ಬಿಜೆಪಿಯವರು ಎಂದಿಗೂ ಗಾಂಧಿ ತತ್ವ ಒಪ್ಪಲ್ಲ| ಆರ್‌ ಪ್ರಸನ್ನ ಕುಮಾರ್‌

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 16, 2025

ಶಿವಮೊಗ್ಗ | ಬಿಜೆಪಿಯವರು ಎಂದಿಗೂ ಗಾಂಧಿ ತತ್ವವನ್ನು ಒಪ್ಪಲಿಲ್ಲ ಎಂದು ಬಿಜೆಪಿ ವಿರುದ್ದ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ  ಆರ್‌ ಪ್ರಸನ್ನ ಕುಮಾರ್‌ ವಾಗ್ದಾಳಿ ನಡೆಸಿದರು.

ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕೇಂದ್ರ ಗೃಹ ಸಚಿವ  ಅಮಿತ್ ಶಾರವರು ಈ ಹಿಂದೆ ಅಂಬೇಡ್ಕರ್‌ರವರನ್ನಿ ಅವಮಾನಿಸಿದ್ದರು. ಅಷ್ಟೇ ಅಲ್ಲದೆ ಗಾಂಧೀಜಿಯನ್ನು ಕೊಂದ ನಾಥೂರಾಮ್ ಗೋಡ್ಸೆರವರಿಗೆ ಬಿಜೆಪಿಯವರು ದೇವಸ್ಥಾನ ಕಟ್ಟಿಸಿದ್ದಾರೆ. ಹೀಗೆ ಎಲ್ಲಾ ವಿಷಯದಲ್ಲಿಯೂ ವಿರೋದ ವ್ಯಕ್ತಪಡಿಸುತ್ತಿರುವ ಬಿಜೆಪಿಯವರು ಎಂದಿಗೂ ಗಾಂಧಿ ತತ್ವವನ್ನು ಒಪ್ಪಲ್ಲ  ನಾವು ಸಂವಿಧಾನಕ್ಕೆ ಗೌರವ ಕೊಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.

ಜ.21 ರಂದು ಕಾಂಗ್ರೆಸ್ ಅಧಿವೇಶನ

ಕಳೆದ ತಿಂಗಳು ಬೆಳಗಾವಿಯಲ್ಲಿ ಕಾಂಗ್ರೆಸಿನ ಅಧಿವೇಶನ  ಹಮ್ಮಿಕೊಳ್ಳಲಾಗಿತ್ತು.ಆದರೆ ನಮ್ಮ ನಾಯಕರಾದ ಡಾ. ಮನಮೋಹನ್‌ ಸಿಂಗ್‌ ರವರ ನಿಧನದಿಂದ ಆ ಕಾರ್ಯಕ್ರಮವನ್ನು ಮುಂದೂಡಿದ್ದೆವು. ಜನವರಿ 21 ರಂದು ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಎಂಬ ಹೆಸರಿನಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸಿನ ಅಧಿವೇಶನವನ್ನು ನಡೆಸಲಿದ್ದೇವೆ ಎಂದರು.ಹಾಗೆಯೇ ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆ ವಹಿಸಿ ನಡೆಸಿದ ಕಾರ್ಯಕ್ರಮಕ್ಕೆ 100 ವರ್ಷ ತುಂಬಿದ ಹಿನ್ನಲೆ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅಂದು  ಬೆಂಗಳೂರಿನಲ್ಲಿರುವ ಗಾಂಧಿ ಪ್ರತಿಮೆಯ ರೀತಿಯೇ  ಸುವರ್ಣಸೌಧದಲ್ಲಿ ಒಂದು ಗಾಂಧಿ ಪ್ರತಿಮೆಯನ್ನು ಅನಾವರಣ ಗೊಳಿಸುತ್ತಿದ್ದೇವೆ. ಈ ಕಾರ್ಯಕ್ರಮಕ್ಕೆ  ಶಿವಮೊಗ್ಗ ಜಿಲ್ಲೆಯಿಂದ 3 ಸಾವಿರ ಹೊರಡಲಿದ್ದಾರೆ ಕಾಂಗ್ರೆಸಿಗರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಹೆಮ್ಮೆಯ ಸಂಗತಿಯಾಗಿದೆ. ಸಿ ಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್  ಸೇರಿದಂತೆ ಪ್ರಮುಖರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

SUMMARY | Congress district president R Prasanna Kumar attacked the BJP, saying it never accepted Gandhian principles.

KEYWORDS |  Congress, R Prasanna Kumar,  BJP,

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು