ಕೋಣಂದೂರಿನಲ್ಲಿ ಹಸು ರಕ್ಷಿಸಲು ಹೋಗಿ ವ್ಯಕ್ತಿ ಸಾವು

ಹಂಚಿಕೊಳ್ಳಿ
WhatsApp Facebook X Telegram
ಕೋಣಂದೂರಿನಲ್ಲಿ ಹಸು ರಕ್ಷಿಸಲು ಹೋಗಿ ವ್ಯಕ್ತಿ ಸಾವು

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 20, 2025

ಶಿವಮೊಗ್ಗ| ಮಂಗಳವಾರ ಕೋಣಂದೂರು ಸಮೀಪದ ಕಾರಗೋಡ್ಲು ಎಂಬಲ್ಲಿ  ಬಾವಿಗೆ ಬಿದ್ದಿದ್ದ ಹಸುವನ್ನು ಮೇಲೆತ್ತಲು ಇಳಿದಿದ್ದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.  

ಕೇರಳದ ಸತೀಶ್‌ (45)  ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ರಾಘು ಎಂಬುವರು ಇತ್ತೀಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಅದಕ್ಕೆ ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಬಿದ್ದಿತ್ತು. ಅದನ್ನು ರಕ್ಷಿಸಲು ಸತೀಶ್ ಬಾವಿಗೆ ಇಳಿದಿದ್ದರು. ಈ ವೇಳೆ ಈ ಸತೀಶ್‌ಗೆ ಉಸಿರುಗಟ್ಟಿ ದುರ್ಘಟನೆ ಸಂಭವಿಸಿದೆ. ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಬುಧವಾರ ಬಾವಿಯಿಂದ  ಮೇಲಕ್ಕೆ ತೆಗೆದರು. ನಂತರ ಮೃತದೇಹವನ್ನು ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ – ಮರಣೋತ್ತರ ಪರೀಕ್ಷೆ ನಡೆಸಿ ಕೇರಳಕ್ಕೆ ಕಳುಹಿಸಿಕೊಡಲಾಗಿದೆ. ಈ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SUMMARY | A man died of suffocation while trying to lift a cow that had fallen into a well at Karagodlu near Konandur.

KEYWORDS | Karagodlu, well, Konandur, man died, 

ಹಂಚಿಕೊಳ್ಳಿ
WhatsApp Facebook X Telegram
131
ಲೇಖಕರ ಬಗ್ಗೆ

131

Malenadu Today Contributor