Wednesday, 16 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

ಸೊರಬ ತಾಲೂಕಿನಲ್ಲಿ ನೀರಾವರಿ ಬ್ಯಾರೇಜ್‌ಗಳ ನಿರ್ಮಾಣ | ಸಚಿವರ ಮಹತ್ವದ ಮಾತು

131
Last updated: February 14, 2025 8:28 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ

ಶಿವಮೊಗ್ಗ | ವರದಾನದಿಯ ಅಭಿವೃದ್ಧಿಗಾಗಿ ಕೈಗೆತ್ತಿ ಕೊಂಡಿರುವ ಈ ಯೋಜನೆಗಳಿಂದಾಗಿ ತಾಲೂಕಿನ 39 ಗ್ರಾಮಗಳ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು, ಕೆರೆ-ಕಟ್ಟೆ-ಕಾಲುವೆಗಳ ಭರ್ತಿ ಮಾಡಲು ಸಹಕಾರಿಯಾಗಲಿದೆ. ಅಲ್ಲದೆ ಅಂತರ್ಜಲ ಮಟ್ಟ ಹೆಚ್ಚಳವಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಸೊರಬ ತಾಲೂಕಿನ ಕಡಸೂರು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಕಾಗೋಡು, ತಡಗಳಲೆ, ಶುಂಠಿಕೊಪ್ಪ, ಕಡಸೂರು, ಚಿಕ್ಕಮಾಕೊಪ್ಪ ಮತ್ತು ದುಗ್ಲಿ ಗ್ರಾಮಗಲ್ಲಿ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. 

car decor

ಸೊರಬ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ವಿವಿಧ ಗ್ರಾಮಗಳಲ್ಲಿ ಹರಿಯುವ ವರದಾ ನದಿಗೆ ಅಡ್ಡಲಾಗಿ 53 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸರಣಿ ಬ್ಯಾರೇಜ್‌ಗಳ ನಿರ್ಮಾಣ ಕಾಮಗಾರಿಗೆ ಕಡಸೂರಿನಲ್ಲಿ ಹಾಗೂ ಲಕ್ಕವಳ್ಳಿಯ ಜೈನ ಮಠದ ಸಮೀಪದಲ್ಲಿ ಸುಮಾರು 495 ಲಕ್ಷ ರೂ. ಗಳ ವೆಚ್ಚದಲ್ಲಿ ಪ್ರವಾಹದಿಂದ ಬಾದಿತ ಪ್ರದೇಶಕ್ಕೆ ತಡೆಗೋಡೆ ನಿರ್ಮಾಣ ಮತ್ತು ಇತರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ಅವರೊಂದಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು.

ರೈತರ ಹಿತ ಕಾಯುವ ಸಲುವಾಗಿ 900ಕೋಟಿ ಅಂದಾಜು ವೆಚ್ಚದ ದಂಡಾವತಿ ಯೋಜನೆಯ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಅಲ್ಲದೆ 600ಕೋಟಿ ರು. ಗಳ ಅಂದಾಜು ವೆಚ್ಚದಲ್ಲಿ 3 ಪಟ್ಟಣ ಪ್ರದೇಶ ಸೇರಿದಂತೆ 354 ಹಳ್ಳಿಗಳಿಗೆ ಶರಾವತಿಯಿಂದ ಶುದ್ಧ ಕುಡಿಯುವ ನೀರನ್ನು ಒದಗಿಸುವ ಯೋಜನೆ ಅತೀ ಶೀಘ್ರದಲ್ಲಿ ಸಾಕಾರಗೊಳ್ಳಲಿದೆ ಎಂದರು.ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿನ ಕೃಷಿ ಭೂಮಿ ಹಸಿರಾಗಿ ನಳನಳಿಸಲು ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪನವರ ದೂರದೃಷ್ಟಿಯ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುವ ಯೋಜನೆ ಕಾರಣವಾಗಿದೆ. ಇಂತಹ ಯೋಜನೆಗಳು ಇಂದಿಗೂ ಮುಂದುವರೆಯುತ್ತಿವೆ. ರಾಜ್ಯದ ಪ್ರತಿಯೊಬ್ಬರೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ ಎಂಬುದು ಸಂತಸದ ಸಂಗತಿಯಾಗಿದೆ ಎಂದರು.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪಡೆಯುತ್ತಿರುವ ಎಲ್ಲಾ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದ ಅವರು ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಸಕಾಲದಲ್ಲಿ ಪಠ್ಯಪುಸ್ತಕ, ಶೂ-ಸಾಕ್ಸ್,ಗಳನ್ನ ಒದಗಿಸಲಾಗಿದೆಯಲ್ಲದೆ ಅಜೀಮ್ ಪ್ರೇಮ್ ಜಿ ಫೌಂಡೇಶನ್ ನ ಸಹಯೋಗದಲ್ಲಿ 1591 ಕೋಟಿ ಮೊತ್ತದ ನೆರವಿನೊಂದಿಗೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೌಷ್ಟಿಕ ಆಹಾರ, ರಾಗಿ ಮಾಲ್ಟ್, ಹಾಲು, ಮೊಟ್ಟೆಯನ್ನು ವಿತರಿಸಲಾಗುತ್ತಿದೆ. ಇದರೊಂದಿಗೆ ಶಾಲಾ ಕೊಠಡಿಗಳ ದುರಸ್ಥಿಗೂ ಗಮನಹರಿಸಲಾಗಿದೆ ಎಂದರು. 

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಣ್ಣ ನೀರಾವರಿ ಸಚಿವ ಎನ್. ಎಸ್. ಬೋಸರಾಜು ಅವರು ಮಾತನಾಡಿ, ಯಾವುದೇ ಭ್ರಷ್ಟಚಾರಗಳಿಗೆ ಅವಕಾಶವಿಲ್ಲದಂತೆ ರಾಜ್ಯದಲ್ಲಿ 52000 ಕೋಟಿ ವೆಚ್ಚದ ಸಹಸ್ರಾರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ರಾಜ್ಯದಲ್ಲಿ ಅತೀ ಹೆಚ್ಚು ಕೆರೆಗಳನ್ನು ಹೊಂದಿರುವ ಸೊರಬ ತಾಲೂಕಿನ ನದಿ, ನಾಲೆ, ಕೆರೆ ಕಟ್ಟೆ ಕಾಲುವೆಗಳ ಅಭಿವೃದ್ಧಿಗಾಗಿ ಸರ್ಕಾರದಿಂದ ಅಗತ್ಯ ಅನುದಾನವನ್ನು ಒದಗಿಸಲಾಗುವುದು ಎಂದರು. ತಾಲೂಕಿನಲ್ಲಿ ಪ್ರಸ್ತುತ ಕೈಗೊಂಡ ನೀರಾವರಿ ಯೋಜನೆಗಳನ್ನು ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದರು.

SUMMARY | These projects, taken up for the development of Varada river, will help in providing clean drinking water to the residents of 39 villages in the taluk and filling up tanks, bunds and canals. District in-charge minister Madhu Bangarappa said that the ground water level should increase.

KEYWORDS | Varada river, development,  Madhu Bangarappa, soraba,

malenadutoday add
Share This Article
Facebook Whatsapp Whatsapp Telegram Threads Copy Link
Previous Article ಮೈಕ್ರೋಫೈನಾನ್ಸ್ ಕಿರುಕುಳದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು? ಇಲ್ಲಿದೆ ಕಾನೂನು ಮಾಹಿತಿ
Next Article ಬಸ್‌ನಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಬೆನ್ನಲ್ಲೆ ಪೊಲೀಸರಿಂದ ಬಸ್‌ ಮಾಲೀಕರ ಮೀಟಿಂಗ್‌ | 4 ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಛಲವಾದಿ ನಾರಾಯಣ ಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

By 131
POLITICS

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ಕಡತವನ್ನು ವಾಪಾಸ್‌ ಕಳುಹಿಸಿದ ರಾಜ್ಯಪಾರು

By 131
shivamogga news today
POLITICS

shivamogga news today : ಮುನಿಸು ಬದಿಗೊತ್ತಿ ಬಿಎಸ್​ವೈ ಮೊಮ್ಮಗನ ಆರತಕ್ಷತೆಯಲ್ಲಿ ಕೆ ಎಸ್​ ಈಶ್ವರಪ್ಪ ಭಾಗಿ

By Prathapa thirthahalli
POLITICS

ಈದ್ಗಾ ಮೈದಾನ ವಿವಾದ, ಜಿಲ್ಲಾಡಳಿತಕ್ಕೆ 3 ದಿನದ ಗಡುವು | ಎಸ್ ಎನ್ ಚನ್ನಬಸಪ್ಪ 

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up