SHIVAMOGGA | MALENADUTODAY NEWS | ಮಲೆನಾಡು ಟುಡೆ Dec 21, 2024
ಧಾರ್ಮಿಕ ದತ್ತಿ ಇಲಾಖೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸವನ್ನ ಹಮ್ಮಿಕೊಂಡಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಿದೆ. ಧಾರ್ಮಿಕ ದತ್ತಿ ಇಲಾಖೆಯು ಕರ್ನಾಟಕ ಭಾರತ್ ಗೌರವ್ ಯೋಜನೆಯಡಿ ದಕ್ಷಿಣ ಕ್ಷೇತ್ರಗಳ ಯಾತ್ರೆ, ದ್ವಾರಕಾ ಯಾತ್ರೆ ಮತ್ತು ಪುರಿಜಗನ್ನಾಥ ದರ್ಶನ ಯಾತ್ರೆಗಳಿಗೆ ಪ್ರವಾಸ ಕೈಗೊಳ್ಳುತ್ತಿದೆ. ಈ ಸಂಬಂಧ ಪ್ರವಾಸಕ್ಕೆ ತೆರಳಲು ಇಚ್ಛಿಸುವ ಸಾರ್ವ ಜನಿಕರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಪೈಕಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರವರ್ಗ-ಸಿ ಅಧಿಸೂಚಿತ ದೇವಸ್ಥಾನಗಳಲ್ಲಿ/ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು/ನೌಕರರನ್ನು ಉಚಿತವಾಗಿ ಪ್ರವಾಸಕ್ಕೆ ಕಳುಹಿಸಲು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ದಕ್ಷಿಣ ಕ್ಷೇತ್ರಗಳ ಯಾತ್ರೆಯ ವಿವರ
ರಾಮೇಶ್ವರ-ಕನ್ಯಾಕುಮಾರಿ-ಮಧುರೈ-ತಿರುವನಂತಪುರ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಯಾತ್ರಾ ಪ್ಯಾಕೇಜ್ಗೆ ಒಟ್ಟು 25,000 ತಗುಲಲಿದೆ. ಕರ್ನಾಟಕ ಸರ್ಕಾರದ ವತಿಯಿಂದ ಅಂದಾಜು ₹10,000 ಭರಿಸಲಾಗುವುದು. ಇದರಲ್ಲಿ ಫಿಕ್ಸೆಡ್ ಹೂಲೇಜ್, ಆರ್ಯು ಚಾರ್ಚ್, ಸ್ಟೇಬಲಿಂಗ್ ಚಾರ್ಚ್, ವೈದ್ಯಕೀಯ ವೆಚ್ಚ, ಇತರೆ ವೆಚ್ಚ ಹಾಗೂ ಸಹಾಯ ಧನ ₹5,000 ಒಳಗೊಂಡಿರುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ₹10,000 ಮಾತ್ರ ಪಾವತಿಸಬೇಕಾಗಿರುತ್ತದೆ. ರೈಲು ಹತ್ತುವ ಮತ್ತು ಇಳಿಯುವ ಸ್ಥಳ : ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ತುಮಕೂರು,
ದ್ವಾರಕಾ ಯಾತ್ರೆ | ದ್ವಾರಕಾ-ನಾಗೇಶ್ವರ- ಸೋಮನಾಥ-ತ್ರಯಂಬಕೇಶ್ವರ ಕ್ಷೇತ್ರಗಳು. ಪುರಿ ಜಗನ್ನಾಥ ದರ್ಶನ: ಕೊನಾರ್ಕ್-ಗಂಗಾಸಾರ್ಗ- ಕೊಲ್ಕತಾ ಯಾತ್ರಾ ಪ್ಯಾಕೇಜ್. ಈ ಪ್ಯಾಕೇಜ್ಗೆ ಒಟ್ಟು 32,500 ತಗುಲಲಿದ್ದು, ಕರ್ನಾಟಕ ಸರ್ಕಾರದಿಂದ 17,500 ರು. ಭರಿಸಲಾಗುತ್ತದೆ. ಫಿಕ್ಸೆಡ್ ಹೂಲೇಜ್, ಆರ್ಯು ಚಾರ್ಚ್, ಸ್ಟೇಬಲಿಂಗ್ ಚಾರ್ಚ್, ವೈದ್ಯಕೀಯ ವೆಚ್ಚ, ಇತರೆ ವೆಚ್ಚ, ಸಹಾಯ ಧನ 7,500 ರು. ಒಳಗೊಂಡಿರುತ್ತದೆ.
ಯಾತ್ರಾರ್ಥಿಗಳು ಬುಕ್ಕಿಂಗ್ ಮೊತ್ತವಾಗಿ ₹15,000 ಮಾತ್ರ ಪಾವತಿಸಬೇಕಾಗುತ್ತದೆ. ರೈಲು ಹತ್ತುವ ಮತ್ತು ಇಳಿಯುವ ಸ್ಥಳ: ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ತುಮಕೂರು, ಬೆಂಗಳೂರು.
ಪ್ರಯಾಣಿಸುವಾಗ ಆಧುನಿಕ ಪ್ಯಾಂಟ್ರಿ ಕಾರಿನಲ್ಲಿ ತಯಾರಿಸಿದ ತಾಜಾ ಸ್ಥಳೀಯ ಆಹಾರವನ್ನು ನೀಡಲಾಗುತ್ತದೆ. ಈ ಪ್ಯಾಕೇಜಿನಲ್ಲಿ 3 ಟೈರ್ ಎ.ಸಿ.ರೈಲಿನಲ್ಲಿ ಪ್ರಯಾಣ, ಊಟ ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನ ವ್ಯವಸ್ಥೆ ಇರುತ್ತದೆ. ಯಾತ್ರಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ವೈದ್ಯಕೀಯ ಸಹಾಯ ವ್ಯವಸ್ಥೆ ಇರುತ್ತದೆ. ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಮುಜರಾಯಿ ತಹಸೀಲ್ದಾರ್ ತಿಳಿಸಿದ್ದಾರೆ.
SUMMARY | The Religious Endowments Department has invited online applications for the pilgrimage packages to Rameshwaram, Kanyakumari, Madurai, Thiruvananthapuram, Dwarka, Nageshwara, Somnath, Trimbakeshwar, Konark, Gangasagar, Kolkata.
KEY WORDS | Religious Endowments Department , invited online applications , pilgrimage packages to Rameshwaram, Kanyakumari, Madurai, Thiruvananthapuram, Dwarka, Nageshwara, Somnath, Trimbakeshwar, Konark, Gangasagar, Kolkata.