Sunday, 10 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಫೆಬ್ರವರಿ 14,15 ರಂದು ಆರ್ಯವೈಶ್ಯ ಮಹಾಜನ ಸಮಿತಿಯಿಂದ ಶತಮಾನೋತ್ಸವ ಸಂಭ್ರಮ

131
Last updated: February 12, 2025 10:07 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ

ಶಿವಮೊಗ್ಗ | ಫೆಬ್ರವರಿ 14ರಿಂದ 16ರ ವರೆಗೆ ಆರ್ಯವೈಶ್ಯ ಮಹಾಜನ ಸಮಿತಿ ವತಿಯಿಂದ ಶತಮಾನೋತ್ಸವ ಸಂಭ್ರಮ ಹಾಗೂ ಸುವರ್ಣ ಸೀರೆ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಿ.ಎಸ್. ಅರುಣ್ ಹೇಳಿದರು.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರ್ಯವೈಶ್ಯ ಮಹಾಜನ ಸಮಿತಿಯು ಹಲವು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು, ಈಗ ಶತಮಾನೋತ್ಸವದ ಸಂಭ್ರಮವನ್ನು ಆಚರಿಸಲಾಗುತ್ತಿದೆ ಎಂದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಫೆಬ್ರವರಿ 14ರಂದು ಬೆಳಗ್ಗೆ 7.30ರಿಂದ ಮಧ್ಯಾಹ್ನದವರೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‍ನಲ್ಲಿ ವಾಸವಿ ವ್ರತ, ಹೋಮ ಹಾಗೂ ಸಮಾಜದ ಪದ್ಧತಿಯಂತೆ 102 ದಂಪತಿಗಳೊಂದಿಗೆ 102 ದಿನಗಳ ವಾಸವಿ ಚರಿತ್ರೆ ಸಾಮೂಹಿಕ ಪಾರಾಯಣದ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ಸಂಜೆ 7 ಗಂಟೆಗೆ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದ ಮುಂಭಾಗ ದೀಪೋತ್ಸವ ಮತ್ತು ಆಶೀರ್ವಚನವನ್ನು ಏರ್ಪಡಿಸಲಾಗಿದೆ ಎಂದರು.

ಫೆ. 15 ರಂದು ಬೆಳಗ್ಗೆ 7.30ರಿಂದ ಮಧ್ಯಾಹ್ನ 1.30ರವರೆಗೆ ಷಷ್ಠಿಪೂರ್ತಿ ಮಹೋತ್ಸವ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮದುವೆಯಾಗಿ 60 ವರ್ಷ ತುಂಬಿದ 27 ದಂಪತಿಗಳಿಗೆ ಷಷ್ಠಿ ಪೂರ್ತಿಯನ್ನು ಸಮಿತಿ ವತಿಯಿಂದಲೇ ಆಚರಿಸಲಾಗುವುದು. ಹಾಗೆಯೇ ಸಮಜೆ 6 ಗಂಟೆಗೆ ದೇವಸ್ಥಾನದ ಮುಂಭಾಗ ಅಮ್ಮನವರಿಗೆ ವಿಶೇಷ ಉಯ್ಯಾಲೋತ್ಸವ ನಡೆಯಲಿದೆ. ಮತ್ತು 7.30ಕ್ಕೆ ಬೆಂಗಳೂರಿನ ವಾಸವಿ ಪೀಠಂನ ಪೀಠಾಧ್ಯಕ್ಷ  ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಚನ ನಡೆಯಲಿದೆ ಎಂದರು.

ಫೆ. 16ರಂದು ಬೆಳಗ್ಗೆ 8 ಗಂಟೆಗೆ ಅಮ್ಮನವರಿಗೆ ಸುಮಾರು ಅರ್ಧ ಕೆಜಿ ಬಂಗಾರವಿರುವ 35 ಲಕ್ಷ ರೂ. ಬೆಲೆ ಬಾಳುವ ಬಂಗಾರದ ಸೀರೆ ಸಮರ್ಪಿಸಲಾಗುವುದು. ನಂತರ 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಶತಮಾನೋತ್ಸವದ ಸಮಾರೋಪ ಸಮಾರಂಭ ನಡೆಯುವ ಕುವೆಂಪು ರಂಗಮಂದಿರಕ್ಕೆ ತೆರಳಲಾಗುವುದು ಎಂದರು.

ಬೆಳಗ್ಗೆ 10 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಶತಮಾನೋತ್ಸವ ಸಮಾರಂಭವನ್ನು ಬೆಂಗಳೂರಿನ ಬ್ರಿಗೇಡ್ ಗ್ರೂಪ್ ಸಿಎಂಡಿ ಎಂ.ಆರ್. ಜೈಶಂಕರ್ ಉದ್ಘಾಟಿಸುವರು. ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಗಳು ಸಾನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಧನಂಜಯ ಸರ್ಜಿ, ಡಿ.ಎಸ್. ಅರುಣ್, ಆರ್ಯ ವೈಶ್ಯ ಮಹಾಸಭಾ ರಾಜ್ಯಾಧ್ಯಕ್ಷ ಆರ್.ಪಿ. ರವಿಶಂಕರ್, ಜಿಲ್ಲಾಧ್ಯಕ್ಷ ಭೂಪಾಳಂ ಎಸ್. ಶಶಿಧರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು. ಸಂಜೆ 5.30ಕ್ಕೆ ಮಂಜರಿ ಚಂದ್ರ ಪುಷ್ಪರಾಜ್ ಅವರ ನೇತೃತ್ವದಲ್ಲಿ ನೃತ್ಯ, ಮತ್ತು ಶಿವಮೊಗ್ಗದ ಸಹಚೇತನ ನಾಟ್ಯಾಲಯದ ವತಿಯಿಂದ ವಿಶೇಷ ಸಾಂಸ್ಕತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

SUMMARY | Arya Vaishya Mahajana Samiti has organised centenary celebrations and golden saree dedication ceremony

KEYWORDS | Arya Vaishya Mahajana Samiti,  centenary celebrations, shivamogga,

Share This Article
Facebook Whatsapp Whatsapp Telegram Threads Copy Link
Previous Article ATM ನಲ್ಲಿ ಜನರನ್ನ ಯಾಮಾರಿಸಿ ದುಡ್ಡು ಹೇಗೆ ಎಗರಿಸ್ತಾರೆ ಗೊತ್ತಾ! ಇಲ್ಲಿದೆ ನೋಡಿ ಸಾಗರ ಕೇಸ್‌!
Next Article ಮಹಿಳಾ ಅಧಿಕಾರಿಯ ಮೇಲೆ ದೌರ್ಜನ್ಯ ಖಂಡಿಸಿ ಫೆಬ್ರವರಿ 14 ಕ್ಕೆ ಪ್ರತಿಭಟನೆ | ನಿಖಿಲ್‌ ಕುಮಾರ್‌ಸ್ವಾಮಿ ಭಾಗಿ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಪ್ರತ್ಯಂಗೀರ ದೇವಾಲಯದಲ್ಲಿ ಕಡಂಬಳ ಹಾವು ಪ್ರತ್ಯಕ್ಷ | ಸ್ನೇಕ್‌ ಕಿರಣ್‌  ಆಪರೇಷನ್‌

By 131
lastritess
SHIVAMOGGA NEWS TODAY

Pahalgam Terrorist Attack | ಉಗ್ರರ ಗುಂಡಿಗೆ ಬಲಿಯಾದ ಮಂಜುನಾಥ್​ಗೆ ಶಿವಮೊಗ್ಗದ ಅಂತಿಮ ನಮನ! ಹೇಗೆ ಸಾಗಿತು ನೋಡಿ ಮೆರವಣಿಗೆ

By Prathapa thirthahalli
sigandur launches
SHIVAMOGGA NEWS TODAY

Sigandur launches: july 15 ಸಿಗಂದೂರು ಲಾಂಚ್‌ಗಳು  ಹೋಟೆಲ್‌ಗಳಾಗಿ ಪರಿವರ್ತನೆ..? : ಶಾಸಕ ಬೆಳ್ಳೂರು ಗೋಪಾಲಕೃಷ್ಣ

By Prathapa thirthahalli
bike accident
SHIVAMOGGA NEWS TODAY

bike accident : ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up