SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 23, 2024
ನೇಣು ಬಿಗಿದುಕೊಂಡು ಆತ್ಮಹತ್ಯೆ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಭವನದ ಸಮೀಪದ ನಿವಾಸಿಯಾಗಿದ್ದ 18 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಘಟನೆಗೆ ಕಾರಣ ಸ್ಪಷ್ಟವಾಗಿಯಲ್ಲ
ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷರ ವಿರುದ್ಧ ಕೇಸ್
ಇನ್ನೊಂದೆಡೆ ಅತಿಥಿ ಉಪನ್ಯಾಸಕ ಸೇವೆಯನ್ನು ಕಾಯಂಗೊಳಿಸುವುದಾಗಿ ನಂಬಿಸಿ, ಹಣ ಪಡೆದು ವಂಚಿಸಿದ ಆರೋಪದ ಅಡಿಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಹಾಗೂ ಇತರ ಪದಾಧಿಕಾರಿಗಳ ವಿರುದ್ಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಆರೋಪಿಗಳು ಒಟ್ಟು ₹ 17.50 ಲಕ್ಷ ರೂಪಾಯಿಯನ್ನ ಅಕೌಂಟ್ ಮೂಲಕವೇ ಪಡೆದು ವಂಚನೆ ಮಾಡಿದ್ದಾರೆ ಎಂದು ದೂರಲಾಗಿದೆ.
ಮಹಿಳಾ ಪೊಲೀಸ್ ಮಾಂಗಲ್ಯ ಸರ ಮಿಸ್ಸಿಂಗ್
ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯ ಬಂದೋಬಸ್ತ್ ವೇಳೆ ಮಪ್ತಿಯಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರ ಮಾಂಗಲ್ಯ ಸರ ಕಳುವಾದ ಬಗ್ಗೆ ದೂರು ದಾಖಲಾಗಿದೆ. ಶಿವಮೊಗ್ಗದ ಪೊಲೀಸ್ ಠಾಣೆಯೊಂದರಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿ ಗೋಪಿ ಸರ್ಕಲ್ನಲ್ಲಿ ಡ್ಯೂಟಿಯಲ್ಲಿದ್ದಾಗ, ಅವರ ಕತ್ತಿನಲ್ಲಿದ್ದ ಶಾಲು ಸರಿದಂತಾಗಿದ್ದು, ಈ ವೇಳೆ ಅವರ ಮಾಂಗಲ್ಯ ಸರ ಕಳುವಾಗಿರುವ ಸಾಧ್ಯತೆ ಇದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ