SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 11, 2024 | SHIVAMOGGA WATER | ನೀರು ಕುದಿಸಿ, ಆರಿಸಿ ಕುಡಿಯಲು ಸೂಚನೆ
ಶಿವಮೊಗ್ಗ: ನಗರದ ನಾಗರಿಕರಿಗೆ ಹಬ್ಬದ ಸಂದರ್ಭದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಮಹತ್ವದ ಸೂಚನೆ ನೀಡಿದೆ.
ಕಳೆದ ಮೂರು ನಾಲ್ಕು ದಿನಗಳಿಂದ ಶಿವಮೊಗ್ಗದಲ್ಲಿ ಮಳೆಯಾಗುತ್ತಿದೆ. ಹೀಗಾಗಿ ತುಂಗಾನದಿಯ ಬಣ್ಣ ಮತ್ತೆ ಬದಲಾಗಿದ್ದು ಕೆಂದೂಳಿನಂತಹ ನೀರು ಹರಿಯುತ್ತಿದೆ. ಹೀಗಾಗಿ ನೀರು ಕುಡಿಯುವಾಗ ಎಚ್ಚರಿಕೆ ವಹಿಸಿ ಎಂದು ಪ್ರಕಟಣೆ ನೀಡಲಾಗಿದೆ.
ಏನಿದೆ ಪ್ರಕಟಣೆಯಲ್ಲಿ?
ಮಳೆಯಿಂದಾಗಿ ಗಾಜನೂರು ಡ್ಯಾಂ ಮತ್ತು ತುಂಗಾ ನದಿಯ ನೀರಿನಲ್ಲಿ ಕೆಂಪು ಬಣ್ಣ (turbidity) ಹೆಚ್ಚಾಗಿದೆ. ಹೀಗಾಗಿ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನೀರನ್ನು ಸಾರ್ವಜನಿಕರು ಕುದಿಸಿ, ಆರಿಸಿ ಕುಡಿಯುವಂತೆ ಸೂಚಿಸಲಾಗಿದೆ.

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಈ ಬಗ್ಗೆ ತಿಳಿಸಿದ್ದಾರೆ.
SUMMARY | The assistant executive engineer of the Karnataka Urban Water Supply and Sewerage Board in a release asked the people of Shivamogga to boil and drink the water
KEYWORDS | assistant executive engineer ,Karnataka Urban Water Supply and Sewerage Board, press release , people of Shivamogga , use hot water to drink