Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

ಮನುಷ್ಯರನ್ನು ವಿಭಜಿಸುವವರು ಧರ್ಮ ದ್ರೋಹಿಗಳು | ಸಿಎಂ ಸಿದ್ದರಾಮಯ್ಯ

131
Last updated: November 29, 2024 8:42 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 29, 2024

ಜಾತಿ ಧರ್ಮದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವವರು ಧರ್ಮ ದ್ರೋಹಿಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಯಾವ ಧರ್ಮವೂ ದ್ವೇಷವನ್ನು ಬೋಧನೆ ಮಾಡುವುದಿಲ್ಲ. ಪ್ರೀತಿ, ಮಾನವೀಯತೆ ಎಲ್ಲ ಧರ್ಮಗಳ ಸಾರ ಎಂದರು. ಧರ್ಮದ ಅರ್ಥ ಬಹಳ ಸರಳ. ಬಸವಣ್ಣನವರು ಹೇಳಿರುವಂತೆ ದಯೆಯೇ ಧರ್ಮದ ಮೂಲ. ದ್ವೇಷ ಅಸೂಯೆ ಇದ್ದ ಕಡೆ ಧರ್ಮ ಇರುವುದಿಲ್ಲ. ದ್ವೇಷದಿಂದ ಸಮಾಜ ಛಿದ್ರವಾಗುತ್ತದೆ ಎಂದರು.  ನಮ್ಮ ಧರ್ಮವನ್ನು ಪಾಲಿಸೋಣ. ಎಲ್ಲ ಧರ್ಮಗಳನ್ನೂ ಸಹಿಸಿಕೊಳ್ಳುವ ಸಹಿಷ್ಣುತೆ ಬೆಳೆಸಿಕೊಳ್ಳಿ ಎನ್ನುವುದೇ ನಮ್ಮ‌ ಸಂವಿಧಾನದ ಮಹಾನ್ ಮೌಲ್ಯ. ಇದನ್ನು ಪಾಲಿಸುವುದೇ ನಾವು ಸ್ವಾಮಿ ವಿವೇಕಾನಂದರಿಗೆ, ಸಂವಿಧಾನಕ್ಕೆ ನೀಡುವ ಮಹೋನ್ನತ ಗೌರವ ಎಂದರು. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ನಾನು ಯಾವುದೇ ಧರ್ಮವನ್ನು ಒಲೈಸುವುದಿಲ್ಲ ಎಲ್ಲ ಧರ್ಮವನ್ನು ಪ್ರೀತಿಸುತ್ತೇನೆ

car decor

ನಾನು ಯಾವುದೇ ಒಂದು ಧರ್ಮವನ್ನು ಓಲೈಸುವುದಿಲ್ಲ. ನಾನು ಹಿಂದುಗಳನ್ನು  ಪ್ರೀತಿಸುವಂತೆಯೇ ಕ್ರೈಸ್ತ, ಮುಸ್ಲಿಂ, ಜೈನ, ಬೌದ್ಧ ಧರ್ಮದವರೆಲ್ಲರನ್ನೂ ಪ್ರೀತಿಸುತ್ತೇನೆ ಎಂದು ವಿವರಿಸಿದರು. ಹಿಂದುಳಿದವರು, ಅಲ್ಪಸಂಖ್ಯಾತರು, ಶೂದ್ರರು, ದಲಿತರು ಮತ್ತು ಇಡೀ ಮಹಿಳಾ ಕುಲವನ್ನು ಈ ಜಾತಿ ವ್ಯವಸ್ಥೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿತ್ತು. ಆದರೆ, ನಮ್ಮ ಸಂವಿಧಾನ ಇವರೆಲ್ಲರನ್ನೂ ಜಾತಿ ಸಂಕೋಲೆಯಿಂದ ಬಿಡುಗಡೆಗೊಳಿಸಿ ಶಿಕ್ಷಣ ಒದಗಿಸಿತು ಎಂದರು. ನಾನು ವೀರಮಕ್ಕಳ ಕುಣಿತಕ್ಕೆ ಸೇರಿ ಶಿಕ್ಷಣದಿಂದ ವಂಚಿತನಾಗಿದ್ದೆ. ಆದರೆ ನಮ್ಮ ಸಂವಿಧಾನ ಮತ್ತು ಒಬ್ಬ ಗುರುಗಳ ಕಾರಣದಿಂದ ನಾನು ನೇರವಾಗಿ ಐದನೇ ತರಗತಿಯಿಂದ ಶಿಕ್ಷಣ ಪಡೆದೆ. ಪರಿಣಾಮ ನಾನು ಎರಡೆರಡು ಬಾರಿ ಮುಖ್ಯಮಂತ್ರಿ ಆದೆ ಎಂದರು.ಬಸವಣ್ಣನವರು 850 ವರ್ಷಗಳ ಹಿಂದೆ ಇವನಾರವ ಎನ್ನಬೇಡಿ, ಇವ ನಮ್ಮವ ಎನ್ನಿ ಎಂದು ಜಾತಿ ವ್ಯವಸ್ಥೆಯನ್ನು ಧಿಕ್ಕರಿಸಿದ್ದರು. ಆದರೆ, ಇವತ್ತಿಗೂ ಜಾತಿ ಹೋಗಿಲ್ಲ ಎಂದರು.

ಕ್ರೈಸ್ತ ಧರ್ಮ ಗುರುಗಳು, ಕ್ರೈಸ್ತ ಸಂಸ್ಥೆಗಳು ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೂ ಶಿಕ್ಷಣ ಕೊಡುತ್ತಿದ್ದಾರೆ. ಇದು ಸಮಾಜಕ್ಕೆ ಬಹಳ ದೊಡ್ಡ ಕೊಡುಗೆ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಸಿಕ್ಕಾಗ ಮಾತ್ರ ಶಿಕ್ಷಣದ ಉದ್ದೇಶ ಈಡೇರುತ್ತದೆ ಎಂದರು. ದೇವ ಒಂದೇ ನಾಮ ಹಲವು ಎನ್ನುವುದು ಎಲ್ಲರ ನಂಬಿಕೆ. ಕಾಲೇ ಕಂಬ, ದೇಹವೇ ದೇಗುಲ, ಶಿರವೇ ಹೊನ್ನ ಕಲಶ ಎಂದು ಬಸವಾದಿ ಶರಣರು ಹೇಳಿದ್ದು ಈ ಕಾರಣಕ್ಕಾಗಿಯೇ ಎನ್ನುತ್ತಾ, ದೇವರಿಲ್ಲದ ಜಾಗವೇ ಇಲ್ಲ ಎನ್ನುವ ಸಂದೇಶವನ್ನು ಸಾರಿದ ಕನಕದಾಸರ ಬಾಳೆಹಣ್ಣಿನ ಕತೆಯನ್ನು ವಿವರಿಸಿದರು. ಅಂಬೇಡ್ಕರ್ ಅವರು ಸಂವಿಧಾನ ಅಂಗೀಕಾರ ಸಭೆಯಲ್ಲಿ ಮಾಡಿದ ಭಾಷಣವನ್ನು ಪ್ರತಿಯೊಬ್ಬರೂ ಓದಿಕೊಳ್ಳಬೇಕು. ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಕರೆ ನೀಡಿದರು.

SUMMARY| Those who divide human beings in the name of caste and religion are traitors,

 

KEYWORDS| siddaramaiah,  religion,  kannadanews,

malenadutoday add
Share This Article
Facebook Whatsapp Whatsapp Telegram Threads Copy Link
Previous Article ಕಲ್ಮನೆಯಲ್ಲಿ ಸಿಕ್ಕ ಕಲ್ಯಾಣ ಚಾಲುಕ್ಯರ ಕಲ್ಲಿನ ಶಾಸನದಲ್ಲಿ ಏನಿದೆ ಗೊತ್ತಾ
Next Article ಜೋಗದಲ್ಲಿ 185 ಕೋಟಿ  ಮೌಲ್ಯದ ಕಾಮಗಾರಿ | ಅಪ್‌ಡೇಟ್‌ ನೋಡಿದ ಶಾಸಕ ಬೇಳೂರು ಗೋಪಾಲಕೃಷ್ಣ
Leave a Comment

Leave a Reply Cancel reply

Your email address will not be published. Required fields are marked *

You Might Also Like

rastra bhakta balaga
POLITICSSHIVAMOGGA NEWS TODAY

rastra bhakta balaga june 25 / ನಮ್ಮ ಪ್ರಾಣ ಹೋದರೂ ಅವಕಾಶ ಕೊಡಲ್ಲ ಎಂದ ಕೆಎಸ್​ಇ/ ಪ್ರತಿಭಟನೆಯಲ್ಲಿ ಏನೆಲ್ಲಾ ನಡೀತು!

By ajjimane ganesh
POLITICS

ಕುಂಭ ಮೇಳದಲ್ಲಿ ಗಂಗೆಯಲ್ಲಿ ಮಿಂದೆದ್ದ ಕುಮಾರ್‌ ಬಂಗಾರಪ್ಪ

By 131
k s eshwarappa
POLITICS

k s eshwarappa 0 : ರಾಜ್ಯ ಸರ್ಕಾರ ಧರ್ಮಕ್ಕೆ ಹಾಗೂ ಸಂವಿಧಾನಕ್ಕೆ ಅನ್ಯಾಯ ಮಾಡ್ತಿದೆ | ಕೆ ಎಸ್​ ಈಶ್ವರಪ್ಪ

By Prathapa thirthahalli

ಸಿಟಿ ರವಿ ಬಂಧನ ವಿರೋದಿಸಿ ಶಿವಮೊಗ್ಗದಲ್ಲಿ ಜೋರು ಪ್ರತಿಭಟನೆ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up