SHIVAMOGGA | MALENADUTODAY NEWS | ಮಲೆನಾಡು ಟುಡೆ | Feb 1, 2025
ಕೇಂದ್ರ ಬಜೆಟ್ನಲ್ಲಿ ನಾವು 10 ಲಕ್ಷ ರೂಪಾಯಿ ವರೆಗಿನ ಆದಾಯಕ್ಕೆ ತೆರಿಗೆ ಮಿತಿ ಸಿಗಲಿದೆ ಎಂದುಕೊಂಡಿದ್ದೆವು, ಆದರೆ ಅದನ್ನು 12 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದಾರೆ. ಇದರಿಂದ ತೆರಿಗೆದಾರರಿಗೆ ಅನುಕೂಲವಾಗಲಿದೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಇಂದು ನಗರದಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಅವರು ಇಡೀ ದೇಶ ಹೆಮ್ಮೆ ಪಡುವಂತಹ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ನೀಡಿದ್ದಾರೆ. ಬಜೆಟ್ ನಲ್ಲಿ ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತಹ ಕ್ರಮವನ್ನು ಕೈಗೊಂಡಿದ್ದಾರೆ, ಕ್ಯಾನ್ಸರ್ ಔಷಧ ಮೇಲಿನ ಕಸ್ಟಮ್ ಡ್ಯೂಟಿಯನ್ನು ತೆಗೆದು ಹಾಕಿ ಆಗಿದೆ ಎಲ್ಲಾ ಆಸ್ಪತ್ರೆಗಳಲ್ಲೂ ಕ್ಯಾನ್ಸರ್ ಪಡಿತರಾಗಿ ಡೇ ಕೇರ್ ಕಿಸಾನ್ ಕ್ರೆಡಿಟ್ ಮಿತಿಯನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದಾರೆ, ರೈತರ ಆದಾಯ ದ್ವಿಗುಣವಾಗಬೇಕು ಎಂಬ ಆಶಯಕ್ಕೆ ಇದು ಪೂರಕವಾಗಿದೆ, ಶಾಲೆಗಳಿಗೆ ಇಂಟರ್ನೆಟ್ ಸೌಲಭ್ಯ ನೀಡುವುದು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುಕೂಲ ಆಗಲಿದೆ, ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತ ಕ್ರಮವನ್ನು ಸರ್ಕಾರ ಘೋಷಿಸಿದೆ, ಹಾಗೆಯೇ ಇತರೆ ಅನೇಕ ಜನಪರ ಕ್ರಮವನ್ನು ಇಂದಿನ ಬಜೆಟ್ನಲ್ಲಿ ಮಂಡಿಸಲಾಗಿದೆ. ರಾಜ್ಯ ಸರ್ಕಾರ ಸರಿಯಾಗಿ ಕೇಂದ್ರದ ಮುಂದೆ ಬೇಡಿಕೆ ಇಟ್ಟಿಲ್ಲ ಹಾಗಾಗಿ ಕಾಂಗ್ರೆಸ್ ನವರು ಸುಖಾ ಸುಮ್ಮನೆ ಟೀಕೆ ಮಾಡುತ್ತಿದ್ದಾರೆ, ರಾಜ್ಯದಲ್ಲಿ ಕೇಂದ್ರ ಸರ್ಕಾರದ ಹಲವು ಯೋಜನೆ ಜಾರಿಯಲ್ಲಿದೆ ಕೇಂದ್ರ ಸರ್ಕಾರ ರಾಜ್ಯಕ್ಕೂ ಅಗತ್ಯವಾದ ನೆರವು ನೀಡುತ್ತಿದೆ ಎಂದರು.
SUMMARY | In the Union Budget, we had thought that income up to Rs 10 lakh will get a tax threshold, but it has been increased to Rs 12 lakh. Former Home Minister Araga Jnanendra said this would benefit taxpayers.
KEYWORDS | Union Budget, Araga Jnanendra, taxpayers,