SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 6, 2024 ಶಿವಮೊಗ್ಗ ಮಹಾನಗರ ಪಾಲಿಕೆ ಕೇಬಲ್ ವಯರ್ಗಳನ್ನು ತೆರವುಗೊಳಿಸುವ ಸಂಬಂಧ ಮಹತ್ವದ ಪ್ರಕಟಣೆ ನೀಡಿದೆ.
ದಸರಾ-2024ರ ಪ್ರಯುಕ್ತ ಅ.12 ರಂದು ಕೋಟೆ ರಸ್ತೆಯಿಂದ ರಾಮಣ್ಣ ಶ್ರೇಷ್ಠಿ ಪಾರ್ಕ್- ಶಿವಪ್ಪ ನಾಯಕ ವೃತ್ತ – ಅಮೀರ್ ಅಹ್ಮದ್ ವೃತ್ತ- ಗೋಪಿ ಸರ್ಕಲ್- ಜೈಲ್ ಸರ್ಕಲ್ – ಲಕ್ಷ್ಮೀ ಟಾಕೀಸ್ ಸರ್ಕಲ್- ಪ್ರೀಡಂ ಪಾರ್ಕ್ ಮಾರ್ಗದಲ್ಲಿ ದಸರಾ ಮೆರವಣಿಗೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಅಂಬಾರಿ ಸಂಚರಿಸುವ ಈ ರಸ್ತೆಗಳಲ್ಲಿ ನೆಲದಿಂದ ಮೇಲೆ 20 ಅಡಿಯೊಳಗೆ ಹಾದು ಹೋಗಿರುವ ಎಲ್ಲಾ ಕೇಬಲ್, ವಯರ್, ತಂತಿಗಳನ್ನು ಕೂಡಲೇ ತೆರವುಗೊಳಿಸುವಂತೆ, ಇಲ್ಲವಾದಲ್ಲಿ ಪಾಲಿಕೆಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ನೆಟ್ವರ್ಕ್ ಏಜೆನ್ಸಿಗಳಿಗೆ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು(ವಿದ್ಯುತ್) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
