Thursday, 22 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
INFORMATION NEWS

ಮೇ ತನಕ ಶಿವಮೊಗ್ಗದಲ್ಲಿ ಬಿಸಿಗಾಳಿ ಅಬ್ಬರ | ಎಚ್ಚರಿಕೆಯ ಸಲಹೆ ಜೊತೆ ಡಿಸಿ ಮಹತ್ವದ ಸೂಚನೆ | ಮಿಸ್‌ ಮಾಡದೇ ಓದಿ

13
Last updated: March 16, 2025 3:38 pm
13
Share
SHARE

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 16, 2025 ‌‌ ‌‌

vijayakarnaka

ಶಿವಮೊಗ್ಗದಲ್ಲಿಯು ಬಿಸಿಲು ಹೆಚ್ಚಾಗುತ್ತಿದೆ. ಆಗುಂಬೆಯಲ್ಲಿಯೇ ಗರಿಷ್ಟ ಉಷ್ಣಾಂಶ ದಾಖಲಾರ್ಹ ಬದಲಾವಣೆ ಕಂಡಿದೆ. ಇನ್ನೂ ಬಿಸಿಲಿನಿಂದ ಆರೋಗ್ಯದಲ್ಲಿ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸಲಹೆಯನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಪ್ರಮುಖ ಸಲಹೆ ಸೂಚನೆಗಳನ್ನು ನೀಡಿದ್ದಾರೆ. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸುವ ಮೂಲಕ ತಮ್ಮ ಆರೋಗ್ಯದ ಕಾಳಜಿ ವಹಿಸಬೇಕು 

ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ. 

ಮೇವರೆಗೆ ಬೀಸಲಿದೆ ಬಿಸಿಗಾಳಿ

ಮಾರ್ಚ್‌ನಿಂದ ಮುಂಧಿನ ಮೇ ತಿಂಗಳವರೆಗೆ ವಾತಾವರಣದಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ. ಇದರಿಂದಾಗಿ ವಾತಾವರಣದಲ್ಲಿ ಅನೇಕ ರೀತಿಯ ಬದಲಾವಣೆ ಉಂಟಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.ಈಗಾಗಲೇ ದಿನೇ ದಿನೇ ಸಾರ್ವಜನಿಕರು ಕೆಲಸದ ಒತ್ತಡದ ಜೊತೆಗೆ ಬಿಸಿಲಿನ ಬೇಗೆಯನ್ನು ಸಹಿಸಿಕೊಳ್ಳದ ಸ್ಥಿತಿಗೆ ತಲುಪಿದ್ದಾರೆ. ಇದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗುತ್ತಿದ್ದಾರೆ 

ಜಿಲ್ಲಾಡಳಿತದ ಸಲಹೆ ಸೂಚನೆ

ಬಾಯಾರಿಕೆ ನಿರ್ಜಲೀಕರಣದ ಲಕ್ಷಣವಾಗಿದ್ದು. ಪ್ರಯಾಣ ಮಾಡುವ ಸಮಯದಲ್ಲಿ ಹಾಗೂ ಬಾಯಾರಿಕೆ ಇಲ್ಲದಿದ್ದರೂ ಸಹ ಹೆಚ್ಚೆಚ್ಚು ನೀರನ್ನು ಆಗಾಗ್ಗೆ ಕುಡಿಯಬೇಕು. 

ಮನೆಯಲ್ಲಿಯೇ ಸಿದ್ದಪಡಿಸಿದ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ/ಲಸ್ಸಿ, ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸಬೇಕು. 

vijayakarnaka

ಈ ಋತುಮಾನದಲ್ಲಿ ಲಭ್ಯವಿರುವ ಹೆಚ್ಚಿನ ನೀರಿನಾಂಶ ಹೊಂದಿರುವ ಹಣ್ಣು ಹಾಗೂ ತರಕಾರಿಗಳನ್ನು ಸೇವಿಸಬೇಕು. ಇದರಿಂದ ದೇಹವು ಒಣಗದೆ ಚರ್ಮವು ಸದಾ ತ್ವಚ್ಛೆಯಿಂದ ಕೂಡಿರುತ್ತದೆ. 

ಧರಿಸುವ ಬಟ್ಟೆಗಳು ಕೂಡ ದೇಹದ ಸುರಕ್ಷತೆಗೆ ಬಹುಮುಖ್ಯವಾಗಿದೆ. ಇಂತಹ ತಾಪಮಾನದಲ್ಲಿ ತಿಳಿ ಬಣ್ಣದ, ಅಳಕವಾದ ಹತ್ತಿಯ ಬಟ್ಟೆಯನ್ನು ಧರಿಸಬೇಕು. ಹೊರ ಹೋಗುವ ಸಂದರ್ಭದಲ್ಲಿ ಛತ್ರಿ, ಟೋಪಿ, ಟವೆಲ್ ಅಥವಾ ಇನ್ನಾವುದೇ ಸಂಪ್ರಾದಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ಪಡೆಯಬೇಕು. ಈ ಸಂದರ್ಭದಲ್ಲಿ ಚಪ್ಪಲಿ/ ಶೂಸ್‌ಗಳನ್ನು ಧರಿಸಬೇಕು.

ಬಿಸಿಲಿನಲ್ಲಿ ಅಂದರೆ 12 ರಿಂದ 3 ಗಂಟೆಗೆ ಹೊರ ಹೋಗುವುದನ್ನು ತಪ್ಪಿಸಬೇಕು. ಚಪ್ಪಲಿ ಧರಿಸಿ ಹೊರ ಹೋಗಬೇಕು. ಮಧ್ಯಾಹ್ನ ಅಡುಗೆ ಸಿದ್ದಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲನ್ನು ತೆರದಿಡಿ, ಮಧ್ಯಾಹ್ನ ಟೀ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇದರಿಂದ ದೇಹವನ್ನು ನಿರ್ಜಲೀಕರಣಗೊಳಿಸುತ್ತದೆ ಅಥವಾ ಹೊಟ್ಟೆ ನೋವು ಉಂಟು ಮಾಡುತ್ತದೆ.

ಉಷ್ಣತೆಯ ಪರಿಣಾಮದಿಂದಾಗುವ ಆರೋಗ್ಯ ಸಮಸ್ಯೆಗಳು 

ಮನುಷ್ಯನ ದೇಹವು ನೀರಿನಿಂದ ಕೂಡಿದ್ದು, ದಿನವಿಡಿ ಸಕ್ರಿಯವಾಗಿರಲು, ದೇಹದ ತ್ವಚ್ಛೆಗಾಗಿ ನೀರು ಅತ್ಯವಶ್ಯ. ಹಾಗಾಗಿ ಈ ಬಿಸಿಯ ಧಗೆಯಲ್ಲಿ ದೇಹಕ್ಕೆ ಅಗತ್ಯಕ್ಕಿಂತ ಹೆಚ್ಚಿನ ನೀರನ್ನು ಪೂರೈಸಬೇಕು. ಇಲ್ಲದಿದ್ದರೆ ಅತಿಯಾದ ಉಷ್ಣತೆಯಿಂದಾಗಿ ಸಾಧಾರಣದಿಂದ ತ್ರೀವ ಜ್ವರ, ಗಂಧೆಗಳು, ಊತಗಳು, ಸ್ನಾಯು ಸೆಳೆತಗಳು, ಪ್ರಜ್ಞೆ ತಪ್ಪುವುದು, ಉಷ್ಣತೆಯಿಂದ ಸುಸ್ತಾಗುವುದು ಹಾಗೂ ಉಷ್ಣತೆಯಿಂದ ಪಾಶ್ವವಾಯು ಉಂಟಾಗುತ್ತದೆ.

ಉಷ್ಣತೆ ತೀವ್ರತೆಗೆ ಹೃದ್ರೋಗ ಸಮಸ್ಯೆಗಳು, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಅಧಿಕವಾಗುತ್ತದೆ. ಜೊತೆಗೆ ಅತಿಯಾದ ಶಾಖದಿಂದ ತಲೆ ಸುತ್ತುವುದು, ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ತಲೆನೋವು, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ.

ನವಜಾತ ಶಿಶುಗಳು, ಗರ್ಭಿಣಿಯರು, ವೃದ್ದರು ಎಚ್ಚರ

ಬಿಸಿಗಾಳಿಯ ಒತ್ತಡ ಹಾಗೂ ಬಿಸಿ ಗಾಳಿಗೆ ಸಂಬಂಧಪಟ್ಟ ಆರೋಗ್ಯ ಸಮಸ್ಯೆಗಳಿಂದ ಎಲ್ಲರಿಗೂ ಅಪಾಯವಿದ್ದು, ನವಜಾತ ಶಿಶುಗಳು ಹಾಗೂ ಚಿಕ್ಕಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು, ಆರೋಗ್ಯ ಸಮಸ್ಯೆಗಳಿರುವವರು ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗೂರಕತೆಯಿಂದರಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. 

ಪ್ರತ್ಯೇಕವಾಗಿ/ ಒಂಟಿಯಾಗಿ ವಾಸಿಸುವ ವೃದ್ಧರು ಅಥವಾ ರೋಗಿಗಳ ಉಸ್ತುವಾರಿ ಹಾಗೂ ಅವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ದೈನಂದಿನವಾಗಿ ಕೈಗೊಳ್ಳಬೇಕು. ಮನೆಯ ಒಳಾಂಗಣವನ್ನು ತಣ್ಣಗಿರಿಸಲು ಪರದೆಗಳು/ ಷಟರ್‌ಗಳನ್ನು ಬಳಸಬೇಕು ಹಾಗೂ ರಾತ್ರಿ ಸಮಯದಲ್ಲಿ ಕಿಟಿಕಿಗಳನ್ನು ತೆರೆದಿಡಬೇಕು. ಹಗಲು ಹೊತ್ತಿನಲ್ಲಿ ಮನೆಯ ಕೆಳಗಿನ ಮಹಡಿಗಳಲ್ಲಿರುವುದು ಉತ್ತಮ, ಶರೀರವನ್ನು ತಣ್ಣಗಿಡಲು ಫ್ಯಾನ್ ಅಥವಾ ತೇವವಾದ ಬಟ್ಟೆಯನ್ನು ಬಳಸಬಹುದು. 

 

ಉಷ್ಣತೆಯಿಂದ ಆರೋಗ್ಯ ಸಮಸ್ಯೆ ತಡೆಗಟ್ಟುವುದು

ಅತಿಯಾದ ಉಷ್ಣತೆಯಿಂದ ಆರೋಗ್ಯ ಸಮಸ್ಯೆ ಉಂಟಾದರೆ ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ, ತಕ್ಷಣವೇ ಸಹಾಯ ಹಾಗೂ ವೈದ್ಯಕೀಯ ನೇರವನ್ನು ಪಡೆಯಿರಿ. ದೇಹದ ಉಷ್ಣತೆಯನ್ನು ಪರೀಕ್ಷಿಸಿ. ಮಾಂಸಖಂಡಗಳಲ್ಲಿ ಸೆಳೆತ ಕಂಡಬಂದಲ್ಲಿ ತಕ್ಷಣವೇ ತಂಪಾದ ಸ್ಥಳದಲ್ಲಿ ವಿಶ್ರಾಂತಿ ಪಡೆಯಿರಿ ಹಾಗೂ ಹೆಚ್ಚು ಎಲೆಕ್ಟೊಲೈಟ್ ಗಳನ್ನು ಹೊಂದಿದ ಮೌಖಿಕ ಪುನರ್ಜಲೀಕರಣ ದ್ರಾವಣಗಳನ್ನು ಸೇವಿಸಬೇಕು. ಅತಿಯಾದ ಉಷ್ಣತೆಯಿಂದ ಉಂಟಾಗುವ ಸ್ನಾಯು ಸೆಳೆತವು 1 ಗಂಟೆಯ ಅವಧಿಯಲ್ಲಿ ಶಮನಗೊಳ್ಳದಿದ್ದರೆ ವೈದ್ಯಕೀಯ ನೆರವನ್ನು ಪಡೆಯಬೇಕು. 

ಹೊರಾಂಗಣ ಚಟುವಟಿಕೆಗಳನ್ನು ಆದಷ್ಟು ದಿನದ ತಣ್ಣನೆಯ ಸಮಯದಲ್ಲಿ ಅಂದರೆ ಬೆಳಗಿನ ಹೊತ್ತು ಅಥವಾ ಸಂಜೆಗೆ ಸೀಮಿತವಿರುವಂತೆ ಬದಲಾಯಿಸಿಕೊಳ್ಳಬೇಕು. ಹೊರಾಂಗಣ ಪ್ರದೇಶಗಳಲ್ಲಿ ಆಯೋಜಿಸಲಾಗುವ ಚಟುವಟಿಕೆಗಳು ಪೂರ್ವಾಹ್ನ 11 ಗಂಟೆಯ ಒಳಗೆ ಮುಕ್ತಾಯಗೊಳಿಸುವುದು ಉತ್ತಮ. ಪೂರ್ವಾಹ್ನ 11 ರಿಂದ ಸಂಜೆ 4 ಗಂಟೆ ಅವಧಿಯಲ್ಲಿ ಹೊರಾಂಗಣ ಸಭೆಗಳು/ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಲಿನಿಂದ ರಕ್ಷಣೆ ನೀಡಲು ಅಗತ್ಯ ಶಾಮಿಯಾನ ವ್ಯವಸ್ಥೆ ಮಾಡುವುದು. ಉತ್ತಮ ಗಾಳಿ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಬೇಕು. ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು.

ಸದಾ ಎಚ್ಚರದಿಂದಿರಿ :

ರೇಡಿಯೋ, ದೂರರ್ಶನ ಹಾಗೂ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿಯನ್ನು ಪಡೆದು ಅದರಂತೆ ಚಟುವಟಿಕೆಗಳನ್ನು ಯೋಜಿಸುವುದು ಉತ್ತಮ. ಈ ಕುರಿತು ಕಾಲಕಾಲಕ್ಕೆ ಮಾಹಿತಿಯನ್ನು ಕರ್ನಾಟಕ ಸ್ಟೇಟ್ ನ್ಯಾಚುರಲ್ ಡಿಸ್ಸಾಸ್ಟರ್ ಮಾನಿಟರಿಂಗ್ ಸೆಂಟರ್‌ನ ಜಾಲತಾಣ https://www.ksdmc.org/default.aspx ದಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

malenadutoday add
Share This Article
Email Copy Link Print
Previous Article ಇವತ್ತು ಭದ್ರಾವತಿಯ ಹಲವೆಡೆ ಪವರ್‌ ಕಟ್‌ | ನಾಳೆ ಶಿವಮೊಗ್ಗದಲ್ಲಿ ಇಲ್ಲೆಲ್ಲಾ ಕರೆಂಟ್‌ ಇರಲ್ಲ
Next Article ನಮಾಜ್‌ ಮುಗಿಸುವಷ್ಟರಲ್ಲಿ ₹29 ಲಕ್ಷ ಕಳ್ಳತನ ಕೇಸ್‌ | ರಂಜದಕಟ್ಟೆ ಮಸೀದಿ ಬಳಿ ನಡೆದ ಕ್ರೈಂ 6 ಗಂಟೆಯಲ್ಲಿ ಇತ್ಯರ್ಥ | ಹೊನ್ನಾಳಿಯ ಮೂವರು ಅರೆಸ್ಟ್‌
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ಇವತ್ತು ಅರ್ಧದಿನ ಅರ್ಧ ಶಿವಮೊಗ್ಗ ಕರೆಂಟ್‌ ಇರಲ್ಲ | ನಾಳೆ 30 ಕ್ಕೂ ಹೆಚ್ಚು ಪ್ರಮುಖ ಸ್ಥಳಗಳಲ್ಲಿಯೇ ಪವರ್‌ ಕಟ್

By 13
suvarna news information news
INFORMATION NEWS

BIG NEWS | ರಾಜ್ಯದಲ್ಲಿರುವ ಎರಡು ಗ್ರಾಮೀಣ ಬ್ಯಾಂಕ್ ವೀಲಿನ | ಈ ಮಾಹಿತಿ ಬಹುಮುಖ್ಯ

By 13

ಶಿವಮೊಗ್ಗದ ಆರಾಧನ ಆರ್ಥೋ ಪೆಡಿಕ್‌ ಆಸ್ಪತ್ರೆಯಲ್ಲಿ ಸಿಗಲಿದೆ ರೋಬೋಟಿಕ್‌ ಮೂಳೆ ಕೀಲು ಶಸ್ತ್ರ ಚಿಕತ್ಸೆ

By 131

30 ದಿನಗಳಲ್ಲಿ ಉಚಿತವಾಗಿ ಫೋಟೊಗ್ರಫಿ & ವಿಡಿಯೋಗ್ರಫಿ ಕಲಿಯುವ ಚಾನ್ಸ್‌ | ಇಲ್ಲಿದೆ ಪೂರ್ತಿ ಡಿಟೇಲ್ಸ್‌

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up