Wednesday, 24 Sep 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • UNCATEGORIZED
  • INFORMATION NEWS
  • ARECANUT RATE
  • NATIONAL NEWS
  • SHIMOGA NEWS LIVE
  • DISTRICT
  • SAGARA
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಕಲಿತ  ಕಾಲೇಜಿನ ಅಭಿವೃದ್ದಿಗೆ ಹಿರಿಯ ವಿದ್ಯಾರ್ಥಿಗಳು ನೆರವು ನೀಡಬೇಕು | ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ

131
Last updated: November 23, 2024 10:19 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 23, 2024

ಶಿವಮೊಗ್ಗ| ಕಲಿತ  ಕಾಲೇಜಿನ ಅಭಿವೃದ್ದಿಗೆ ಹಿರಿಯ ವಿದ್ಯಾರ್ಥಿಗಳು ನೆರವು ನೀಡಬೇಕು ಎಂದು ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾಗಮದಲ್ಲಿ ನಮ್ಮಸಹ್ಯಾದ್ರಿ ನಮ್ಮ ಹೆಮ್ಮೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲವನ್ನೂ ಸರ್ಕಾರವೇ ಮಾಡುತ್ತೆ ಎಂದು ಕಾಯಬಾರದು.ಐಐಟಿಗಳಲ್ಲಿ ಅಲ್ಲಿನ ಹಿರಿಯ ವಿದ್ಯಾರ್ಥಿಗಳ  ಕೊಡುಗೆ ಅಪಾರವಾಗಿರುತ್ತೆ. ಸಹ್ಯಾದ್ರಿ ವಿಜ್ಞಾನ ಕಾಲೇಜು ಹೆಸರಾಂತ ಕಾಲೇಜು. ಇದಕ್ಕೆ ಇಲ್ಲಿನ ಹಿರಿಯ ವಿದ್ಯಾರ್ಥಿಗಳೇ ರಾಯಭಾರಿಗಳು. ಕಾಲೇಜಿಗೆ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕು. ಈ ನೆಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ ಕೆಲಸ ಮಾಡಲಿ ಎಂದರು.

ಕಾಲೇಜಿನ ಅವಶ್ಯಕತೆಗಳು ತುಂಬಾ ಇವೆ. ಎಲ್ಲರೂ ಸೇರಿ ಈ ಬಗ್ಗೆ ಗಮನ ಹರಿಸಬೇಕು| ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ

ಹಿರಿಯ ವಿದ್ಯಾರ್ಥಿಗಳ ಸಂಘದ ಗೌರವ ಅಧ್ಯಕ್ಷರಾದ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಮಾತನಾಡಿ ,ಕಾಲೇಜಿನ ಅವಶ್ಯಕತೆಗಳು ತುಂಬಾ ಇವೆ. ಎಲ್ಲರೂ ಸೇರಿ ಈ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದರು.  ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಕುವೆಂಪು ವಿವಿ ಕುಲಸಚಿವ ಡಾ.  ಎಸ್ ಎಂ ಗೋಪಿನಾಥ್ ಮಾತನಾಡಿ, ಇಲ್ಲಿನ ಅಧ್ಯಾಪಕ ವೃಂದ ಯಾವತ್ತೂ ಉನ್ನತ ದರ್ಜೆಯಲ್ಲಿತ್ತು. ಈ ಕಾಲೇಜು ಜೀವನ ಕೊಟ್ಟಿದೆ.ಇದರ ಅಭಿವೃದ್ದಿಗೆ ಎಲ್ಲರೂ ಕೂಡಿ ಕೆಲಸ ಮಾಡಬೇಕು ಎಂದರು.

 

ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಇನ್ನಷ್ಟು ಬೆಳೆಸಬೇಕು. ಈ ಕಾಲೇಜಿನ‌ ಏಳಿಗೆಗೆ ಎಲ್ಲರೂ ಕೈ ಜೋಡಿಸಬೇಕು |ಪ್ರೊ.ಎನ್.ರಾಜೇಶ್ವರಿ

ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಎನ್.ರಾಜೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿ, 1941 ರಲ್ಲಿ ಆರಂಭವಾದ ಕಾಲೇಜು ಈ ರಾಜ್ಯ,ದೇಶ ಹಾಗೂ ವಿದೇಶಗಳಲ್ಲಿ ಹಿರಿಯ ವಿದ್ಯಾರ್ಥಿಗಳನ್ನು ಹೊಂದಿದೆ. ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಇನ್ನಷ್ಟು ಬೆಳೆಸಬೇಕು. ಈ ಕಾಲೇಜಿನ‌ ಏಳಿಗೆಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು. ಮಾಜಿ ಶಾಸಕರು ಹಾಗು ಹಿರಿಯ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ಕೆ.ಬಿ.ಅಶೋಕ್ ನಾಯ್ಕ್ ಮಾತನಾಡಿ, ಹಿರಿಯ ವಿದ್ಯಾರ್ಥಿಗಳ ಸಂಘ ಏನು ಮಾಡಬೇಕೆಂಬ ಬಗ್ಗೆ ಸಂವಾದ ನಡೆಸಿಕೊಟ್ಟರು. ಸಹಕಾರ್ಯದರ್ಶಿ ಉಮೇಶ್ ಶಾಸ್ತ್ರಿ ಸ್ವಾಗತಿಸಿದರು. ಕಾರ್ಯದರ್ಶಿ ಡಾ.ನಾಗರಾಜ್ ಪರಿಸರ  ವಂದಿಸಿದರು. ಹಿರಿಯ ವಿದ್ಯಾರ್ಥಿಗಳಾದ ಹರ್ಷ ಮತ್ತು ಕುಸುಮಾ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಡೀ ದಿನ ಹಿರಿಯ ವಿದ್ಯಾರ್ಥಿಗಳು ಕಾಲೇಜು ಮತ್ತು ಗುರುಗಳ ನೆನಪು ಮೆಲುಕು ಹಾಕಿದರು. ಹಿರಿಯ ವಿದ್ಯಾರ್ಥಿಗಳ ಸಂಘ,ಕಾಲೇಜು ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಕಾರ್ಯಕ್ರಮ ಅಯೋಜಿಸಲಾಗಿತ್ತು.

ನಂತರ ಕಾಲೇಜಿನಲ್ಲಿ ಒದಿದ ಕೆಲವು ಹಳೆಯ ವಿದ್ಯಾರ್ಥಿಗಳು. ಈ ಕಾಲೇಜು ನಮ್ಮ ಬೆಳವಣಿಗೆಯಲ್ಲಿ ಯಾವರೀತಿ ಪಾತ್ರ ವಹಿಸಿತು ಎಂಬುದರ ಬಗ್ಗೆ ತಿಳಿಸಿದರು.

 ಕಾಲೇಜು ನನಗೆ ಇಂದು ಉತ್ತಮ ಜೀವನ ಹೆಸರು ನೀಡಿದೆ. ಇಲ್ಲಿ ಹಾಕಿದ ಬುನಾದಿ  ಮುಂದೆ ದೊಡ್ಡ ವ್ಯಕ್ತಿಯಾಗಿ ಬೆಳೆಯಲು ಸಹಕಾರವಾಯಿತು.

ಡಾ.ಪ್ರಸನ್ನ ಸಂತೆಕಡೂರು, ವಿಜ್ಞಾನಿ, ಲೇಖಕರು

ಅಲ್ಯುಮಿನಿ ಸಂಘಟನೆ ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು. ನಮ್ಮ ಕಾಲೇಜಿನ ಅಭಿವೃದ್ಧಿಗೆ  ಎಲ್ಲರೂ ಶ್ರಮಿಸೋಣ

ಸಂಕೇತ್, ಹೆಚ್ಆರ್ ಹೆಡ್, 

ಸಾಮಾನ್ಯ ವಿದ್ಯಾರ್ಥಿಯಾಗಿದ್ದ ನಾನು ನನ್ನ ಬದುಕಲ್ಲಿ ಅಸಾಮಾನ್ಯವಾದುದನ್ನು ಸಾಧಿಸಲು ಕಾಲೇಜಿನ ಅಧ್ಯಾಪಕರು ಕಾರಣ. ಕಲಿತ ಕಾಲೇಜಿಗೆ ನಾವು ಏನಾದರು ಮಾಡಲೇಬೇಕು

ಡಾ.ಶ್ರೀಧರ್, ಐಎಂಎ ಶಿವಮೊಗ್ಗ ಅಧ್ಯಕ್ಷರು


ಹಿರಿಯ ವಿದ್ಯಾರ್ಥಿಗಳ ಸಂಘ ಬಲವಾಗಬೇಕು. ಕಾಲೇಜಿನ ಅಭಿವೃದ್ಧಿ ಸಹಪಾಠಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಲು ಇದೊಂದು ಅವಕಾಶ.ಈ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಈ ಬಗ್ಗೆ ಶ್ರಮಿಸಬೇಕೆಂದು ಮನವಿ ಮಾಡುವೆ

ಪ್ರೊ.ಎ.ಎಸ್.ಚಂದ್ರಶೇಖರ್, ವಿಶ್ರಾಂತ  ಪ್ರಾಚಾರ್ಯರು, ಸಹ್ಯಾದ್ರಿ ವಿಜ್ಞಾನ ಕಾಲೇಜು. 

SUMMARY| Kuvempu University Vice-Chancellor Prof. Sharath Ananthamurthy opined that senior students should help in the development of the college.

KEYWORDS|  Kuvempu University,  vice-Chancellor Prof. Sharath Ananthamurthy, Sahyadri Science College,  shivamogga,

Share This Article
Facebook Whatsapp Whatsapp Telegram Threads Copy Link
Previous Article ಜಾತಿ ಕಾರಣ ಕೊಟ್ಟು ಕೈಕೊಟ್ಟ ಹುಡುಗ | ವಿಷ ಸೇವಿಸಿದ್ದ ಅಪ್ರಾಪ್ತೆ ಸಾವು
Next Article ಕೆಲಸ ಬೇಕಾದರೆ, ನೀವೆ 20 ಲಕ್ಷ ಕೊಡಿ ಎಂದ ಜ್ಯೊಮೆಟೋ | ವಿಚಿತ್ರ ಆಫರ್‌ನಲ್ಲಿ ಕುತೂಹಲದ ಕಥೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

pavalam ant powder
SHIVAMOGGA NEWS TODAY

pavalam ant powder 13-06-25 : ಇರುವೆ ಪುಡಿ ಗೋದಾಮಿನ ಮೇಲೆ ಅಧಿಕಾರಿಗಳ ದಾಳಿ | ಸಾವಿರಾರು ರೂಪಾಯಿ ಮೌಲ್ಯದ ಇರುವೆ ಪುಡಿ ಜಪ್ತಿ

By Prathapa thirthahalli
SHIVAMOGGA NEWS TODAY

ಸಂಗೊಳ್ಳಿ ರಾಯಣ್ಣ ಸರ್ಕಲ್‌ ಬಳಿಯಲ್ಲಿ ಸ್ಕೂಸ್‌ ಬಸ್‌ ಡಿಕ್ಕಿ | ಸೊಪ್ಪು ಮಾರುವ ಮಹಿಳೆ ಸಾವು

By 13
car accident
SHIVAMOGGA NEWS TODAY

car accident :  ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು

By Prathapa thirthahalli
psi exam training
SHIVAMOGGA NEWS TODAY

psi exam training : ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up