SHIVAMOGGA | MALENADUTODAY NEWS | Aug 26, 2024 ಮಲೆನಾಡು ಟುಡೆ
ಬೆಂಗಳೂರು ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ತೂಗುದೀಪ ರವರಿಗೆ (Darshan Thoogudeepa) ವಿಶೇಷ ಆತಿಥ್ಯ ನೀಡಲಾಗುತ್ತಿದೆ ಎಂಬುದಕ್ಕೆ ಸಾಕ್ಷಿ ಹೇಳುವಂತ ಫೋಟೋಗಳು ನಿನ್ನೆ ವೈರಲ್ ಆಗಿತ್ತು. ಇದರ ಬೆನ್ನಲ್ಲೆ ವಿಡಿಯೋ ಕಾಲ್ವೊಂದರಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ. ಇದನ್ನ ಮೊಬೈಲ್ ಸ್ಟೇಟಸ್ ಒಂದಕ್ಕೆ ವ್ಯಕ್ತಿಯೊಬ್ಬರು ಹಾಕಿಕೊಂಡಿದ್ದರು. ಈ ವಿಡಿಯೋ ಸಹ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಪರಪ್ಪನ ಅಗ್ರಹಾರದಲ್ಲಿ ಏನಾಗುತ್ತಿದೆ
ಇನ್ನೂ ಫೋಟೋ ಹಾಗೂ ವಿಡಿಯೋ ವೈರಲ್ ಆದ ಬೆನ್ನಲ್ಲೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹಿರಿಯ ಅಧಿಕಾರಿಗಳು ಪರಪ್ಪನ ಅಗ್ರಹಾರಕ್ಕೆ ಭೇಟಿಕೊಟ್ಟಿದ್ದಾರೆ. ಅಲ್ಲದೆ ದರ್ಶನ್ ಇರುವ ಅತಿಭದ್ರತಾ ಬ್ಯಾರಕ್ನಲ್ಲಿ ಪರಿಶೀಲನೆ ನಡೆಸಿದ್ದಾರೆ. ವಿಡಿಯೋ ಹಾಗೂ ಫೋಟೋಗಳು ತೆಗೆದ ಸ್ಥಳಗಳನ್ನ ಪರಿಶೀಲಿಸಿ ವೈರಲ್ ದೃಶ್ಯಗಳಿಗೆ ತುಲನೆ ಮಾಡಿದ್ದಾರೆ.
ಮಾಲಿನಿ ಕೃಷ್ಣಮೂರ್ತಿ
ಮತ್ತೊಂದೆಡೆ ಈ ಬಗ್ಗೆ ಮಾತನಾಡಿರುವ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಪೊಲೀಸ್ ಮಹಾನಿರ್ದೇಶಕಿ ಮಾಲಿನಿ ಕೃಷ್ಣಮೂರ್ತಿ ತಪ್ಪು ನಡೆದಿದ್ದರೆ ಕಠಿಣ ಕ್ರಮ ಗ್ಯಾರಂಟಿ ಎಂದಿದ್ದಾರೆ.


ಇನ್ನಷ್ಟು ಸುದ್ದಿಗಳು
-
Shivamogga court | @ಜೈಲರ್ ಕೊಲೆ ಕೇಸ್ | ಇಬ್ಬರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ , ಮೂವರಿಗೆ ಐದು ವರ್ಷ ಜೈಲು
-
ವೃದ್ಧಾಪ್ಯ ವೇತನದ ದುಡ್ಡು ಕೇಳಿದ್ರೆ ಗೆಟ್ ಔಟ್ , ಹೋಗಿ ಸಾಯಿ ಅಂತಾರಂತೆ | ಅಜ್ಜಿ ಅಳಲನ್ನ ಆಲಿಸುತ್ತಾ ವ್ಯವಸ್ಥೆ?
-
Anandpur Sagar | ಐತಿಹಾಸಿಕ ಪುಷ್ಕರಣಿಯಲ್ಲಿ ಈಜುವಾಗ ಬೆಂಗಳೂರು ಮೂಲದ ಯುವಕ ಸಾವು