SHIVAMOGGA | MALENADUTODAY NEWS | ಮಲೆನಾಡು ಟುಡೆ | Feb 18, 2025

ಶಿವಮೊಗ್ಗ : ಸಂಸದ ಬಿ.ವೈ ರಾಘವೇಂದ್ರರವರ ತವರು ಕ್ಷೇತ್ರದಲ್ಲೇ ಅತಿ ಹೆಚ್ಚು ಅರಣ್ಯ ಭೂಮಿ ಸಮಸ್ಯೆ ಇದೆ. ಈ ಬಗ್ಗೆ ಒಂದು ದಿನ ಧ್ವನಿ ಎತ್ತಿಲ್ಲ. ಮಾತೆತ್ತಿದರೆ ನಾನು ರೈಲು ಬಿಟ್ಟೆ, ವಿಮಾನ ಹಾರಾಟ ಮಾಡಿಸಿದ್ದೇನೆ ಎಂದು ಹೇಳುತ್ತಾರೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ ಶ್ರೀನಿವಾಸ್ ರವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪತ್ರಿಕಾಭವನದಲ್ಲಿ ಮಾತನಾಡಿರುವ ಅವರು, ರೈತರ ಪಾಲಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸತ್ತು ಹೋಗಿವೆ. ಶರಾವತಿ ಮುಳುಗಡೆ ಸಂತ್ರಸ್ತರ ವಿಚಾರ ಬಿಟ್ಟರೆ ಮಲೆನಾಡಿನ ಉಳಿದ ಸಮಸ್ಯೆಗಳ ಬಗ್ಗೆ ಸರ್ಕಾರ ಸಭೆ ನಡೆಸಿಲ್ಲ ಎಂದು ದೂರಿದರು. ಸಂಸದ ಬಿವೈರಾಘವೇಂದ್ರ ರವರ ತವರು ಶಿಕಾರಿಪುರದಲ್ಲೊಯೇ ಅತಿ ಹೆಚ್ಚು ಅರಣ್ಯ ಭೂಮಿ ಸಮಸ್ಯೆ ಇದೆ. ಈ ಬಗ್ಗೆ ಅವರು ಒಂದು ದಿನವೂ ಧ್ವನಿ ಎತ್ತಿಲ್ಲ ಎಂದು ದೂರಿದರು. ಮೇಲಾಗಿ ಸಿಎಂ ಹಾಗೂ ಡಿಸಿಎಂ ಕೊಟ್ಟ ಮಾತಿಗೆ ತಪ್ಪಿದ್ದಾರೆ. ಸಿಎಂ ಅಧ್ಯಕ್ಷತೆಯಲ್ಲಿ ಕೂಡಲೇ ಮಲೆನಾಡಿನ ರೈತರ ಸಮಸ್ಯೆಗಳ ಚರ್ಚೆ ನಡೆಸಲು ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.

SUMMARY | MP B Y Raghavendra’s home constituency has the highest forest land problem.
KEYWORDS | B Y Raghavendra, forest land problem, shivamogga,