SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 3, 2025
ಶಿವಮೊಗ್ಗ | ರೈತರ ಹಕ್ಕುಪತ್ರವನ್ನು ವಜಾ ಮಾಡಲು ನೀಡಿರುವ ನೋಟಿಸ್ನ್ನು ವಾಪಸ್ಸು ಪಡೆಯದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ ಶ್ರೀನಿವಾಸ್ ಎಚ್ಚರಿಕೆ ನೀಡಿದರು.
ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ 50 ರಿಂದ 60 ವರ್ಷಗಳ ಹಿಂದೆ ಹಾಗೂ ಇತ್ತೀಚಿನ ವರ್ಷಗಳಲ್ಲಿ ರೈತರಿಗೆ ಕೊಟ್ಟಿರುವ ಜಮೀನಿನ ಹಕ್ಕುಪತ್ರಗಳನ್ನು ವಜಾ ಮಾಡಲು ಎಸಿ ಕಚೇರಿಯ ಮೂಲಕ ಕಡೇಕಲ್, ಉಂಬಳೇಬೈಲು ಪಂಚಾಯ್ತಿ, ಲಕ್ಕಿನಕೊಪ್ಪ ಹಾಲಕ್ಕವಳ್ಳಿ ಸೇರಿದಂತೆ ಇತರೆ ಗ್ರಾಮಗಳಲ್ಲಿ 600 ಕ್ಕೂ ಹೆಚ್ಚು ನೋಟಿಸ್ಗಳನ್ನು ನೀಡಿ ರೈತರಿಗೆ ಅಲೆದಾಡಿಸುತ್ತಿದ್ದಾರೆ. ಅರಣ್ಯ ಇಲಾಖೆ ಸಿಸಿಎಫ್ ಕಚೇರಿಯಿಂದಲೂ ನೋಟೀಸ್ ಕೊಡಲಾಗಿದೆ ಎಂದರು.

600 ಕ್ಕೂ ಹೆಚ್ಚು ರೈತರಿಗೆ ನೋಟೀಸ್ ನೋಡಿದ್ದಾರೆ. ಕಂದಾಯ ಇಲಾಖೆ ಕೊಟ್ಟಿರುವ ಹಕ್ಕುಪತ್ರಗಳನ್ನು ವಜಾ ಮಾಡಿ ಎಂದು ಅರಣ್ಯ ಇಲಾಖೆ ಉಪವಿಭಾಗಾಧಿಕಾರಿಗಳಿಗೆ ಪತ್ರ ಬರೆದಿದೆ. ರೈತರು ಕಾನೂನು ಬಾಹಿರವಾಗಿ ಭೂ ಮಂಜೂರಾತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಅಪಾಧಿಸಿದೆ. ಇದು ಖಂಡನೀಯ ಎಂದರು.
ಶಾಸಕರಾಗಲಿ, ಮಂತ್ರಿಗಳಾಗಲಿ ಇದನ್ನು ಬಗೆಹರಿಸುವ ಕೆಲಸ ಮಾಡುತ್ತಿಲ್ಲ. ಕೋರ್ಟ್ ಆದೇಶ ಇದು ನಾವೇನು ಮಾಡಲು ಆಗುವುದಿಲ್ಲ ಎಂದು ಕೈ ತೊಳೆದು ಕೂತಿದ್ದಾರೆ. ಅಧಿವೇಶನದಲ್ಲಿ ಜಿಲ್ಲೆಯ ರೈತರಿಗೆ ಸರ್ಕಾರ ಹಕ್ಕುಪತ್ರ ನೀಡಿರುವುದನ್ನು ವಜಾ ಮಾಡದಂತೆ ಆಗ್ರಹಿಸಬೇಕು. ಅರಣ್ಯ ಹಕ್ಕು ಕಾಯ್ದೆ ಹಾಗೂ ಅರಣ್ಯ ಸಂರಕ್ಷಣಾ ಕಾಯ್ದೆ ಪ್ರಕಾರ ರೈತರಿಗೆ ಭೂ ಮಂಜೂರಾತಿ ಮಾಡಲು ಕ್ರಮ ಕೈಗೊಳ್ಳಬೇಕು. ಯಾವುದೇ ಸರ್ಕಾರ ಇರಲಿ ಯಾವುದೇ ಜನಪ್ರತಿನಿಧಿ ಇರಲಿ ನಮ್ಮ ಪರ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
600 ಕ್ಕೂ ಹೆಚ್ಚು ಜನಕ್ಕೆ ನೋಟಿಸ್ ಕೊಟ್ಟಿದ್ದಾರೆ. ಚುನಾವಣೆಗೂ ಮುಂಚೆ ಮಂತ್ರಿಗಳು ಶಿವಮೊಗ್ಗಕ್ಕೆ ಬಂದಾಗ ಇದನ್ನು ತಕ್ಷಣ ಸರಿಪಡಿಸುತ್ತೇವೆ ಎಂದವರು ಇದೂವರೆಗೂ ಸರಿಪಡಿಸಿಲ್ಲ. ರೈತರ ಸಮಸ್ಯೆಗೆ ಬೆಲೆ ಇಲ್ಲದಂತಾಗಿದೆ. ರೈತರಿಗೆ ರಕ್ಷಣೆ ಕೊಡಲು ಸಾಧ್ಯವಾಗಿಲ್ಲವೆಂದರೆ ಇಡೀ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಚಳುವಳಿ ಮಾಡುವುದರ ಮೂಲಕ ಶೀಘ್ರದಲ್ಲಿಯೇ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
SUMMARY | If the notice issued to cancel the title deeds of the farmers is not withdrawn, the deputy commissioner’s office will be locked and protests will be held
KEYWORDS | farmers, deputy, commissioner’s, protests,