ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ KSRTC ಬಸ್​ | 30 ಜನರಿಗೆ ಗಾಯ

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 10, 2025

ಕೆ ಎಸ್​ ಆರ್ ಟಿ ಸಿ ಬಸ್ಸೊಂದು ಚಾಲಕನ ನಿಯಂತ್ರನ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ  ಬಾಳೆಹೊನ್ನೂರು ಜಯಪುರ ನಡುವಿನ ಮೂರುಗದ್ದೆ, ಜಲದುರ್ಗ ಬಳಿ ನಡೆದಿದೆ.

ಕೆಎಸ್​ಆರ್​ಟಿಸಿ ಬಸ್​ ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು. ಬಸ್‍ನಲ್ಲಿ ಸುಮಾರು 45 ಜನ ಪ್ರಯಾಣಿಸುತ್ತಿದ್ದ ರು.ಆಗ ಜಯಪುರ ಸಮೀಪದ ಮೂರುಗದ್ದೆ, ಜಲದುರ್ಗ ನಡುವೆ ಚಾಲಕನ ನಿಯಂತ್ರಣ ತಪ್ಪಿ ಪುಟ್ಟಪ್ಪ ಪೂಜಾರಿ ಎಂಬುವವರ ಮನೆಯ ಮೇಲೆ ಬಿದ್ದಿದೆ. ಇದರ ಪರಿಣಾಮ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 30 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಂಭೀರ ಗಾಯವಾದ 10 ಜನರನ್ನು ಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್​ ಮನೆ ಮೇಲೆ ಬಿದ್ದ ಹೊಡೆತಕ್ಕೆ ಮನೆಯ ಒಳಗಿದ್ದ ಶಾಂತ ಎಂಬುವವರಿಗೆ ಗಾಯಗಳಾಗಿವೆ. ಈ ಹಿನ್ನಲೆ ಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

SUMMARY | A KSRTC bus fell on a house near Jaladurga in Balehonnur and Jayapura.

KEYWORDS |  KSRTC,  bus,  Jaladurga,  accident, 

Share This Article