SHIVAMOGGA | MALENADUTODAY NEWS | ಮಲೆನಾಡು ಟುಡೆ Oct 27, 2024
ಬೆಂಗಳೂರು | ದೀಪಾವಳಿಗೆ ಊರುಗಳಿಗೆ ಹೊರಡುವವರಿಗೆ KSRTC ಪ್ರತಿವರ್ಷದಂತೆ ಈ ವರ್ಷವೂ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದೆ.
ರಾಜ್ಯೋತ್ಸವ ಹಾಗೂ ದೀಪಾವಳಿ ಮತ್ತು ವೀಕೆಂಡ್ ಎಲ್ಲವೂ ಒಟ್ಟೋಟ್ಟಿಗೆ ಇರುವುದರಿಂದ ಹೆಚ್ಚಿನ ಜನರು ತಮ್ಮ ತಮ್ಮ ಮನೆಗೆಳಿಗೆ ಹೋಗಲು ಮುಂದಾಗುತ್ತಾರೆ.
ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ 2000 ವಿಶೇಷ ಬಸ್ಗಳನ್ನು ರಸ್ತೆಗಿಳಿಸುತ್ತಿದೆ. ಇದೇ ಅಕ್ಟೋಬರ್ 30ರಿಂದ ನವೆಂಬರ್ 2 ರವರೆಗೆ ನಾಲ್ಕು ದಿನ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ನವೆಂಬರ್ 3 ಮತ್ತು 4 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಬಸ್ಗಳು ಸಂಚರಿಸಲಿದೆ.
ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಬಸ್ಗಳು ಓಡಾಟ ನಡೆಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಡ್ವಾನ್ಸ್ ಬುಕ್ಕಿಕೂಡ ಇರಲಿದ್ದು ಪಿಕ್ಅಪ್ ಪಾಯಿಂಟ್ ನೀಡಬಹುದಾಗಿದೆ.

www.ksrtc.karnataka.gov.in ವೆಬ್ಸೈಟ್ ಮೂಲಕ ಇ-ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ. ವಿಶೇಷ ಅಂದರೆ, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ 5 ರಿಯಾಯಿತಿ ಸಿಗಲಿದೆ.
ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ಸಾಗುವ ದರದಲ್ಲಿ ಶೇ 10 ರಿಯಾಯಿತಿ ದೊರೆಯಲಿದೆ ಎಂದು ಕೆಎಸ್ಆರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
SUMMARY | KSRTC has arranged an additional 2000 buses for Diwali like every year.
KEYWORDS |KSRTC ,additional 2000 buses for Diwali,