SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 18, 2024
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿ ಬಿಗ್ ರಿಲೀಪ್ ನೀಡಿತ್ತು. ಇದರ ನಡುವೆ ದರ್ಶನ್ ಗೆ ಮತ್ತೊಂದು ತಲೆನೋವು ಎದುರಾಗಿದ್ದು, ಪೊಲೀಸ್ ಇಲಾಖೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ. ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕಮಿಷನರ್ ದಯಾನಂದ ತಿಳಿಸಿದ್ದಾರೆ.

ಜೂನ್ 11ರಂದು ದರ್ಶನ್ ಸೇರಿದಂತೆ ಇತರೆ 15 ಆರೋಪಿಗಳನ್ನು ಬಂಧಿಸಲಾಗಿತ್ತು. ಇದರ ನಡುವೆ ದರ್ಶನ್ ಗೆ ಬೆನ್ನು ನೋವು ಕಾಣಿಸಿಕೊಂಡ ಹಿನ್ನಲೆ ಕೆಲದಿನಗಳ ಕಾಲ ಕೋರ್ಟ್ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿತ್ತು. ಇದೀಗ ದರ್ಶನ್ಗೆ ಹೈಕೋರ್ಟ್ ರೆಗ್ಯೂಲರ್ ಬೇಲ್ ನೀಡಿದೆ . ಈ ಹಿಂದೆಯೂ ಸಹ ಗೃಹ ಸಚಿವ ಜಿ ಪರಮೇಶ್ವರ್ ಜಾಮೀನು ವಿಚಾರವಾಗಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದ್ದರು.
SUMMARY | Bengaluru Police Commissioner B Dayanand said that they are preparing to file an appeal in the Supreme Court challenging the high court’s bail granted to Darshan and other accused in the Renuka Swamy murder case.
KEYWORDS | Bengaluru Police Commissioner, B Dayanand, Darshan Renuka Swamy murder case,