SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 8, 2024 | STATE NEWS | ತೀರ್ಥಹಳ್ಳಿ ಮೂಲದ ಶಂಕಿತ ಅರಾಫತ್ ಅಲಿಯ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾ ಗೊಳಿಸಿದೆ. ಈ ಮೂಲಕ ಈ ಹಿಂದೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನ ಎತ್ತಿ ಹಿಡಿದಿದೆ. ಈ ವೇಳೆ ಹೈಕೋರ್ಟ್ ವೈಯಕ್ತಿಕ ಸ್ವಾತಂತ್ರ್ಯಕ್ಕಿಂತಲೂ ರಾಷ್ಟ್ರೀಯ ಹಿತಾಸಕ್ತಿಯ ಮುಖ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟಿದೆ.
UAPA ಕಾಯ್ದೆಯ ಅಡಿಯಲ್ಲಿ ಆರೋಪಿಯಾಗಿರುವ ಅರಾಫತ್ ಅಲಿ ಪರ ವಕೀಲರು, ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ಬಗ್ಗೆ ಹೈಕೋರ್ಟ್ ಗಮನ ಸೆಳೆದಿದ್ದರು. ಇನ್ನೊಂದೆಡೆ ಎನ್ಐಎ ಕೋರ್ಟ್ ಮುಂದೆ ಹಲವು ಪ್ರಾಥಮಿಕ ಸಾಕ್ಷ್ಯಗಳನ್ನ ಇಟ್ಟಿತ್ತು. ವಾದ ಪ್ರತಿವಾದ ಪರಿಶೀಲಿಸಿದ ಕೋರ್ಟ್ ಜಾಮೀನು ಅರ್ಜಿಯನ್ನ ವಜಾಗೊಳಿಸಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶಂಕಿತ ಶಂಕಿತ ಅರಾಫತ್ ಅಲಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರ್ 12, 2023 ರಂದು ಬಂಧಿಸಿತ್ತು. ಈತ ಮೂಲತಃ ತೀರ್ಥಹಳ್ಳಿಯವನಾಗಿದ್ದು, ಮಂಗಳೂರು ಗೋಡೆ ಬರಹ, ಶಿವಮೊಗ್ಗದಲ್ಲಿ ನಡೆದ ಪ್ರೇಮ್ ಸಿಂಗ್ಗೆ ಚಾಕು ಇರಿತ ಪ್ರಕರಣ ಹಾಗೂ ಟ್ರಯಲ್ ಬ್ಲಾಸ್ಟ್ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಹಾಯ ಮಾಡಿದ ಹಾಗೂ ಶಂಕಿತ ಚಟುವಟಿಕೆಗಳಿಗೆ ಪ್ರೇರಪಣೆ ನೀಡಿದ ಆರೋಪ ಹೊಂದಿದ್ದಾನೆ.
SUMMARY | Karnataka High Court rejected the bail application of Arafath Ali an ISIS operative and native of Theethalli, Shivamogga. The accused faces charges of recruiting youths to ISIS and indulging in anti-national activities

KEYWORDS | Karnataka High Court, bail application of Arafath Ali, ISIS operative ,Thirthahalli, Shivamogga, anti-national activities, NIA