SHIVAMOGGA | MALENADUTODAY NEWS | ಮಲೆನಾಡು ಟುಡೆ Oct 22, 2024
ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸ ಹೊರಟಿದ್ದೀರಾ? ಹಾಗಾದರೆ ಸ್ವಲ್ಪ ತಡೆಯಿರಿ ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ಹೇಳುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದೆ. ಹೀಗಾಗಿ ಜಿಲ್ಲೆಯ ಪ್ರವಾಸವನ್ನು ಒಂದು ವಾರ ಮುಂದೂಡ ಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಪ್ರವಾಸಿಗರಿಗೆ ಸೂಚನೆ ನೀಡಿದ್ದಾರೆ.
ಮುಂದಿನ ಮೂರು ದಿನ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಇದ್ದು, ಜಿಲ್ಲೆಯಲ್ಲಿನ ಹಳ್ಳ, ನದಿ ಗಳು ತುಂಬಿ ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿವೆ. ಹಲವೆಡೆ ಭೂ ಕುಸಿತ ಸಹ ಉಂಟಾಗಿದೆ.
ಹೀಗಾಗಿ ಸಾರ್ವಜನಿಕರು, ಪ್ರವಾಸಿಗರು ಮುಂದಿನ ಒಂದು ವಾರದವರೆಗೆ ಅಥವಾ ಮಳೆ ಕಡಿಮೆಯಾಗುವವರೆಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

SUMMARY | The Deputy Commissioner has requested those who are on a tour of Chikkamagaluru district to postpone their tour by a week due to heavy rains. Chikkamagaluru district collector appeals to tourists
KEYWORDS | Deputy Commissioner has requested, Chikkamagaluru district, due to heavy rains, Chikkamagaluru district collector appeals to tourists,