SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 23, 2025
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಪವಿತ್ರಗೌಡ ಸೇರಿದಂತೆ 7 ಜನ ಆರೋಪಿಗಳ ಜಾಮೀನನ್ನು ರದ್ದಗೊಳಿಸುವಂತೆ ಕೋರಿ ಪೊಲೀಸರು ಸುಪ್ರೀಂ ಕೋರ್ಟ್ಗೆ 1492 ಪುಟಗಳ ಅರ್ಜಿಯನ್ನು ಸಲ್ಲಿಸಿದ್ದಾರೆ.
ಈ ಹಿಂದೆ ಹೈಕೋರ್ಟ್ ಕೊಲೆ ಪ್ರಕರಣದಲ್ಲಿ ದರ್ಶನ್ ಪವಿತ್ರಗೌಡ ಸೇರಿದಂತೆ 7 ಜನ ಆರೋಪಿಗಳಿಗೆ ಜಾಮೀನನ್ನು ಮಂಜೂರು ಮಾಡಿತ್ತು. ಆದರೆ ಪೊಲೀಸರು ಆ ಜಾಮೀನನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ಗೆ 1492ಪುಟಗಳ ಮೇಲ್ಮನವಿಯನ್ನು ಸಲ್ಲಿಸಿದ್ದರು

ಜನವರಿ 24 ರಂದು ಈ ಕೇಸ್ನ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದ್ದು, ಮೊದಲಿಗೆ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಸ್ಟೇಷನ್ನಲ್ಲಿ ದಾಖಲಾಗಿದ್ದ ಎಫ್ಐಆರ್, ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ, ಆರೋಪಿಗಳ ಹಿನ್ನೆಲೆ ಮಾಹಿತಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ, ಜಾಮೀನು ಅರ್ಜಿ ಮೊದಲಿಗೆ ವಜಾಗೊಂಡಿದ್ದ ದಾಖಲೆ, ದರ್ಶನ್ ಅವರ ಅನಾರೋಗ್ಯ ಸಂಬಂಧಿಸಿದಂತೆ ವೈದ್ಯರ ವರದಿ, ಮಧ್ಯಂತರ ಜಾಮೀನು ಸೇರಿದಂತೆ ಒಟ್ಟಾರೆ ಎಲ್ಲ ಮಹತ್ವದ ದಾಖಲೆಗಳನ್ನು ಪೊಲೀಸರು ಸುಪ್ರೀಂಕೋರ್ಟ್ ಮುಂದಿಟ್ಟಿದ್ದಾರೆ.
SUMMARY | The police have filed a 1,492-page petition in the Supreme Court seeking cancellation of the bail of seven accused, including Darshan Pavithra Gowda.
KEYWORDS | Darshan, bail, cancellation, petition,