SHIVAMOGGA | MALENADUTODAY NEWS | ಮಲೆನಾಡು ಟುಡೆ | Feb 25, 2025

ಶಿವಮೊಗ್ಗ | ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಮಾನವ ಹಕ್ಕುಗಳ ಮತ್ತು ಸಂವಿದಾನ ಹಕ್ಕುಗಳ ಜಾಗೃತಿ ಕಾರ್ಯಕ್ರಮವನ್ನು ಭದ್ರಾವತಿಯ ನ್ಯೂಟೌನ್ ಪೋಲಿಸ್ ಠಾಣೆಯ ಬಳಿಯಿರುವ ರೋಟರಿ ಸಮುದಾಯ ಭವನದಲ್ಲಿ ಫೆಬ್ರವರಿ 27 ರಂದು ಸಂಜೆ 4 ಗಂಟೆಗೆ ಹಮ್ಮಿಕೊಂಡಿದ್ದೇವೆ ಎಂದು ಸಮಿತಿಯ ಅಧ್ಯಕ್ಷರಾದ ಬಿ ಎನ್ ರಾಜು ತಿಳಿಸಿದರು.
ಇಂದು ನಗರದ ಪತ್ರಿಕಾಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜು ವಿಧ್ಯಾರ್ಥಿಗಳಿಗೆ ಹಾಗೂ ಇತರೆ ಸಾಮಾನ್ಯ ಜನರಿಗೆ ಸಂವಿಧಾನ ಹಾಗೂ ಮಾನವ ಹಕ್ಕುಗಳ ಬಗ್ಗೆ ಹೆಚ್ಚಾಗಿ ಮಾಹಿತಿ ಇರುವುದಿಲ್ಲ. ಆ ಮಾಹಿತಿಯನ್ನು ತಿಳಿಸುವ ಉದ್ದೇಶದಿಂದ ಈ ಮಾನವ ಹಕ್ಕುಗಳ ಮತ್ತು ಸಂವಿದಾನ ಹಕ್ಕುಗಳ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಸಂವಿಧಾನ ಎಂದರೆ ಕಾನೂನುಗಳ ಸಮ್ಮಿಲನವೇ ಸಂವಿಧಾನ. ಶಾಸಕಂಗ ಕಾರ್ಯಾಂಗ ನ್ಯಾಯಾಂಗದಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಸಹ ಸಂವಿಧಾನದ ಬಗ್ಗೆ ಪೂರ್ಣವಾಗಿ ತಿಳಿದುಕೊಂಡಿರಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಇ ಸ್ವತ್ತು ಯೋಜನೆ ಸೇರಿದಂತೆ ಅನೇಕ ಸೌಲಭ್ಯಗಳ ಮಾಹಿತಿಯ ಬಗ್ಗೆ ಹಾಗೂ ಕಾನೂನಿನ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸಲು ಫೆ.27 ರಿಂದ ಏಪ್ರಿಲ್ ತಿಂಗಳ ಅಂತ್ಯದ ವರೆಗೂ 2 ತಿಂಗಳ ಹಲವು ಶಾಲಾ ಕಾಲೇಜುಗಳಲ್ಲಿ ಮತ್ತು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇವೆ. ನಂತರ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಶಿವಮೊಗ್ಗದ ಡಾ।। ಬಿ ಆರ್ ಅಂಬೇಡ್ಕರ್ ಭವನದಲ್ಲಿ ಮಾನವ ಹಕ್ಕುಗಳ ಮತ್ತು ಸಂವಿಧಾನ, ಹಕ್ಕುಗಳ ಜಾಗೃತಿಗಾಗಿ ವಿಶ್ವ ಮಾನವ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದರು

ಸಂಜೆ 4 ಘಂಟೆಗೆ ಸರಿಯಾಗಿ ಡಾ।। ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಇರುವ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆನೀಡಲಾಗುತ್ತದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಿಪಿಐ ರಾಜ್ಯ ಮಂಡಳಿ ಸದಸ್ಯರು ಹಾಗೂ ಹಿರಿಯ ಕಾರ್ಮಿಕ ಮುಖಂಡರಾದ ಡಿ ಸಿ ಮಾಯಣ್ಣನವರು ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷರಾದ ಬಿ ಎನ್ ರಾಜು ರವರು ವಹಿಸಲಿದ್ದಾರೆ. ಈ ವೇಳೆ ಸರ್ ಎಂ ವಿ ಕಾಲೇಜು ಭದ್ರಾವತಿಯ ನಿವೃತ್ತ ಪ್ರಾಧ್ಯಾಪಕರಾದ ಎಂ ಚಂದ್ರು ಶೇಖರ್ರವರು ಮಾನವ ಹಕ್ಕುಗಳು ಹಾಗು ಸಂವಿಧಾನದ ಕುರಿತಾಗಿ ಉಪನ್ಯಾಸವನ್ನು ನೀಡಲಿದ್ದಾರೆ ಎಂದರು.
ಏಪ್ರಿಲ್ ತಿಂಗಲಿನಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೆರವೇರಿಸಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
SUMMARY | We will hold the event on February 27 at 4 pm at rotary community hall near New Town police station in Bhadravathi said B N Raju, chairman of the committee.
KEYWORDS | Bhadravathi, rotary community, constitution, shivamogga,