ಈ ಥರ ಮೋಸ ನಿಮಗೂ ಆಗಬಹುದು ಎಚ್ಚರ | ದುಡ್ಡು ಕೊಟ್ಟರೆ ಕೆಟ್ಟಿರಿ

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 14, 2025 ‌‌ ‌‌

ಸಾಫ್ಟ್‌ವೇ‌ರ್ ಕಂಪನಿಯೊಂದರಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನಕಲಿ ಆದೇಶ ಕಾಪಿ ನೀಡಿ ಶಿವಮೊಗ್ಗದ ಯುವಕನೊಬ್ಬನಿಗೆ (ಹೆಸರು ಗೌಪ್ಯ) 2.10 ಲಕ್ಷ ರೂಪಾಯಿ ವಂಚಿಸಲಾಗಿದೆ.ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ FIR ಸಹ ದಾಖಲಾಗಿದೆ. 

ಸಂತ್ರಸ್ತ ಯುವಕನ ಸ್ನೇಹಿತನೊಬ್ಬನ ಕಡೆಯಿಂದ ಹೈದರಾಬಾದ್‌ನ ಮಹೇಶ್‌ ಎಂಬಾತ ಪರಿಚಯವಾಗಿದ್ದ. ಆತ ಯುವಕನಿಗೆ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಈ ಕುರಿಯಾಗಿ ಹಂತ-ಹಂತವಾಗಿ ಹಣ ಪಡೆದು 2023ರ ಡಿಸೆಂಬರ್‌ನಲ್ಲಿ ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ನೇಮಕಾತಿ ಪತ್ರ ಕಳುಹಿಸಿದ್ದ. 

ಆದರೆ ಪರಿಶೀಲನೆ ವೇಳೆ ನೇಮಕಾತಿ ಆದೇಶ ನಕಲಿ ಎಂಬುದು ಯುವಕನಿಗೆ ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಮಹೇಶ್‌ಗೆ ಕರೆ ಮಾಡಿ ಹಣ ಹಿಂತಿರುಗಿಸುವಂತೆ ತಿಳಿಸಿದ್ದ. ಆದರೆ ಈವರೆಗೂ ಆತ ಹಣ ಹಿಂತಿರುಗಿಸದ ಹಿನ್ನೆಲೆಯಲ್ಲಿ ಯುವಕ ದೂರು ನೀಡಿದ್ದಾನೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.

 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು