SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 17, 2025
ಶಿವಮೊಗ್ಗ | ಗೋ ರಕ್ಷಣೆ ದೃಷ್ಟಿಯಿಂದ ರೈತರಿಗೆ ಬಂದೂಕು ಪರವಾನಗಿ ನೀಡಬೇಕು ಎಂಬ ಬೇಡಿಕೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಗೋರಕ್ಷ ಪರಿವಾರ ಶಿವಮೊಗ್ಗ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಯಿತು.
ಗೋವುಗಳ ಕೆಚ್ಚಲನ್ನು ಕೊಯ್ದಿರುವ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಗೋರಕ್ಷ ಪರಿವಾರ ಶಿವಮೊಗ್ಗ ಸಂಘಟನೆ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ರ್ಯಾಲಿಯನ್ನು ಕೈಗೊಂಡಿದ್ದರು. ಈ ಸಂದರ್ಭದಲ್ಲಿ ರಾಜ್ಯಪಾಲರಿಗೆ ಜಿಲ್ಲಾಡಳಿತದ ಮೂಲಕ ಮನವಿಯನ್ನು ಸಲ್ಲಿಸಿದ ಸದಸ್ಯರು ರಾಜ್ಯ ಸರ್ಕಾರದ ವಿರುದ್ದ ಘೋಷಣೆಯನ್ನು ಕೂಗಿದರು.

ರಾಜ್ಯ ಪಾಲರಿಗೆ ಗೋ ರಕ್ಷಕ ಪರಿವಾರದವರು ಮಾಡುತ್ತಿರುವ ಆಗ್ರಹವೇನು
ಅಪರಾಧಿಯು ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವುದಾಗಿ ಮತ್ತು ಕುಡಿದ ಅಮಲಿನಲ್ಲಿ ಕೃತ್ಯ ಎಸಗಿದ್ದಾನೆ, ಎಂದು ಬಿಂಬಿಸುತ್ತಿರುವುದು ಜನತೆಯ ದಿಕ್ಕು ತಪ್ಪಿಸುವ ಕೆಲಸವಾಗಿದೆ. ಗೋವಿನ ಕೆಚ್ಚಲು ಕತ್ತರಿಸಿದ ಅಸಲಿ ದುರಳರ ಬಂಧನ ಮಾಡಬೇಕು. ಗೋವಿನ ಮಾಲೀಕನಿಗೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ನೀಡಬೇಕು.ಗೋ ರಕ್ಷಣೆ ದೃಷ್ಟಿಯಿಂದ ರೈತರಿಗೆ ಬಂದೂಕು ಪರವಾನಗಿ ನೀಡಬೇಕು. ಗೋವನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಿಸಬೇಕು. ಗೋಶಾಲೆಯ ಅನುದಾನಗಳನ್ನು ನಿಲ್ಲಿಸಿರುವುದನ್ನು ತೆರವುಗೊಳಿಸಬೇಕು. ರಾಜ್ಯದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಗೋಹತ್ಯೆ ವಿರುದ್ಧ ಈ ಹಿಂದೆ ಇದ್ದ ಕಾನೂನನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು
Summary | A memorandum was submitted to the Governor through the Deputy Commissioner on behalf of Goraksha Parivar Shivamogga, demanding that the demands be fulfilled.
Keywords | Goraksha Parivar. shivamogga.