SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 11, 2025
ಕೇಕ್ ತಯಾರಿಕೆಗೆ ಬಳಸಲಾದ ಸುಗಂಧ ದ್ರವ್ಯವನ್ನು ಸೇವಿಸಿ ಮೈಸೂರು ಕೇಂದ್ರ ಕಾರಾಗೃಹದಲ್ಲಿ ಮೂವರು ಸಜಾ ಕೈದಿಗಳು ಈ ಹಿಂದೆ ಸಾವನ್ನಪ್ಪಿದ್ದು, ಇದೀಗ ಈ ಪ್ರಕರಣವನ್ನು ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆಯು ಗಂಭೀರವಾಗಿ ಪರಿಗಣಿಸಿದೆ. ಹಾಗೆಯೇ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಇನ್ಮುಂದೆ ಇಂತಹ ಘಟನೆಗಳು ಯಾವುದೇ ಜೈಲುಗಳಲ್ಲಿ ಮರುಕಳಿಸಬಾರದೆಂದು ರಾಜ್ಯದ ಎಲ್ಲಾ ಜೈಲುಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ಕುರಿತು ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆಯು ಜೈಲುಗಳಿಗೆ ನೀಡಿರುವ ಸೂಚನೆಗಳೇನು
ಕೇಕ್ ತಯಾರಿಸುವ ಕೈದಿಗಳ ಬಗ್ಗೆ ಎಚ್ಚರ ವಹಿಸಬೇಕು.

ನಿಗದಿತ ಕೈದಿಗಳನ್ನ ಹೊರತುಪಡಿಸಿದರೆ ವಿವಿಧ ಜವಾಬ್ದಾರಿ ವಹಿಸಿಕೊಂಡಿರುವ ಹಾಗೂ ವಿವಿಧ ಬ್ಯಾರಕ್ನಲ್ಲಿನ ಕೈದಿಗಳಿಗೆ ಪ್ರವೇಶ ನಿರ್ಬಂಧ ಕಠಿಣಗೊಳಿಸಬೇಕು.
ಬೇಕರಿ ಉತ್ಪನ್ನದಲ್ಲಿ ತೊಡಗಿರುವ ಕೈದಿಗಳು ಕೆಲಸ ಸಮಯದಲ್ಲಿ ಮಾತ್ರ ಇರಬೇಕು.
ಕೆಲಸ ಅವಧಿ ಮುಗಿದ ಬಳಿಕ ವಿಭಾಗಕ್ಕೆ ಯಾರು ಹೋಗದಿರಲು ನಿಗಾ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಕೇಕ್ ಹಾಗೂ ಇನ್ನಿತರ ಬೇಕರಿ ಉತ್ಪನ್ನಗಳಿಗೆ ಬಳಸಲಾಗುವ ಎಸೆನ್ಸ್ ಸೇರಿದಂತೆ ವಿವಿಧ ರಾಸಾಯನಿಕ ವಸ್ತುಗಳ ಸರಬರಾಜು ಮಾಡುವ ಕಂಪನಿಗಳ ಜೊತೆ ಮಾತುಕತೆ ನಡೆಸಿ, ಇದರ ಅಡ್ಡ ಪರಿಣಾಮಗಳನ್ನು ಅರಿತು ಇದರ ಬಗ್ಗೆ ಕೈದಿಗಳಿಗೆ ಎಚ್ಚರ ವಹಿಸುವಂತೆ ನಿರ್ದೇಶನ ನೀಡುವಂತೆ ತಿಳಿಸಲಾಗಿದೆ.
ಏನಿದು ಘಟನೆ
ಮೈಸೂರು ಕಾರಾಗೃಹದ ಬೇಕರಿ ವಿಭಾಗದಲ್ಲಿ ಈ ಹಿಂದೆ ವಿವಿದ ಕೇಸ್ಗಳಲ್ಲಿ ಶಿಕ್ಷೆಗೆ ಒಳಗಾಗಿದ್ದ ಮಾದೇಶ, ನಾಗರಾಜ್ ಹಾಗೂ ರಮೇಶ್ ಎಂಬವರು ಕೆಲಸ ಮಾಡುತ್ತಿದ್ದರು. ಡಿ.24ರಂದು ಕೇಕ್ನ್ನು ತಯಾರಿಸುತ್ತಿದ್ದಾಗ ತಿಳಿಯದೆ ರಾಸಾಯನಿಕವೊಂದನ್ನು ಕೇಕ್ ಜೊತೆ ಬೆರೆಸಿ ಸೇವಿಸಿದ್ದರು. ಬಳಿಕ ಮೂವರಲ್ಲೂ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಎಲ್ಲರನ್ನೂ ಮೈಸೂರಿನ ಕೆ.ಆರ್.ಆಸ್ಪತ್ರೆಯ ಜೈಲು ವಾರ್ಡ್ಗೆ ಸೇರಿಸಲಾಗಿತ್ತು. ಆದರೆ ಬಹು ಅಂಗಾಂಗ ವೈಫಲ್ಯಕ್ಕೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟಿದ್ದರು. ಸದ್ಯ ಈ ಬಗ್ಗೆ ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SUMMARY | DGP Malini Krishnamurthy has directed all jails in the state not to repeat such incidents in any jails in future.
KEYWORDS | Malini Krishnamurthy, DGP, jails,