SHIVAMOGGA | MALENADUTODAY NEWS | ಮಲೆನಾಡು ಟುಡೆ | Feb 22, 2025

ಶಿವಮೊಗ್ಗ | ದೇಶದ ಸಂವಿಧಾನಕ್ಕೆ ಗೌರವ ಕೊಟ್ಟರೆ ನಾವು ನಮ್ಮ ಹೆತ್ತ ತಂದೆ ತಾಯಿಗೆ ಗೌರವ ಕೊಟ್ಟಂತೆ, ಈಗ ನಮ್ಮ ದೇಶದಲ್ಲಿ ನಮ್ಮ ಸಂವಿಧಾನ ಉಳಿಸುವುದಕ್ಕಾಗಿ ಹೋರಾಟ ಮಾಡಬೇಕಿದೆ ಎಂದು ಶಿಕ್ಷಣ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.
ಇಂದು ನಗಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ರಕ್ಷಕ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ದೇಶದಲ್ಲಿರುವ ಸಂವಿಧಾನಕ್ಕೆ ಶ್ರೀಮಂತರು ಬಡವರು ಎಂಬ ಬೇಧವಿಲ್ಲ. ಈ ಹಿಂದೆ ಬ್ರಿಟಿಷರಿಂದ ಸ್ವಾತಂತ್ರ್ಯ ಬೇಕೆಂದು ಅನೇಕ ಹೋರಾಟಗಾರರು ಹೋರಾಟ ಮಾಡಿ ಸ್ವಾತಂತ್ರ್ಯವನ್ನು ನಮಗೆ ತಂದುಕೊಟ್ಟರು.

ನಂತರ ಬಾಬಾ ಸಾಹೇಬ್ ಅಂಬೇಡ್ಕರ್ರವರು ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಉತ್ತಮವಾದ ಸಂವಿಧಾನವನ್ನು ರಚನೆ ಮಾಡಿ ನಮಗೆ ನೀಡಿದರು. ಈಗ ದೇಶದಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ನಮ್ಮ ದೇಶದ ಸಾತಂತ್ರ್ಯವನ್ನು ನಾವು ರಕ್ಷಣೆ ಮಾಡಬೇಕಿದೆ. ಈಗ ನಮ್ಮ ದೇಶದಲ್ಲಿ ನಮ್ಮ ಸಂವಿಧಾನ ಉಳಿಸಿ ಎನ್ನುವ ಹೋರಾಟ ಮಾಡಬೇಕಿದೆ. ನಾವು ಸಂವಿಧಾನಕ್ಕೆ ಗೌರವ ಕೊಟ್ಟರೆ ನಮ್ಮ ತಂದೆ ತಾಯಿಗೆ ಗೌರವ ಕೊಟ್ಟಂತೆ ಎಂದರು.
ಈ ಹಿಂದೆ ಪಠ್ಯ ಪುಸ್ತಕ ಕೇಸರಿಕರಣದಿಂದ ತುಂಬಿ ಹೋಗಿತ್ತು. ನಾನು ಅಧಿಕಾರಕ್ಕೆ ಬಂದ ಮೊದಲು ಪಠ್ಯ ಪುಸ್ತಕದಲ್ಲಿದ್ದ ಕೇಸರಿಕರಣ ತೆಗೆದು ಪಠ್ಯ ಪುಸ್ತಕ ಪರಿಷ್ಕರಣೆಗೆ ಸಹಿ ಮಾಡಿದೆ. ಅದರ ಮೂಲಕ ಸಂವಿಧಾನಕ್ಕೆ ಗೌರವ ನೀಡುತ್ತದೆ. ಹಾಗೆಯೇ ರಾಜ್ಯದ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಕಲಿಕೆಯ ಮಾಧ್ಯಮದಲ್ಲಿ ಸಂವಿಧಾನದ ಪೀಠಿಕೆ ಕಡ್ಡಾಯ ಮಾಡಿದ್ದೇನೆ. ದೇಶದ ಎಲ್ಲಾ ಜನರಿಗೂ ಅಧಿಕಾರ ಪಡೆಯುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ. ನಮ್ಮ ಸಂವಿಧಾನವನ್ನು ರಕ್ಷಿಸುವ ಕೆಲಸ ಸಿಕ್ಕಿರುವುದು ನಮ್ಮ ಪುಣ್ಯ. ಸಂವಿದಾನ ರಕ್ಷಣೆ ಮಾಡುವ ಉದ್ದೇಶದಿಂದ ಸಂವಿಧಾನ ರಕ್ಷಕ್ ಅಭಿಯಾನವನ್ನು ಕೈಗೊಂಡಿದ್ದೇವೆ. ಈ ಕಾರ್ಯಕ್ರಮ ನಮ್ಮ ಪಕ್ಷದಿಂದ ಇಡೀ ರಾಜ್ಯದಾದ್ಯಂತ ನಡೆಯುತ್ತದೆ. ಇದಕ್ಕೆ ನಮ್ಮ ಸಹಕಾರ ಯಾವಾಗಲೂ ಇರುತ್ತದೆ ಎಂದರು.
SUMMARY | Education Minister S Madhu Bangarappa said, “If we respect the Constitution of the country, we will have to fight to save our Constitution in our country, just as we respect our parents.
KEYWORDS | Education Minister, S Madhu Bangarappa, Constitution, shivamogga,