SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 7, 2024 ಡಾಕ್ಟರ್ ವಿರುದ್ಧ ಕೇಸ್ |
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರ ಕೆನ್ನೆಗೆ ಹೊಡೆದ ಪ್ರಕರಣ ಸಂಬಂದ ಇಲ್ಲಿನ ವೈದ್ಯರ ವಿರುದ್ಧ ಸಾಗರ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸಂತಾನಹರಣ ಚಿಕಿತ್ಸೆಗೆ ಬಂದಿದ್ದ ಮಹಿಳೆಯ ಕೆನ್ನೆಗೆ ಹೊಡೆದ ಆರೋಪ ವೈದ್ಯರ ಮೇಲಿದೆ. ಈ ಸಂಬಂಧ ಸಂಬಂಧಪಟ್ಟವರು ನೀಡಿದ ದೂರಿನನ್ವಯ ಕೇಸ್ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.
ಬೆಂಗಳೂರಲ್ಲಿ ಟೆಕ್ಕಿ ಸಾವು
ಬೆಂಗಳೂರಿನ ಈಜಿಪುರದಲ್ಲಿ ನೆಲಸಿದ್ದ ತೀರ್ಥಹಳ್ಳಿ ಮೂಲದ ಟೆಕ್ಕಿ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಪತ್ನಿಯ ಸಾವಿಗೆ ಕಾರಣವಾದ ಆರೋಪ ಕೇಳಿಬಂದಿದೆ. ಕುಂದಾಪುರ ಮೂಲದ 30 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಆಕೆಯ ಪತಿಯೇ ಕಾರಣ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ದೂರಿದ್ದಾರೆ.

ವಿಷಸೇವಿಸಿದ್ದ ವ್ಯಕ್ತಿ ಸಾವು
ಇತ್ತ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಿವಾಸಿ 55 ವರ್ಷದ ವ್ಯಕ್ತಿಯೊಬ್ಬರು ವಿಷಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಕುಡಿದು ಒದ್ದಾಡುತ್ತಿದ್ದ ಇವರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಮೆಗ್ಗಾನ್ನಲ್ಲಿ ಸೂಕ್ತ ಸಮಯದಲ್ಲಿ ಸಮರ್ಪಕ ಚಿಕಿತ್ಸೆ ನೀಡಿಲ್ಲ. ಇದರಿಂದಾಗಿ ವ್ಯಕ್ತಿ ಆಸ್ಪತ್ರೆಯ ಬಳಿಯಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಮೃತನ ಕಡೆಯವರು ದೂರಿದ್ದಾರೆ.