SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 16, 2025
ಶಿವಮೊಗ್ಗ | ಕರ್ನಾಟಕ ಕಾರ್ಯನಿರತ ಪತ್ರಕರ್ತರ 39 ಮೇ ವರ್ಷದ ರಾಜ್ಯ ಸಮ್ಮೇಳನವನ್ನು ಜನವರಿ 18 ಮತ್ತು 19 ರಂದು ತುಮಕೂರಿನಲ್ಲಿ ನಡೆಸಲಿದ್ದೇವೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶಿವಕುಮಾರ್ ತಿಳಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅತಿ ಹೆಚ್ಚಿನ ಕಾರ್ಯನಿರತ ಪತ್ರಕರ್ತರ ಸದಸ್ಯತ್ವವನ್ನೊಳಗೊಂಡ ಕಾರ್ಮಿಕ ಕಾಯ್ದೆಯಡಿ ನೋಂದಾಯಿಸಿಲ್ಪಟ್ಟ ದೇಶದ ಏಕೈಕ ಪತ್ರಕರ್ತರ ಸಂಘಟನೆಯಾಗಿದೆ. ಆಧುನಿಕ ತಾಂತ್ರಿಕ ಬದಲಾವಣೆಗಳಿಗೆ ತಕ್ಕಂತೆ ಪತ್ರಕರ್ತರು ಒಗ್ಗಿಕೊಳ್ಳುವುದು ದೊಡ್ಡ ಸವಾಲೇ ಸರಿ, ಇಂತಹ ಸಂದರ್ಭದಲ್ಲಿ ಪತ್ರಕರ್ತರ ಬೌದ್ಧಿಕ ವಿಕಸನ ಮತ್ತು ಬೌದ್ಧಿಕ ಉನ್ನತೀಕರಣಕ್ಕೆ ಸಂಬಂಧಿಸಿದಂತೆ ಅರಿವು ಮೂಡಿಸುವುದರ ಬಗ್ಗೆ ತರಭೇತಿ ನೀಡಲಾಗುತ್ತಿದೆ. ಹಾಗೆಯೇ ಪತ್ರಕರ್ತರಿಗೆ ಇರುವ ಅನೇಕ ಸೌಲಭ್ಯಗಳ ಬಗ್ಗೆ ಇಲ್ಲಿ ನಾವು ತಿಳಿಸಲಿದ್ದೇವೆ. ಈ ಸಂದರ್ಭದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ಕ್ಯಾಶ್ ಲೆಸ್ ತಪಾಸಣೆಗೆ ಒತ್ತಾಯ ಮಾಡಲಾಗುತ್ತದೆ ಎಂದರು.
ಈ ಕಾರ್ಯಕ್ರಮವು ಸಾಂಸ್ಕ್ರತಿಕ ಮೆರವಣಿಗೆಯ ಮೂಲಕ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ ತುಮಕೂರಿನ ಜಿಲ್ಲಾ ಉಸ್ತುವಾರಿಯಾದ ಡಾ.ಜಿ ಪರಮೇಶ್ವರ್ ಚಾಲನೆ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಸಿ ಎಂ ಸಿದ್ದರಾಮಯ್ಯ ವಹಿಸಲಿದ್ದು, ಸಿದ್ಧಲಿಂಗ ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ವಹಿಸಲಿದ್ದಾರೆ ಎಂದರು.
ಹಾಗೆಯೇ ಅಂದು ಸಂವಿಧಾನ ಮತ್ತು ಮಾಧ್ಯಮದ ಬಗ್ಗೆ ಚರ್ಚೆ ನಡೆಯಲಿದ್ದು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಹೆಚ್ ಕೆ ಪಾಟೀಲ್ ಮಾಡಲಿದ್ದಾರೆ. ವಿಷಯ ಮಂಡನೆಯನ್ನು ಜಿ ಎನ್ ಮೋಹನ್ ಮಾಡಲಿದ್ದಾರೆ ಎಂದರು. ಎರಡು ದಿನಗಳ ನಡೆಯುವ ಈ ಗೋಷ್ಠಿಯಲ್ಲಿ ಅನೇಕ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ 3000 ಹೆಚ್ಚುಜನ ತಮ್ಮ ಹೆಸರನ್ನು ನೊಂದಾಯಿಸಿ ಕೊಂಡಿದ್ದಾರೆ ಎಂದರು.
SUMMARY | The 39th May State Conference of Karnataka Working Journalists will be held in Tumkur on January 18 and 19
KEYWORDS | State Conference, Journalists, Tumkur,