಉದ್ದೇಶ ಮತ್ತು ಬಡ ಬ್ರಾಹ್ಮಣ ಮಕ್ಕಳಿಗೆ ಸ್ಕಾಲರ್ ಶಿಪ್ ನೀಡುವ ಉದ್ದೇಶವನ್ನು ಹೊಂದಿದ್ದೇವೆ. 7ಇದು ಬ್ರಾಹ್ಮಣರ ನಡುವೆ ಐಕ್ಯತೆ ಮೂಡಿಸುವಲ್ಲಿ ಸಫಲವಾಗಿದೆ. ನಾಡಿನ ಪ್ರಖ್ಯಾತರು ಸಾರಥ್ಯವನ್ನು ವಹಿಸಿ, ಮಹಾಸಭಾದ ಏಳಿಗೆಗಾಗಿ ಕಾರ್ಯನಿರ್ವಹಿಸಿದ್ದಾರೆ ಎಂದರು.
ಕರ್ನಾಟಕ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ರಘುನಾಥ್ ಅವರು, ಪ್ರತಿಷ್ಠಿತ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನದ ಪ್ರಬಲ ಅಭ್ಯರ್ಥಿ ಎಸ್.ರಘುನಾಥ್ರವರು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕೆಲಸ ಮಾಡಿ ಹೆಸರು ಮಾಡಿದವರು. ಇವರು ರಾಜಕೀಯ ಕ್ಷೇತ್ರದಲ್ಲಿ ಬೆಂಗಳೂರು ನಗರ ಬಿಜೆಪಿ ಸಂಘಟನಾ ಕಾರ್ಯದರ್ಶಿಯಾಗಿ ಚುನಾವಣೆ ವೇಳೆ ಸಂಚಾಲಕರಾಗಿ ಪಕ್ಷದ ಗೆಲುವಿಗಾಗಿ ಶ್ರಮಿಸಿದವರು ಎಂದರು.
ಅಭ್ಯರ್ಥಿ ರಘುರಾಮ್ ಮಾತನಾಡಿ, ಶಿವಮೊಗ್ಗ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ. ಹಿರಿಯರ ಮಾರ್ಗದರ್ಶನದ ನಿಟ್ಟಿನಲ್ಲಿ ಸ್ಫರ್ಧೆ ಮಾಡುತ್ತಿದ್ದೇನೆ. 1986 ರಲ್ಲಿ ಕೆ.ಇ.ಬಿ.ಯಲ್ಲಿ ವೃತ್ತಿ ಜೀವನ ಆರಂಭಿಸಿ, ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ, 40 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದೇನೆ. ಪ್ರತಿಷ್ಠಿತ ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ, ಸರ್ ಎಂ.ವಿ. ಸೊಸೈಟಿ, ಹೊಯ್ಸಳ ಸೌಹಾರ್ದ ಸಹಕಾರಿಗಳಲ್ಲಿ ನಿರ್ದೇಶಕರು, ಖಜಾಂಚಿ ಹಾಗೂ ಅಧ್ಯಕ್ಷರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದೇನೆ. ಪ್ರಸಕ್ತ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಶಿವಮೊಗ್ಗ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಪ್ರತಿನಿಧಿಸಲು ಸ್ಪರ್ಧಿಸಿದ್ದು, ತಮ್ಮೆಲ್ಲರ ಸಹಕಾರ, ಆಶೀರ್ವಾದ ಇರಲಿ ಎಂದು ಹೇಳಿದರು.
SUMMARY | Elections to the post of state president and district representative of Akhila Karnataka Karnataka Brahmin Mahasabha will be held on April 13, brahmin leader Dattatri said.
KEYWORDS | Elections, Brahmin Mahasabha, April 13, Dattatri,