Thursday, 22 May 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • DISTRICT
  • JP STORY
  • RAIN NEWS LIVE
  • BHADRAVATI
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

ಶಿವಮೊಗ್ಗ ಯೂತ್‌ ಕಾಂಗ್ರೆಸ್‌ನಲ್ಲಿ ಮಹಾ ಬದಲಾವಣೆ | ಪ್ರತಿಷ್ಟೆಯ ಎಲೆಕ್ಷನ್‌ನಲ್ಲಿ ಗೆದ್ದೋರು ಯಾರು ಗೊತ್ತಾ?!

13
Last updated: February 10, 2025 9:51 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 10, 2025 ‌‌ 

vijayakarnaka

ಶಿವಮೊಗ್ಗ | ವಿಶೇಷ ಕುತೂಹಲಕ್ಕೆ ಕಾರಣವಾಗಿದ್ದ ಯೂತ್‌ ಕಾಂಗ್ರೆಸ್‌ ಪದಾಧಿಕಾರಿಗಳ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಈ ಪೈಕಿ ಯೂತ್‌ ಕಾಂಗ್ರೆಸ್‌ ಶಿವಮೊಗ್ಗ ಜಿಲ್ಲೆಯ ಅಧ್ಯಕ್ಷರಾಗಿ ಹರ್ಷಿತ್ ಗೌಡ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಮಾಹಿತಿ ಹಂಚಿಕೊಳ್ಳುವ ಸಲುವಾಗಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನೂತನ ಯುವ ಕಾಂಗ್ರೆಸ್‌ನ ಪದಾಧಿಕಾರಿಗಳು ಸುದ್ದಿಗೋಷ್ಟಿ ನಡೆಸಿದರು. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಹರ್ಷಿತ್‌ ಗೌಡ 

ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಹರ್ಷಿತ್‌ಗೌಡ ಪಕ್ಷದ ಸೂಚನೆ, ಪಕ್ಷದ ಮುಖಂಡರ ಸಲಹೆ ಮತ್ತು ಜಿಲ್ಲಾಧ್ಯಕ್ಷರ ಅಣತಿಯಲ್ಲಿ ಪಕ್ಷದ ಸಂಘಟನೆಯಲ್ಲಿ ಕೆಲಸ ನಿರ್ವಹಿಸುದಾಗಿ ತಿಳಿಸಿದರು. ಆಗಸ್ಟ್‌ ನಿಂದ ಆರಂಭವಾದ ಚುನಾವಣೆ ಪ್ರಕ್ರಿಯೆ ಸೆಪ್ಟೆಂಬರ್‌ವರೆಗೂ ನಡೆಯಿತು, ಬಳಿಕ ಈ ವರ್ಷ ಜನವರಿಯಲ್ಲಿ ಎಣಿಕೆ ಆರಂಭವಾಗಿ, ಫೆಬ್ರವರಿಯಲ್ಲಿ ಫಲಿತಾಂಶ ಹೊರಬಿದ್ದಿದ್ದು ಹೆಚ್ಚಿನ ಮತಗಳಿಂದ ಮತದಾರರು ತಮ್ಮನ್ನ ಗೆಲ್ಲಿಸಿದ್ದಾರೆ. ಮತ ನೀಡಿದವರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು. 

vijayakarnaka

ಯೂತ್‌ ಕಾಂಗ್ರೆಸ್‌ ಚುನಾವಣೆಯು ಪಕ್ಷದ ಆತಂರಿಕ ಚುನಾವಣೆಯಾಗಿದ್ದು, ಗೆದ್ದವರು ಹಾಗೂ ಸೋತವರು ಒಗ್ಗಟ್ಟಿನಿಂದ ಇಲ್ಲಿ ಕೆಲಸ ಮಾಡುತ್ತಾರೆ. ಎನ್‌ಎಸ್‌ಯುಐ ಹಾಗೂ ಯೂತ್‌ ಕಾಂಗ್ರೆಸ್‌ ಪಕ್ಷದ ಬೇರಾಗಿದ್ದು, ಅಧಿಕಾರ ಸಿಕ್ಕರೂ ಸಿಗದ್ದಿದ್ದರೂ ಈ ಸಂಘಟನೆಗಳಿಂದ ಬಂದವರು ಪಕ್ಷಕ್ಕಾಗಿ ನಿಷ್ಟೆಯಿಂದ ಕೆಲಸ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಎನ್‌ಎಸ್‌ಯುಐ ಹಾಗೂ ಯೂತ್‌ ಕಾಂಗ್ರೆಸ್‌ ಕಾಂಗ್ರೆಸ್‌ ಪಕ್ಷದ ದೊಡ್ಡ ಶಕ್ತಿಯಾಗಿದೆ.ಸಂಘಟನೆಯಲ್ಲಿ ಇವರುಗಳ ಶ್ರಮ ಪಕ್ಷಕ್ಕೆ ಮತ್ತಷ್ಟು ಶಕ್ತಿ ನೀಡಲಿದೆ.

ಆರ್‌ ಪ್ರಸನ್ನ ಕುಮಾರ್‌, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು

ಯೂತ್‌ ಕಾಂಗ್ರೆಸ್‌ ಇತಿಹಾಸದಲ್ಲಿಯೆ ದೊಡ್ಡ ಸಾಧನೆ 

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‍ನ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಹರ್ಷಿತ್ ಗೌಡ ಒಟ್ಟಾರೆ, 33,408 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಹರ್ಷಿತ್ ಗೌಡ ಮತ್ತು ಹಿಂದಿನ ಅಧ್ಯಕ್ಷರಾಗಿದ್ದ ಹೆಚ್.ಪಿ. ಗಿರೀಶ್ ನಡುವೆ ಪೈಪೋಟಿ ನಡೆದಿತ್ತು. ಅಂತಿಮವಾಗಿ ಹರ್ಷಿತ್ ಗೌಡ 48,473 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೆ 2ನೇ ಸ್ಥಾನ ಪಡೆದ ಹೆಚ್.ಪಿ. ಗಿರೀಶ್ 15,065 ಮತಗಳನ್ನು ಪಡೆದು ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್‍ನ ಚುನಾವಣೆಯ ಇತಿಹಾಸದಲ್ಲೇ ಇದು ಭಾರೀ ಮತಗಳ ಅಂತರವಾಗಿದೆ ಎಂದು ಯೂತ್‌ ಕಾಂಗ್ರೆಸ್‌ ಮೂಲಗಳು ತಿಳಿಸಿವೆ. 

ಹೇಗೆ ನಡೆದಿತ್ತು ಯೂತ್‌ ಕಾಂಗ್ರೆಸ್‌ ಚುನಾವಣೆ

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‍ನ ಚುನಾವಣಾ ಪ್ರಕ್ರಿಯೆಯು 2024ರ ಆಗಸ್ಟ್ 20ರಿಂದ ಸೆಪ್ಟಂಬರ್ 22ರ ವರೆಗೆ ನಡೆದಿದ್ದು, ಜಿಲ್ಲೆಯಲ್ಲಿ ಒಟ್ಟು 1,22,144 ಮತದಾರರು ನೋಂದಣಿಯಾಗಿದ್ದರು. ಇದರಲ್ಲಿ ತಿರಸ್ಕೃತ ಮತಗಳನ್ನು ಹೊರತುಪಡಿಸಿ,  ಅಂತಿಮವಾಗಿ 64,081 ಅರ್ಹ ಮತದಾರರು ಉಳಿದಿದ್ದರು. ಯುವ ಕಾಂಗ್ರೆಸ್‍ನ ರಾಜ್ಯಾಧ್ಯಕ್ಷರ ಚುನಾವಣಾ ಫಲಿತಾಂಶ ಬಾಕಿ ಇದ್ದು, ಚುನಾವಣಾ ಫಲಿತಾಂಶದ ನಂತರ ಜಿಲ್ಲಾ ಯುವ ಕಾಂಗ್ರೆಸ್‍ನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭವನ್ನು ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಮ್ಮುಖದಲ್ಲಿ ನಡೆಯಲಿದೆ.

ಯಾರ್ಯಾರು ಎಲ್ಲೆಲ್ಲಿಗೆ ಅಧ್ಯಕ್ಷರು?!

  1. ಉಳಿದಂತೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಚರಣ್ ಜೆ. (10,241) ಪ್ರಥಮ ಉಪಾದ್ಯಕ್ಷರಾಗಿ ಲೋಕೇಶ್ ಬಿ. (3266), ದ್ವಿತೀಯ ಉಪಾಧ್ಯಕ್ಷರಾಗಿ ವಿನಯ್ ತಾಂಡ್ಲೆ (824)
  2. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಎಸ್. (6,478) ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಿತಿನ್ ಈ.ಟಿ. (2,365) ಆಯ್ಕೆಯಾಗಿದ್ದಾರೆ.
  3. ಭದ್ರಾವತಿ ವಿಧಾನಸಭಾ ಕ್ಷೇತ್ರದ ಯೂತ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಮಹಮ್ಮದ್ ಶಫಿ (12,105), ಉಪಾಧ್ಯಕ್ಷರಾಗಿ ಅಲ್ತಾಫ್ ಅಹ್ಮದ್ (2,727) ಆಯ್ಕೆಯಾಗಿದ್ದಾರೆ.
  4. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಅನ್ವಯಿಸಿದಂತೆ ಯೂತ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಪೂರ್ಣೇಶ್ ಜಿ.ಪಿ. (6,200), ಉಪಾಧ್ಯಕ್ಷರಾಗಿ ಸಂದೀಪ್ ಗೌಡ ಬಿ.ಜಿ. (1,563) ಆಯ್ಕೆಯಾಗಿದ್ದಾರರೆ. 
  5. ಸಾಗರ ವಿಧಾನಸಭಾ ಕ್ಷೇತ್ರದ ಯೂತ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ಮಹೇಂದ್ರ ಹೆಚ್.ಜಿ. (1,528), ಉಪಾಧ್ಯಕ್ಷರಾಗಿ ಉಮೇಶ ಜಿ. (898) ಆಯ್ಕೆಯಾಗಿದ್ದಾರೆ.
  6. ಶಿಕಾರಿಪುರ ವಿಧಾನಸಭಾ ಕ್ಷೇತ್ರಕ್ಕೆ ಅಧ್ಯಕ್ಷರಾಗಿ ಮಂಜುನಾಯ್ಕ (9,196), ಉಪಾಧ್ಯಕ್ಷರಾಗಿ ಸಾಜಿದ್ ಆಲಿ (2,214) ಆಯ್ಕೆಯಾಗಿದ್ದಾರೆ. 
  7. ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ (403), ಉಪಾಧ್ಯಕ್ಷರಾಗಿ ಪ್ರದೀಪ್ ಕುಮಾರ್ (205) ಆಯ್ಕೆಯಾಗಿದ್ದಾರೆ.

ಬ್ಲಾಕ್‌ ಅಧ್ಯಕ್ಷರ ಆಯ್ಕೆ

ಶಿವಮೊಗ್ಗ ಜಿಲ್ಲೆಯ ಬ್ಲಾಕ್ ಅಧ್ಯಕ್ಷರುಗಳಾಗಿ ಹದಿನಾಲ್ಕು ಜನ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಉತ್ತರ ಬ್ಲಾಕ್ ಅಧ್ಯಕ್ಷರಾಗಿ ಗಿರೀಶ್, ದಕ್ಷಿಣ ಬ್ಲಾಕ್‍ಗೆ ಮಹಮ್ಮದ್ ಗೌಸ್, ಶಿವಮೊಗ್ಗ ಗ್ರಾಮಾಂತರ  ವಿಧಾನಸಭಾ ಕ್ಷೇತ್ರದ ಹೊಳೆಹೊನ್ನೂರು ಬ್ಲಾಕ್‍ಗೆ ಪ್ರವೀಣ್ ಕುಮಾರ್ ಡಿ.ಟಿ., ಶಿವಮೊಗ್ಗ ಗ್ರಾಮಾಂತರ ಬ್ಲಾಕ್ ಶಶಿಕುಮಾರ್ ಕೆ., ಭದ್ರಾವತಿ ಕ್ಷೇತ್ರದ ಭದ್ರಾವತಿ ನಗರ ಬ್ಲಾಕ್‍ಗೆ ಅಭಿಷೇಕ್ ಜೆ., ಭದ್ರಾವತಿ ಗ್ರಾಮಾಂತರ ಬ್ಲಾಕ್‍ಗೆ ಮಕ್ಸೂದ್ ಅಹ್ಮದ್, ತೀರ್ಥಹಳ್ಳಿ ಕ್ಷೇತ್ರದ ನಗರ ಬ್ಲಾಕ್‍ಗೆ ಶ್ರೇಯಸ್ ರಾವ್, ಗ್ರಾಮಾಂತರ ಬ್ಲಾಕ್‍ಗೆ ರವಿಕುಮಾರ್ ಹೆಚ್.ಡಿ., ಸಾಗರ ಕ್ಷೇತ್ರದ ಸಾಗರ ಬ್ಲಾಕ್‍ಗೆ ಸದ್ದಾಂ ಹುಸೇನ್, ಹೊಸನಗರ ಬ್ಲಾಕ್‍ಗೆ ವಿಜಯಕುಮಾರ್ ಎಂ.ಎನ್., ಸೊರಬ ಕ್ಷೇತ್ರದ ಸೊರಬ ಬ್ಲಾಕ್‍ಗೆ ಯಶೋಧರ, ಆನವಟ್ಟಿ ಬ್ಲಾಕ್‍ಗೆ ಹರೀಶ್, ಶಿಕಾರಿಪುರ ಕ್ಷೇತ್ರದ ಶಿಕಾರಿಪುರ ಬ್ಲಾಕ್‍ಗೆ ಶಿವು ಹೆಚ್.ಎಂ., ಶಿರಾಳಕೊಪ್ಪ ಬ್ಲಾಕ್‍ಗೆ ಮಹಮ್ಮದ್ ಅತಿಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

SUMMARY  | shivamogga youth congress president and  youth congress election result

KEY WORDS |  shivamogga youth congress president, youth congress election result

malenadutoday add
Share This Article
Email Copy Link Print
Previous Article ಮ್ಯಾಟ್ರಿಮೋನಿಯಲ್ಲಿ ಮೋಹಕ್ಕೆ ಬಿದ್ದು ಮೋಸ ಹೋಗದಿರಿ | ವಿಜಯಪುರ ಭೀಮನ 10 ಸ್ಟೇಷನ್‌, 12 ಕೇಸ್‌ ಪ್ರೊಫೈಲ್‌ ಬಿಚ್ಚಿಟ್ಟಿದೆ ಶಿವಮೊಗ್ಗ ಪೊಲೀಸ್‌
Next Article ಸಮೀಪಿಸ್ತಿದೆ ಮಲೆನಾಡ ಮತ್ತೊಂದು ಮೆಗಾ ಇವೆಂಟ್‌ | ಸಿಗಂದೂರು ಸೇತುವೆ ಕಾಮಗಾರಿ! ಅಪ್‌ಡೇಟ್ಸ್‌
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

POLITICS

ಗೃಹಲಕ್ಷ್ಮೀ ಹಣವನ್ನು ಸಾಲದ ಖಾತೆಗೆ ಜಮ ಮಾಡುವಂತಿಲ್ಲ

By 131
POLITICS

ಸಂಸದರು ಹಾಗೂ ಶಾಸಕರ ಹೇಳಿಕೆಗೆ R ಪ್ರಸನ್ನ ಕುಮಾರ್‌ ತಿರುಗೇಟು | ಹೇಳಿದ್ದೇನು

By 131

NON-BAILABLE SUMUTO CASE | ಕೆಎಸ್‌ ಈಶ್ವರಪ್ಪ ಹೇಳಿದ್ದೇನು ಗೊತ್ತಾ?

By 13
POLITICS

ಒಳ ಮೀಸಲಾತಿ ಜಾರಿಗೆ ಆತುರದ ನಿರ್ಧಾರ ಸರಿಯಲ್ಲ | ಡಿ.ಆರ್. ಗಿರೀಶ್

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up