SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 17, 2025

ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18 ರಿಂದ 21 ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಅಲ್ಲದೇ ಇದೇ ಅವಧಿಯಲ್ಲಿ ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರಗಳು, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸುವರು. ಮಾ.19ರಂದು ಬೆಳಿಗ್ಗೆ 10.00 ರಿಂದ ಸಂಜೆ 5.00 ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬನೆಯಾಗಿದ್ದಲ್ಲಿ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ 1 ಮತ್ತು 2 ರಲ್ಲಿ ಲಿಖಿತವಾಗಿ ದಾಖಲೆ, ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಬಹುದಾಗಿದೆ.

ಸುದ್ದಿ : 02 ಜಿಲ್ಲಾ ಮಟ್ಟದ ಕ್ರೀಡಾಕೂಟ
ಭಾರತ ಸರ್ಕಾರ, ಯುವ ವ್ಯವಹಾರ ಮ್ತತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಶಿವಮೊಗ್ಗ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಶಿವಮೊಗ್ಗ ಮತ್ತು ಇನ್ನೋವೆಟರ್ ಯೂತ್ ಕ್ಲಬ್,ಶಿವಮೊಗ್ಗ ಇವರ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ದಿನಾಂಕ 23.03.2025 ರ ಭಾನುವಾರದಂದು ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕ್ರೀಡಾಕೂಟದಲ್ಲಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಿದ್ದು15 ರಿಂದ 29ವರ್ಷದ ವಯೋಮಿತಿವುಳ್ಳವರು ಭಾಗವಹಿಸಬಹುದಾಗಿದೆ. ಗುಂಪು ವಿಭಾಗದಲ್ಲಿ ವಾಲಿಬಾಲ್ ಸ್ಪರ್ಧೆ (ಪುರುಷರಿಗೆ), ಖೋ,ಖೋ(ಮಹಿಳೆಯರಿಗೆ) ಹಾಗೂ ವೈಯಕ್ತಿಕ ವಿಭಾಗದಲ್ಲಿ ಮಹಿಳೆಯರಿಗಾಗಿ 100ಮೀ. ಓಟ ಮತ್ತು ಗುಂಡು ಎಸೆತ, ಪುರುಷರಿಗಾಗಿ ಬ್ಯಾಟ್ಮಿಟನ್, ಗುಂಡು ಎಸೆತ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ಭಾಗವಹಿಸಲು ಆಸಕ್ತ ಸ್ಪರ್ಧಿಗಳು ದಿನಾಂಕ 21.03.2025 ರೊಳಗೆ ನಿಮ್ಮ ಹೆಸರನ್ನು ಈ ಕೆಳಕಂಡ ಮೊಬೈಲ್ ನಂ.ಗೆ ಕರೆ ಮಾಡಿ ನೋಂದಣಿ ಮಾಡಿಕೊಳ್ಳತಕ್ಕದ್ದು. ಕ್ರೀಡಾಕೂಟದ ದಿನದಂದು 23.03.2025 ಬೆಳಿಗ್ಗೆ09.30 ರ ಒಳಗೆ ಸ್ಥಳದಲ್ಲಿ ಹಾಜರಿರಬೇಕೆಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಶ್ರೀ. ಉಲ್ಲಾಸ್ ಕೆ.ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9961332968
ಸುದ್ದಿ:03 ಮೆಸ್ಕಾಂ ಜನ ಸಂಪರ್ಕ ಸಭೆ
ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9480841340.
SUMMARY | Top 3 chatpat news, including Karnataka Upa-Lokayukta Justice KN Phanindra’s district visit
KEYWORDS | chatpat news, Karnataka, Upa Lokayukta, Justice KN Phanindra,