SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 20, 2025

ಶಿವಮೊಗ್ಗದ ಪುರದಾಳು ಗ್ರಾ.ಪಂ ವ್ಯಾಪ್ತಿಯ ಅನುಪಿನಕಟ್ಟೆ ಗ್ರಾಮದ ಕಸ ವಿಲೇವಾರಿ ಘಟಕದೊಳಗೆ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆ ವೇಳೆ ಕಸ ವಿಲೇವಾರಿಯಲ್ಲಿನ ಲೋಪಕ್ಕೆ ಸಂಬಂಧ ಪಟ್ಟಂತೆ ಸ್ವಯಂ ಪ್ರೇರಿತ ಕೇಸ್ ದಾಖಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರರವರ 2 ನೇದಿನದ ಸಿಟಿ ರೌಂಡ್ಸ್ ಮುಂದು ವರೆದಿದ್ದು, ಇಂದು ಬೆಳಿಗ್ಗೆ ಶಿವಮೊಗ್ಗದ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಶಿವಮೊಗ್ಗ ಹೊರವಲಯದ ಅನುಪಿನಕಟ್ಟೆಯ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೇಟಿ ನೀಡಿದ ಅವರು ಕಸ ವಿಲೇವಾರಿ ಘಟಕದೊಳಗೆ ರೌಂಡ್ಸ್ ಹಾಕಿ ಕಸ ಸಂಗ್ರಹಣೆ, ಪ್ಲಾಸ್ಟಿಕ್, ತ್ಯಾಜ್ಯ ನೀರಿನ ವಿಲೇವಾರಿ ಬಗ್ಗೆ ಪರಿಶೀಲನೆ ನಡೆಸಿದರು.

ಈ ವೇಳೆ ಘಟಕದ ಬಗ್ಗೆ ಅಧಿಕಾರಿಗಳು ಮತ್ತು ಸ್ಥಳೀಯರಿಂದ ಮಾಹಿತಿ ಪಡೆದ ಉಪಲೋಕಾಯುಕ್ತರು ನಾಯಿ, ನೊಣದ ಕಾಟ ಬಾರದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಷ್ಟೇ ಅಲ್ಲದೆ ಕಸ ವಿಲೇವಾರಿಯಲ್ಲಿನ ಲೋಪಕ್ಕೆ ಸಂಬಂಧಿಸಿದಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸುಮೋಟೋ ಕೇಸ್ ದಾಖಲಿಸುವಂತೆ ಸೂಚಿಸಿದರು.
SUMMARY | He instructed the officials to register a suo motu case in connection with the lapses in garbage disposal.
KEYWORDS | suo motu case Upa-Lokayukta, Justice, K.A. Phanindra,