Monday, 16 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
JP STORY

ಪತ್ನಿಯ ಸಂಗ ಮಾಡಬೇಡ ಎಂದವನನ್ನ ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ಖದೀಮರು | ಶಿವಮೊಗ್ಗದ ದೊಡ್ಡ ಸುದ್ದಿ

13
Last updated: September 16, 2024 7:41 pm
13
Share
SHARE

SHIVAMOGGA | MALENADUTODAY NEWS 

- Advertisement -

ಮಲೆನಾಡು ಟುಡೆ ಡಿಜಿಟಲ್‌ ನ್ಯೂಸ್‌ ಮೀಡಿಯಾ 

Sep 16, 2024  

ಶಿವಮೊಗ್ಗದಲ್ಲಿ ಮತ್ತೊಂದು ಮಿಸ್ಸಿಂಗ್‌ ಕಂಪ್ಲೆಂಟ್‌ ಪ್ರಕರಣ ವ್ಯಕ್ತಿಯೊಬ್ಬನ ಕೊಲೆಯ ಕೇಸ್‌ ಆಗಿ ಬಯಲಿಗೆ ಬಂದಿದೆ. ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪೊಲೀಸರು ದಾಖಲಿಸಿದ್ದ ಮಿಸ್ಸಿಂಗ್‌ ಪ್ರಕರಣ ಆನಂದಪುರ ಬಳಿ ಯುವತಿಯೊಬ್ಬಳ ಕೊಲೆಯಾದ ಪ್ರಕರಣವಾಗಿ ಬಯಲಿಗೆ ಬಂದಿತ್ತಷ್ಟೆ ಅಲ್ಲದೆ ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಇದೀಗ ಅಂತಹುದ್ದೆ ಮತ್ತೊಂದು ಪ್ರಕರಣವನ್ನು ಶಿರಾಳಕೊಪ್ಪ ಪೊಲೀಸ್‌ ಠಾಣೆ ಪೊಲೀಸರ ಬೇಧಿಸಿದ್ದು, ಈ ಸಂಬಂಧ ಸುಮುಟೋ ಕೇಸ್‌ ದಾಖಲಿಸಿದ್ದಾರೆ. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಶಿರಾಳಕೊಪ್ಪ ಪೊಲೀಸ್‌ ಠಾಣೆ –Shiralakoppa Police Station 

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ನಾಗೀಹಳ್ಳಿ ಗ್ರಾಮದ ವಿಚಾರವಿದು. ಇಲ್ಲಿನ ನಿವಾಸಿ ಕೃಷ್ಣಪ್ಪ ಕೊಲೆಯಾದ ದುರ್ದೈವಿ. ಈತನ ಮೃತದೇಹವನ್ನು ಕೂಡ ಛಿದ್ರ ಛಿದ್ರ ಮಾಡಿ ನದಿಗೆ ಎಸೆಯಲಾಗಿದೆ. ಪ್ರಕರಣದ ಸಂಬಂಧ ಶಿರಾಳಕೊಪ್ಪ ಪೊಲೀಸರು ಮೂವರ ವಿರುದ್ಧ FIR ಮಾಡಿದ್ದು,  THE BHARATIYA NYAYA SANHITA (BNS), 2023 (U/s-103,238,61(2),3(5))  ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ, ಸಾಕ್ಷ್ಯ ನಾಶ, ಕ್ರಿಮಿನಲ್‌ ಸಂಚು ಆರೋಪಗಳನ್ನ ಹೊರಿಸಲಾಗಿದೆ. 

ಪ್ರಕರಣ ಬಯಲಿಗೆ ಬಂದಿದ್ದು ಹೇಗೆ? 

ಕಳೆದ ಸೆಪ್ಟೆಂಬರ್‌ 7 ರಂದು ಈ ಘಟನೆ ನಡೆದಿದೆ. ಆದರೆ ಪ್ರಕರಣ ಬೆಳಕಿಗೆ ಬಂದಿದ್ದು, ನಾಪತ್ತೆ ಪ್ರಕರಣ ದಾಖಲಾದ ಬಳಿಕ. ನಾಗೀಹಳ್ಳಿ ನಿವಾಸಿ 33 ವರ್ಷದ ಕೃಷ್ಣಪ್ಪ ಎಂಬವರ ಪತ್ನಿ ಶಿರಾಳಕೊಪ್ಪ ಪೊಲೀಸ್‌ ಠಾಣೆಗೆ ತಮ್ಮ ಪತಿ ಕಾಣೆಯಾಗಿರುವುದಾಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ಆರಂಭಿಸಿದ ಶಿರಾಳಕೊಪ್ಪ ಠಾಣೆ ಪೊಲೀಸರು ಕೃಷ್ಣಪ್ಪರ ಪತ್ನಿ ನೀಡಿದ ಸಂಶಯದ ಸುಳಿವನ್ನ ಆಧರಿಸಿ ನಾಗೀಹಳ್ಳಿ ಗ್ರಾಮದ ಕಿರಣ ಎಂಬವನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಾರೆ. ಆ ಸಂದರ್ಭದಲ್ಲಿ ಕೃಷ್ಣಪ್ಪನ ಕೊಲೆಯ ರಹಸ್ಯ ಬಯಲಾಗುತ್ತದೆ. ಆತ ಹೇಳಿದ ಮಾಹಿತಿ ಆಧರಿಸಿ ಠಾಣೆಯ ಎಸ್‌ಐ ಪ್ರಶಾಂತ್‌ ಕುಮಾರ್‌ ಟಿಬಿ ಸುಮುಟೋ ಕೇಸ್‌ ದಾಖಲಿಸಿದ್ದಾರೆ. 

ನಡೆದಿದ್ದು ಏನು? 

ದಾಖಲಾಗಿರುವ ಸುಮುಟೋ ಕೇಸ್‌ನ ಎಫ್‌ಐಆರ್‌ ಪ್ರಕಾರ, ಕೃಷ್ಣಪ್ಪನ ಪತ್ನಿ ಜೊತೆ ಕಿರಣ್‌ ಎಂಬಾತ ಅನೈತಿಕ ಸಂಬಂಧ ಹೊಂದಿದ್ದ ಎಂದು ದೂರಲಾಗಿದೆ. ಇದೇ ವಿಚಾರದಲ್ಲಿ ಕೃಷ್ಣಪ್ಪ ಕಿರಣನನ್ನ ಕರೆದು ಬೈದು ಎಚ್ಚರಿಕೆ ನೀಡಿದ್ದನಂತೆ. ಈ ಕಾರಣಕ್ಕೆ ಕೃಷ್ಣಪ್ಪನನ್ನೆ ಕೊಲೆ ಮಾಡಲು ನಿರ್ಧರಿಸಿದ ಕಿರಣ ತನ್ನಿಬ್ಬರು ಸ್ನೇಹಿತರಾದ ಪ್ರತಾಪ್‌ ಹಾಗೂ ಗಣೇಶನ ಸಹಾಯ ಪಡೆದಿದ್ದಾನೆ. ಕೊಲೆಯ ಸ್ಕೆಚ್‌ ರೂಪಿಸಿಕೊಂಡ ಕಿರಣ, ಕಂದ್ಲಿ ಹಾಗೂ ಕುಡುಗೋಲು ಮತ್ತು ಪ್ಲಾಸ್ಟಿಕ್‌ ಕೊಪ್ಪೆಗಳನ್ನ ಬೈಕ್‌ವೊಂದರ ಬ್ಯಾಗ್‌ನಲ್ಲಿ ಇರಿಸಿಕೊಂಡು ಕೊಲೆ ಮಾಡಲು ಮುಂದಾಗಿದ್ದಾನೆ.

car decor

ತನ್ನ ಸ್ನೇಹಿತರಾದ ಗಣೇಶ ಹಾಗೂ ಪ್ರತಾಪನ ಮೂಲಕ ಕೃಷ್ಣಪ್ಪನಿಗೆ ಬೇರೆ ಊರಿನಲ್ಲಿ ಚೆನ್ನಾಗಿ ಕುಡಿಸಿ ತಡರಾತ್ರಿ ಗ್ರಾಮಕ್ಕೆ ವಾಪಸ್‌ ಕರೆ ತರುವಂತೆ ಹೇಳಿದ್ದೇನೆ. ಆತನ ಸ್ನೇಹಿತರು ಸಹ ಕಿರಣನ ಪ್ಲಾನಿನಂತೆ ಕೃಷ್ಣಪ್ಪನಿಗೆ ಚೆನ್ನಾಗಿ ಎಣ್ಣೆ ಹೊಡೆಸಿ ನಾಗಿಹಳ್ಳಿ ಕ್ರಾಸ್‌ ಬಳಿಗೆ ಕರೆತಂದಿದ್ದಾರೆ. ಅಲ್ಲಿಗೆ ಬಂದ ಕಿರಣ ಕೃಷ್ಣಪ್ಪನಿಗೆ ಹೊಡೆದು, ಬೈದು ನಂತರ ಕುಡುಗೋಲಿನಿಂದ ಕುತ್ತಿಗೆಗೆ ಏಟು ಕೊಟ್ಟಿದ್ದಾನೆ. ಆ ಬಳಿಕ ಅಲ್ಲಿಯೇ ಇದ್ದ ಗುಂಡಿಯೊಂದಕ್ಕೆ ಕೃಷ್ಣಪ್ಪನನ್ನ ಶಿಫ್ಟ್‌ ಮಾಡಿ ಆತನ ಅಂಗಾಂಗಗಳನ್ನ ಕತ್ತರಿಸಿ ಎರಡು ಪ್ಲಾಸ್ಟಿಕ್‌ ಚೀಲಗಳಿಗೆ ತುಂಬಿಕೊಂಡಿದ್ದಾರೆ. ಬಳಿಕ ಗಣೇಶ ಹಾಗೂ ಕಿರಣ ಒಂದು, ಪ್ರತಾಪ ಇನ್ನೊಂದು ಶವದ ಚೀಲವನ್ನ ಹಿಡಿದು ಕೊರಟೆಗೆರೆ , ಚಿಕ್ಕರೂರು, ಬಾರಂಗಿ ಮೂಲಕ ಗೋಂದಿ ಬ್ರಿಡ್ಜ್‌ ಬಳಿಗೆ ತೆರಳಿದ್ದಾರೆ. ಅಲ್ಲಿ ನದಿಗೆ ಎರಡು ಚೀಲದಲ್ಲಿದ್ದ ಕೃ‍ಷ್ಣಪ್ಪನ ಅಂಗಾಂಗಗಳನ್ನ ಸುರಿದು ಎಸ್ಕೇಪ್‌ ಆಗಿದ್ದಾರೆ. 

ನಾಪತ್ತೆ ಪ್ರಕರಣವನ್ನು ಸೀರಿಯಸ್‌ ಆಗಿ ತೆಗೆದುಕೊಂಡಿದ್ದ ಪೊಲೀಸರು ಕಿರಣ್‌ನನ್ನ ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಕೃತ್ಯ ಬಯಲಿಗೆ ಬಂದಿದೆ. ಸದ್ಯ ಈ ಸಂಬಂಧ ಕೇಸ್‌ ದಾಖಲಾಗಿದ್ದು, ಸ್ವತಃ ಪೊಲೀಸರೇ ಸುಮುಟೋ ಕೇಸ್‌ ದಾಖಲಿಸಿರುವುದು ಇನ್ನಷ್ಟು ಕುತೂಹಲ ಮೂಡಿಸಿದೆ.

 

shimoga hindu mahasaba Ganapati | ಗಣೇಶಪ್ಪರ ಮನೆಯಿಂದ ಬಂದ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ | ಏನಿದೆ ಈ ಸಲ ವಿಶೇಷ | ವಿಸರ್ಜನೆ ಯಾವಾಗ?

naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ 

malenadutoday add
Share This Article
Facebook Whatsapp Whatsapp Telegram Threads Copy Link
Previous Article Shivamogga Fast news | ಮಸೀದಿ ಬಳಿ ಬಂದ ಗಣಪನಿಗೆ ಮುಸ್ಲಿಮರಿಂದ ಹಾರ | ಹಾಲಿನ ವ್ಯಾನ್‌ ಡಿಕ್ಕಿ ಮಹಿಳೆಯ ದುರ್ಮರಣ | ಗಣಪತಿ ವಿಸರ್ಜನೆ ವೇಳೆ ವೈಯಕ್ತಿಕ ಹೊಡೆದಾಟ
Next Article ರಸ್ತೆ ಬಿಟ್ಟು ದಿಬ್ಬ ಹತ್ತಿದ ಕಾರು | ರಸ್ತೆ ಪಕ್ಕದ ಅಪರಿಚಿತ ವ್ಯಕ್ತಿ ಶವ ಪತ್ತೆ | ಗಣಪತಿ ವಿಸರ್ಜನೆ ವೇಳೆ ಯುವಕರ ವ್ಯಾಜ್ಯ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

BIGNEWS | ಶಿವಮೊಗ್ಗದಲ್ಲಿ ಹೆಬ್ಬಟ್ಟು ಮಂಜನ ಹುಡುಗರ ಓಡಾಟ? ಆ ಪವಿತ್ರ ಕ್ಷೇತ್ರದಲ್ಲಿ ಟಾರ್ಗೆಟ್‌ ಯಾರು? JP STORY

By 13

ಕಾಡು ಬಿಟ್ಟು ಬಂದವರು ಕೋವಿ ಎಲ್ಲಿ ಬಿಟ್ಟರು! NIA, ಪೊಲೀಸರಿಗೆ ಟೆನ್ಶನ್‌ ನೀಡಿದ ವೆಪನ್ಸ್‌ ಡಂಪ್‌ಯಾರ್ಡ್‌!

By 13
JP STORY

ಬೆಳಕಿಗೆ ಕಂಡ ಮಲೆನಾಡು ಟುಡೆ ಕಾಡಿನ ಶಿಕಾರಿ ವರದಿ | ಕಾಡುಕೋಣದ ಬೇಟೆಗಾರರು ಅರೆಸ್ಟ್!

By 13

ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಬೀದಿನಾಯಿ ಪ್ರಕರಣಕ್ಕೆ ಮನೆಕಾ ಸಂಜಯ್‌ ಗಾಂಧಿ ಎಂಟ್ರಿ | ಏನಿದು ಕ್ರೂರ ಕೃತ್ಯದ ಕೇಸ್‌

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up