SHIVAMOGGA | MALENADUTODAY NEWS | ಮಲೆನಾಡು ಟುಡೆ Jan 17, 2025
ಶಿವಮೊಗ್ಗದಲ್ಲಿ ನಾಳೆ ಅಂದರೆ ಜನವರಿ 18 ರಂದು ಹಲವು ಕಾರ್ಯಕ್ರಮಗಳು ನಡೆಯಲಿವೆ. ವಿಶೇಷವಾಗಿ ಪ್ರತಿಷ್ಠಿತ ಕರ್ನಾಟಕ ಸಂಘ ಭವನದಲ್ಲಿ ಜನವರಿ 18 ರ ಶನಿವಾರ ತಿಂಗಳ ಅತಿಥಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕತೆಗಾರ, ಕನ್ನಡಪ್ರಭ ಪತ್ರಿಕೆಯ ಪುರವಣಿ ಸಂಪಾದಕ ಜೋಗಿ ಗಿರೀಶ್ ರಾವ್ ಹತ್ವಾರ್ ಪಾಲ್ಗೊಳ್ಳಲಿದ್ದಾರೆ. ಸಂಜೆ 5.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಜೋಗಿಯವರು ನೆನಪುಗಳ ಅಂಗಳದಲ್ಲಿ ಕತೆ ಕವಿತೆ ಜನ ವಿಷಯದ ಕುರಿತು ಮಾತನಾಡಲಿದ್ದಾರೆ.
ಗೀತ ಮಿತ್ರ ಆಧ್ಯಾತ್ಮಿಕ ಮಾಸ ಪತ್ರಿಕೆ ಶಿವಮೊಗ್ಗ, ಸುಬ್ರಹ್ಮಣ್ಯ ಶ್ರೇಷ್ಠಿ ರುಕ್ಷ್ಮಣಮ್ಮ ಪ್ರತಿಷ್ಠಾನ ಬಾಣಾವರ ಇವರ ಸಹಯೋಗದಲ್ಲಿ ಜನವರಿ 18ರಂದು ಬೆಳಗ್ಗೆ 9ಕ್ಕೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಕೃಷ್ಣಾರ್ಪಣ-2025 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ . ಕಾರ್ಯಕ್ರಮದ ಸಾನ್ನಿಧ್ಯವನ್ನು ದಾವಣಗೆರೆಯ ಜಡೆಸಿದ್ದ ಶಿವಯೋಗೀಶ್ವರ ಮಠದ ಶಿವಾನಂದ ಸ್ವಾಮೀಜಿ ವಹಿಸಲಿದ್ದಾರೆ. ಶಾಸಕ ಡಿ.ಎಸ್.ಅರುಣ್ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಭಾಷಣಕಾರರಾಗಿ ಮಂಕುತಿಮ್ಮ ಕಗ್ಗ ಖ್ಯಾತಿಯ ಜಿ.ನಟೇಶ್ ಭಾಗವಹಿಸಲಿದ್ದಾರೆ.
ಜನವರಿ 18 ರ ಬೆಳಿಗ್ಗೆ 10:30ಕ್ಕೆ ರವೀಂದ್ರ ನಗರ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ವಾಗ್ಗೇಯಕಾರರಾದ ಸದ್ಗುರು ಶ್ರೀ ತ್ಯಾಗರಾಜ ಸ್ವಾಮಿಗಳ ಆರಾಧನೋತ್ಸವ ನಡೆಯಲಿದೆ. ಇದರ ಅಂಗವಾಗಿ ನಾದಸುಧಾ ವತಿಯಿಂದ ಶ್ರೀ ತ್ಯಾಗರಾಜಸ್ವಾಮಿಗಳ ಮೂರ್ತಿಗೆ ಪಂಚಾಮೃತ ಅಭಿಷೇಕದೊಂದಿಗೆ ಶ್ರೀ ತ್ಯಾಗರಾಜ ಸ್ವಾಮಿಗಳಿಂದ ರಚಿತವಾದ ಪಂಚರತ್ನ ಕೃತಿಗಳ ಗೋಷ್ಠಿಗಾಯನವು ಸ್ಥಳೀಯ ಸಂಗೀತ ವಿದ್ವಾಂಸರು ಹಾಗೂ ವಿದ್ಯಾರ್ಥಿಗಳಿಂದ, ಕಲಾವಿದರುಗಳಿಂದ ನಡೆಯಲಿದೆ

SUMMARY | Tomorrow events in Shimoga
KEY WORDS |Tomorrow events in Shimoga