SHIVAMOGGA | MALENADUTODAY NEWS | ಮಲೆನಾಡು ಟುಡೆ | Feb 3, 2025
ಶಿವಮೊಗ್ಗ | 19 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ.06 ಮತ್ತು 07 ರಂದು ಗೋಪಿಶೆಟ್ಟಿ ಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ ಏರ್ಪಡಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಡಿ.ಮಂಜುನಾಥ ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿ ತಾಲ್ಲೂಕಿನ ಹಿರಿಯ ಸಾಹಿತಿ ಡಾ. ಜಿ.ಕೆ.ರಮೇಶ್ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಸುಮಾರು 4 ಸಾವಿರ ಪ್ರತಿನಿಧಿಗಳು ಸಾಹಿತ್ಯ ಸಮ್ಮೇಳನಕ್ಕಾಗಿ ನೋಂದಣಿ ಮಾಡಿಕೊಂಡಿದ್ದು, ಎರಡು ದಿನಗಳಲ್ಲಿ 10 ಕ್ಕೂ ಹೆಚ್ಚು ಗೋಷ್ಟಿಗಳು ನಡೆಯಲಿದೆ. ನಾಡಿನ ಪ್ರಸಿದ್ಧ ಸಾಹಿತಿಗಳು, ಚಲನಚಿತ್ರ ನಟರು ಭಾಗವಹಿಸಲಿದ್ದಾರೆ. ಪುಸ್ತಕ ಮಾರಟ ಮಳಿಗೆಗಳ ಜೊತೆಯಲ್ಲಿ ವಿಭಿನ್ನ ಬಗೆಯ 25 ಕ್ಕೂ ಹೆಚ್ಚು ಮಳಿಗೆಗಳಿಗೆ ಅವಕಾಶ ನೀಡಲಾಗಿದೆ. ಶಿಕ್ಷಕಿ ಮೇರಿ ಡಿಸೋಜ ಸಂಗ್ರಹಿಸಿರುವ ಅಮೂಲ್ಯ ನಾಣ್ಯಗಳು ಹಾಗೂ ಶಿವಮೊಗ್ಗ ನಾಗರಾಜ ಅವರು ಸೆರೆ ಹಿಡಿದಿರುವ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.
ಫೆ.06 ರಂದು ಬೆಳಗ್ಗೆ 09.30 ಕ್ಕೆ ಸಾಹಿತ್ಯ ಗ್ರಾಮದ ಆವರಣದಲ್ಲಿ ಧ್ವಜಾರೋಹಣ ನೆರವೇರಲಿದ್ದು, ಡಿಡಿಪಿಐ ಮಂಜುನಾಥ.ಎಸ್.ಆರ್ ರಾಷ್ಟ್ರಧ್ವಜವನ್ನು, ವಾರ್ತಾಧಿಕಾರಿ ಆರ್.ಮಾರುತಿ ನಾಡಧ್ವಜವನ್ನು ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ ಪರಿಷತ್ತಿನ ಧ್ವಜಾರೋಹಣಗೊಳಿಸಲಿದ್ದಾರೆ.
ನಂತರ ಬೆಳಗ್ಗೆ 10.00 ಗಂಟೆಗೆ ಗೋಪಾಳದ ಆನೆ ಸರ್ಕಲ್ನಿಂದ ಹೊರಡುವ ಸಾಂಸ್ಕೃತಿಕ ನಡಿಗೆಯನ್ನು ಸಮ್ಮೇಳನಾಧ್ಯಕ್ಷರೊಂದಿಗೆ ರಾಜ್ಯ ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಎಸ್.ರವಿಕುಮಾರ್ ಮೆರವಣಿಗೆ ಚಾಲನೆ ನೀಡಲಿದ್ದಾರೆ.
ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಮೋಹನ್ಕುಮಾರ್, ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಯೋಗೀಶ್, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಕೆ.ಪಿ.ಶ್ರೀಪಾಲ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಶರಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ ಹೆಚ್ ಸೇರಿದಂತೆ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದರು.
ಅಂದು ಬೆಳಗ್ಗೆ 10.30 ಕ್ಕೆ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಹಣತೆ ಹಚ್ಚೋಣ ಬನ್ನಿ ಹೆಸರಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಸಮ್ಮೇಳನದ ಸ್ಮರಣ ಸಂಚಿಕೆ ಕ್ರಿಯಾಶೀಲತೆ ಒಳನೋಟ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಸರ್ವಾಧ್ಯಕ್ಷರಾದ ಡಾ. ಜೆ.ಕೆ.ರಮೇಶ್ ಅವರ ‘ಇಂಡಿಯಾದ ಹೊರಗೊಂದು ಹಣಕು’ ಕೃತಿ ಹಾಗೂ ಬಿ.ಚಂದ್ರೇಗೌಡರ ‘ದೇಶಾಂತರ ಕಾದಂಬರಿ’ ಗಳನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಲೋಕಾರ್ಪಣೆಗೊಳಿಸಲಿದ್ದಾರೆ. ಕಸಾಪ ರಾಜ್ಯಾಧ್ಯಕ್ಷರಾದ ಡಾ. ಮಹೇಶ್ ಜೋಷಿ ದತ್ತಿನಿಧಿ ಸ್ವೀಕಾರ ಮಾಡಲಿದ್ದಾರೆ. ಜಿಲ್ಲಾ 18 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ ಡಾ. ಎಸ್.ಪಿ.ಪದ್ಮಪ್ರಸಾದ್, ಕುವೆಂಪು ವಿವಿ ಕುಲಪತಿ ಡಾ. ಶರತ್ ಅನಂತಮೂರ್ತಿ, ವಿಧಾನಪರಿಷತ್ತಿನ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪ, ನಗರ ಶಾಸಕ ಎಸ್.ಎಲ್.ಚನ್ನಬಸಪ್ಪ, ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ಭಾಗವಹಿಸಲಿದ್ದಾರೆ ಎಂದರು.
ಫೆ.7 ರಂದು ಬೆಳಗ್ಗೆ 09.30 ಕ್ಕೆ ಸಾಹಿತ್ಯ ಗ್ರಾಮದ ಆವರಣದಲ್ಲಿ ಉಪವಿಭಾಗಾಧಿಕಾರಿ ಸತ್ಯನಾರಾಯಣ.ಎಸ್ ರಾಷ್ಟ್ರಧ್ವಜ, ಬಿಇಓ ರಮೇಶ್ ನಾಡಧ್ವಜ, ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ ಪರಿಷತ್ತಿನ ಧ್ವಜಾರೋಹಣಗೊಳಿಸಲಿದ್ದಾರೆ. ಬೆಳಗ್ಗೆ 10.30 ಕ್ಕೆ ನಡೆಯುವ ಗೋಷ್ಟಿಯಲ್ಲಿ ʼಕನ್ನಡ ಸಾಹಿತ್ಯ ಈಚಿನ ಕಥನಕ್ರಮʼ ಗೋಷ್ಠಿಯಲ್ಲಿ ಸಾಹಿತಿ ಡಾ. ಮೇಟಿ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಲಿದ್ದು, ಕಾವ್ಯ ಪ್ರಕಾರ ಕುರಿತು ಅಕ್ಷತಾ ಹುಂಚದಕಟ್ಟೆ, ವಿಮರ್ಶಾ ಸಾಹಿತ್ಯ ಕುರಿತು ಡಾ. ಸಬಿತಾ ಬನ್ನಾಡಿ ಮಾತನಾಡಲಿದ್ದಾರೆ ಎಂದರು.
ಬೆಳಗ್ಗೆ 12.30 ಕ್ಕೆ ನಡೆಯುವ ಮಲೆನಾಡು-ಬದುಕಿನ ಸವಾಲು ಗೋಷ್ಟಿಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ. ಆರ್.ಎಂ.ಮಂಜುನಾಥಗೌಡ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಗೋಪಾಲಕೃಷ್ಣ ಬೇಳೂರು ಭಾಗವಹಿಸಲಿದ್ದು, ಅರಣ್ಯ ಒತ್ತುವರಿ ಆಹಾರ ಧಾನ್ಯ ನಿರ್ಲಕ್ಷ್ಯ ವನ್ಯಪ್ರಾಣಿ-ನಾಗರಿಕ ಸಂಘರ್ಷ ಪರಿಸರ ತಜ್ಞ ಕಲ್ಕುಳಿ ವಿಠಲಹೆಗಡೆ ಮಾತನಾಡಲಿದ್ದಾರೆ. ಮಧ್ಯಾಹ್ನ 02.30 ಕ್ಕೆ ನಡೆಯುವ ಕಥೆ ಹೇಳುವೆವು ಕೇಳಿ ಗೋಷ್ಠಿಯಲ್ಲಿ ಪತ್ರಕರ್ತ ಗೋಪಾಲ ಯಡೆಗೆರೆ ಅಧ್ಯಕ್ಷತೆ ವಹಿಸಲಿದ್ದು, ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದಾರೆ. ಜಿಲ್ಲೆಯ ವಿವಿಧ ಕಥೆಗಾರರು ಕಥಾವಾಚನ ಮಾಡಲಿದ್ದಾರೆ. ಸಂಜೆ 04.30 ಕ್ಕೆ ನಡೆಯುವ ಮಾಧ್ಯಮ ಬದ್ಧತೆಗಳು ಗೋಷ್ಟಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
SUMMARY | The 19th Kannada Sahitya Sammelana will be held on Feb. 6 and 07 at Sahitya village in Gopishetty Koppa, district president D. Manjunatha said.
KEYWORDS | Kannada Sahitya Sammelana, Gopishetty Koppa, Manjunatha,