SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 20, 2024 Bike Accident
ಶಿವಮೊಗ್ಗದ ಹೊನ್ನಾಳಿ ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿಯಾಗಿ ಬೈಕ್ ಸವಾರರೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಶಿವಮೊಗ್ಗ ಹೊನ್ನಾಳಿ ಮಾರ್ಗದಲ್ಲಿ ಸಿಗುವ ಬುಳ್ಳಾಪುರ ಬಳಿ ಘಟನೆ ನಡೆದಿದೆ. ಇದೇ ಮಾರ್ಗದಲ್ಲಿ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮುಂದೆ ಸಾಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತರನ್ನ ಮೋಹನ್ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಬೈಕ್ ಜಖಂಗೊಂಡಿದ್ದು ಅತಿವೇಗ ಘಟನೆಗೆ ಕಾರಣವಾಗಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ