SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 12, 2024
ಶಿವಮೊಗ್ಗ | ಕನಕದಾಸರ 537 ನೇ ಜಯಂತೋತ್ಸವ ಮತ್ತು ಪತಂಜಲಿ ಸಂಸ್ಥೆಯ 27 ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಡಿಸೆಂಬರ್14 ರಂದು ಕುವೆಂಪು ರಂಗಮಂದಿರದಲ್ಲಿ ಕನಕದಾಸರ ಗೀತಗಾಯನ ಸ್ಫರ್ಧೆಯನ್ನು ಆಯೋಜಿಸಲಾಗಿದೆ. ಈ ಕುರಿತು ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಪತಂಜಲಿ ಕೆ ನಾಗರಾಜ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ, ಪತಂಜಲಿ ಶ್ರೀ ಕನಕದಾಸರ ಅಧ್ಯಯನ ಕೇಂದ್ರ, ಪತಂಜಲಿ ಕರ್ನಾಟಕ ಜಾನಪದ ಕಲಾ ಕೇಂದ್ರ, ಪತಂಜಲಿ ಹಾಲುಮತ ಜಾನಪದ ಕಲಾ ಕೇಂದ್ರ, ಪತಂಜಲಿ ಕನಕ ಮಹಿಳಾ ಸಂಘ, ಇವರುಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಕನಕ ಗುರುಪೀಠ ಹೊಸದುರ್ಗ ಶಾಖಾಮಠದ ಪಪೂ॥ ಶ್ರೀ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು ಉದ್ಘಾಟಿಸಲಿದ್ದು, ಇದರ ಅಧ್ಯಕ್ಷತೆಯನ್ನು ಪತಂಜಲಿ ಸಂಸ್ಥೆ ಗೌ:ಅಧ್ಯಕ್ಷ ಎಂ.ಈಶ್ವರಪ್ಪ ನವುಲೆ ವಹಿಸುವರು.

ಈ ರಾಜ್ಯಮಟ್ಟದ ಶ್ರೀ ಕನಕದಾಸರ ಗೀತಾಗಾಯನ ಸ್ಪರ್ಧೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಯಿಂದ ಸುಮಾರು 27 ಕಲಾ ತಂಡದ 400 ಜನ ಕಲಾವಿದರು ಭಾಗವಹಿಸಿ ತಮ್ಮ ಕಲೆಯನ್ನು ಪ್ರದರ್ಶಿಸಲಿದ್ದಾರೆ. ಹಾಗೆಯೇ ಶ್ರೀ ಕನಕದಾಸರ ತತ್ವ ಆದರ್ಶ ಕೀರ್ತನೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಉದ್ದೇಶದಿಂದ ಅಭಿಯಾನವನ್ನು ಆಯೋಜಿಸಲಾಗಿದೆ ಎಂದರು.
ಪತಂಜಲಿ ಸಂಸ್ಥೆ ಗೌ: ಉಪಾಧ್ಯಕ್ಷ ದಿ:ಕೆ.ದೇವೇಂದ್ರಪ್ಪ ಸ್ಮರಣಾರ್ಥ ಡಾ: ಡಿ.ಗೋಪಾಲ್ ಮತ್ತು ತಂಡ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ಇವರಿಂದ ಕಲಾವಿದರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. ಇದೇ ಸಂಧರ್ಭದಲ್ಲಿ ಎಲೆಮರೆಕಾಯಿಯಂತೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಕನಕಶ್ರೀ ಚೇತನ ಪತಂಜಲಿ ರತ್ನ ರಾಜ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಿ ಸನ್ಮಾನಿಸಲಾಗುವುದು ಎಂದು ಹೇಳಿದರು
SUMMARY | As part of the 537th birth anniversary of Kanakadasa and the 27th anniversary of Patanjali Foundation, kanakadasa’s geetha gayana competition could not be organised at Kuvempu Rangamandira on Dec.14.
KEYWORDS | Kanakadasa 37th birth anniversary, geetha gayana competition, Patanjali Foundation, Kuvempu Ranga Mandira, shivamogga,