SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 21, 2024 by vijayendra
ಶಿವಮೊಗ್ಗ ಅರಣ್ಯ ಇಲಾಖೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಹಲವಾರು ಮರಗಳಿವೆ. ಈ ಮರಗಳನ್ನ ಅಧಿಕಾರಿಗಳೇ ಕಡಿದಿದ್ದಾರೆ ಎಂದು ಸ್ವತಃ ಅರಣ್ಯ ಸಚಿವರಿಗೆ ದೂರು ಸಲ್ಲಿಕೆಯಾಗಿತ್ತು. ಇದೀಗ ಕಾರಣ ಕೇಳಿ ಅರಣ್ಯ ಇಲಾಖೆಯಿಂದ ನೋಟಿಸ್ ಜಾರಿ ಮಾಡಲಾಗಿದೆ.
ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ -Office of the Chief Conservator of Forests, Shivamogga
ಶಿವಮೊಗ್ಗ ಸಿಸಿಎಫ್ ಕಚೇರಿ ಸಿಟಿ ವ್ಯಾಪ್ತಿಯಲ್ಲಿಯೇ ಇದ್ದರೂ ಮಲೆನಾಡಿನ ಪರಿಸರಕ್ಕೆ ಸಾಕ್ಷಿ ಎಂಬಂತಿದೆ. ಇಲ್ಲಿನ ಮರಗಳನ್ನ ಅಷ್ಟೆ ಮುತುವರ್ಜಿಯಿಂದ ಪಾಲನೆ ಮಾಡಲಾಗುತ್ತಿದೆ. ಇದರ ನಡುವೆ ಅರಣ್ಯ ಇಲಾಖೆಯ ಅಧಿಕಾರಿಗಳು ಮರಗಳನ್ನ ಕಟಾವ್ ಮಾಡಿಸಿದ್ದಾರೆ. ಇದಕ್ಕೆ ಕಾರಣ ಇಲಾಖೆಯಿಂದ ತಿಳಿಯುತ್ತಿಲ್ಲ. ಈ ನಡುವೆ ಅಧಿಕಾರಿಗಳ ವರ್ತನೆ ಬಗ್ಗೆ ಸಾರ್ವಜನಿಕರು ಫೋಟೋ ಸಮೇತ ಅರಣ್ಯ ಸಚಿವ ಈಶ್ವರ್ ಖಂಡ್ರೆಯವರಿಗೆ ದೂರು ನೀಡಿದ್ದರು.
ಅರಣ್ಯ ಇಲಾಖೆ ಸಚಿವ ಈಶ್ವರ್ ಬಿ ಖಂಡ್ರೆ -, Forest Minister Ishwar B Khandre
ಸಾರ್ವಜನಿಕರ ದೂರನ್ನ ಆಧರಿಸಿ ಅರಣ್ಯ ಇಲಾಖೆ ಸಚಿವರ ಈಶ್ವರ್ ಖಂಡ್ರೆ ಮರ ಕಡಿದಿರುವುದಕ್ಕೆ ಕಾರಣ ಕೇಳಿದ್ದಾರೆ.

ಶಿವಮೊಗ್ಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರ (ಸಿಸಿಎಫ್) ಕಚೇರಿಯ ಆವರಣದಲ್ಲಿ ಹಲವಾರು ಬೃಹತ್ ಮರಗಳನ್ನು ಕಡಿದು ದಿಮ್ಮಿಗಳನ್ನು ಲಾರಿಗಳಲ್ಲಿ ಸಾಗಿಸಲಾಗಿದೆ ಎಂಬ ಸಚಿತ್ರ ಮಾಹಿತಿ ಈ ಕಚೇರಿಗೆ ಬಂದಿದೆ. ಅರಣ್ಯ ಇಲಾಖೆಯ ಕಚೇರಿ ಅವರಣದ ಈ ಬೃಹತ್ ವೃಕ್ಷಗಳ ಹನನಕ್ಕೆ ಕಾರಣವೇನು? ನಿಯಮಾನುಸಾರ ಮರ ಕಡಿತಲೆಗೆ ಅರ್ಜಿ ಸಲ್ಲಿಸಿ ಮರ ಕಡಿಯಲು ಆದೇಶ ಪಡೆಯಲಾಗಿದೆಯೇ? ಕಡಿದ ಮರಗಳನ್ನು ಯಾವ ಡಿಪೋಗೆ ಸಾಗಿಸಲಾಗಿದೆ ಎಂಬ ಸಂಪೂರ್ಣ ವಿವರವನ್ನು 3 ದಿನಗಳ ಒಳಗಾಗಿ ಈ ಕಚೇರಿಗೆ ಸಲ್ಲಿಸಲು ಈ ಮೂಲಕ ಸೂಚಿಸಿದೆ ಎಂದು ನೋಟಿಸ್ ನಲ್ಲಿ ಹೇಳಲಾಗಿದೆ.
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ