SHIVAMOGGA | MALENADUTODAY NEWS | ಮಲೆನಾಡು ಟುಡೆ Dec 27, 2024
ದೇಶ ಕಂಡ ಅತ್ಯುತ್ತಮ ನಾಯಕರ ಪೈಕಿ ಪ್ರಮುಖರಾದ ಮನಮೋಹನ್ ಸಿಂಗ್ರವರ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಳು ದಿನಗಳ ಕಾಲ ಶೋಕಾಚರಣೆಗೆ ಸರ್ಕಾರ ನಿರ್ಧರಿಸಿದೆ. ಅಲ್ಲದೆ ಇವತ್ತು ಅಂದರೆ ಡಿಸೆಂಬರ್ 27 ರಂದು ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಮೇಲಾಗಿ ಬೆಳಗಾವಿಯಲ್ಲಿ ಜರುಗಬೇಕಾಗಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಗಾಂಧೀ ಭಾರತ ಕಾರ್ಯಕ್ರಮವನ್ನು ಸಹ ರದ್ದು ಗೊಳಿಸಲಾಗಿದೆ. ಈ ಸಂಬಂಧ ಮಾಹಿತಿ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿಯಲ್ಲಿ ಇವತ್ತು ಬೆಳಗ್ಗೆ 10.30ಕ್ಕೆ ಸಿಪಿಎಡ್ ಮೈದಾನದಲ್ಲಿ ಶೃದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಮಾಜಿ ಪ್ರಧಾನಿ ನಿಧನಕ್ಕೆ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ, ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
SUMMARY |Government holiday across the state today in wake of former Prime Minister Manmohan Singh’s death. Seven-day mourning, Belgaum Congress program cancelled

KEY WORDS | Government holiday in state today, former Prime Minister Manmohan Singh no more Seven-day mourning, Belgaum Congress program cancelled