SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 25, 2025

ಶಿವಮೊಗ್ಗ | ಸಂವಿಧಾನ ಬದಲಾಯಿಸುತ್ತೇವೆ ಎನ್ನುವ ಡಿ.ಕೆ ಶಿವಕುಮಾರ್ ಹೇಳಿಕೆಯನ್ನು ವಿರೋಧಿಸಿ ಇಂದು ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಶಾಸಕ ಎಸ್ ಎನ್ ಚೆನ್ನಬಸಪ್ಪ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಈ ವೇಳೆ ಶಿವಪ್ಪನಾಯಕ ವೃತ್ತದಲ್ಲಿ ಡಿಕೆ ಶಿವಕುಮಾರ್ ರವರ ವಿರುದ್ಧ ಘೋಷಣೆ ಕೂಗಿದರು. ಅಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷದ ಪ್ರತಿಕೃತಿ ಹಾಗೂ ಡಿಕೆ ಶಿವಕುಮಾರ್ ಭಾವಚಿತ್ರ ದಹಿಸಿ ಕಾರ್ಯಕರ್ತರು ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಎಸ್ ಎನ್ ಚೆನ್ನಬಸಪ್ಪ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬೆಲೆ ಏರಿಕೆಗೆ ಹೋರಾಟ ಮಾಡಬೇಕು, ಎಸ್ ಸಿ ಎಸ್ ಎಸ್ಟಿ ಅವರಿಗೆ ಅನ್ಯಾಯವಾಗಿದೆ ಎಂದು ಹೊರಟ ಮಾಡಬೇಕು. ಕಾಂಗ್ರೆಸ್ ಆಡಳಿತದಲ್ಲಿ ಯಾವ ಹಣ ಎಲ್ಲಿಗೆ ಬೇಕಾದರೂ ಉಪಯೋಗವಾಗುವಂತಹ ಸ್ಥಿತಿ ನಿರ್ಮಾಣವಾಗುತ್ತದೆ. ಇದಕ್ಕೆಲ್ಲಾ ನ್ಯಾಯ ಸಿಗುತ್ತದೆ ಎಂದು ನಾವು ಆದಿವೇಶನದಲ್ಲಿ ಹೋರಾಟ ಮಾಡಿದರೆ ಅಲ್ಲಿಯೂ ಸಹ ಕಾಂಗ್ರೆಸ್ ಸಂವಿದಾನ ವಿರೋಧಿ ನಡೆಗಳನ್ನು ತೋರುತ್ತಿದೆ. ಒಟ್ಟಾರೆಯಾಗಿ ಕಾಂಗ್ರೆಸ್ ಅಧಿಕಾರದ ಪಿತ್ತ ನೆತ್ತಿಗೇರಿಸಿಕೊಂಡು ಅಹಂಕಾರದ ಮಾತುಗಳನ್ನು ಆಡುತ್ತಿದೆ ಎಂದರು.
ಮಾತೆತ್ತಿದರೆ ನಾವು 136 ಜನ ಗೆದ್ದು ಅಧಿಕಾರಕ್ಕೆ ಬಂದಿದ್ದೇವೆ ಎಂದು ಹೇಳುತ್ತಾರೆ. ನೀವು 136 ಜನ ಗೆದ್ದಿದ್ದಕ್ಕೆ ಇಂದು ನಾಗರೀಕರು ಬೀದಿಗಿಳಿದು ಹೋರಾಟ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಡಿಗೆ ಸಿಬ್ಬಂದಿ ಆಶಾಕಾರ್ಯಕರ್ತೆಯರೆಲ್ಲ ಇಂದು ಹೋರಾಟ ಮಾಡುತ್ತಿದ್ದಾರೆ. ನಿಮ್ಮ ಬಳಿ ಅವರಿಗೆ ನೀಡಲು ಹಣವಿಲ್ಲ. ಇದೆಲ್ಲದರ ನಡುವೆ ಈಗ ಧರ್ಮಾಧಾರಿತ ಮೀಸಲಾತಿಯನ್ನು ನೀಡಲು ಹೊರಟಿದ್ದೀರಿ. ಯಾವ ಸಂವಿಧಾನದಲ್ಲೂ ಸಹ ಧರ್ಮಾಧಾರಿತ ಮೀಸಲಾತಿ ನೀಡಲು ಅವಕಾಶವಿಲ್ಲ. ಆದರೂ ಸಹ ಸಂವಿದಾನ ವಿರುದ್ಧವಾಗಿ ನೀವು ನಡೆದುಕೊಳ್ಳುತ್ತಿದ್ದೀರಾ. ಅಷ್ಟೇ ಅಲ್ಲದೆ ಡಿಕೆ ಶಿವಕುಮಾರ್ ರವರು ಮುಸ್ಲಿಮರಿಗೆ ಮೀಸಲಾತಿಯನ್ನು ನೀಡುವ ಸಲುವಾಗಿ ಸಂವಿಧಾನವನ್ನು ಬದಲಾಯಿಸುವುದಾಗಿ ಹೇಳಿದ್ದಾರೆ. ನೀವು ಬಹುಮತದಿಂದ ಅಧಿಕಾರಕ್ಕೆ ಬಂದ ಮಾತ್ರಕ್ಕೆ ರಾಜ್ಯದಲ್ಲಿ ಏನು ಬೇಕೂ ಅದನ್ನು ಮಾಡಲು ಬಿಜೆಪಿ ಬಿಡುವುದಿಲ್ಲ ಎಂದರು.
SUMMARY | The District BJP staged a massive protest at Shivappanayaka Circle in Shivamogga city against DK Shivakumar’s statement that he would change the Constitution.
KEYWORDS | District BJP, DK Shivakumar, statement, Constitution,