SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 19, 2024
ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಹಾಗು ವಾಹನ ನಿಲುಗಡೆಗೆ ಹಲವೆಡೆ ನಿಷೇಧ ಹೇರಲಾಗಿತ್ತು.
ಇದೀಗ ದಿನಾಂಕ:22.9.2024 ರಂದು ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿವಿಧ ಭಾಗಗಳಲ್ಲಿ ಮೆರವಣಿಗೆ ಸಾಗುವುದರಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಮತ್ತು ವಾಹನಗಳ ಮಾರ್ಗ ಬದಲಾವಣೆ ಹಾಗೂ ನಿಲುಗಡೆಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾಡಳಿತ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದೆ.
ಎಲ್ಲೆಲ್ಲಿ ಸಾಗಲಿದೆ ಮೆರವಣಿಗೆ
ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಿವಮೊಗ್ಗದಲ್ಲಿ ಮೆರವಣಿಗೆಯು ಶಿವಮೊಗ್ಗ ನಗರದ ಗಾಂಧಿಬಜಾರ್ ಜಾಮೀಯ ಮಸೀದಿಯಿಂದ ಪ್ರಾರಂಭಗೊಂಡು ಗಾಂಧಿ ಬಜಾರ್ 2ನೇ ಕ್ರಾಸ್.ನಾಗಪ್ಪನ ಕೇರಿ, ಲಷ್ಕರ್ ಮೊಹಲ್ಲಾ ಮುಖ್ಯ ರಸ್ತೆಯ ಓಲ್ಡ್ ಬಾರ್ ಲೈನ್ ರಸ್ತೆ ಪೆನ್ನನ್ ಮೊಹಲ್ಲಾ ಬಾಲ್ ರಾಜ್ ಅರಸ್ ರಸ್ತೆ ಮಹಾವೀರ ಸರ್ಕಲ್ ಗೋಪಿ ಸರ್ಕಲ್ ನೆಹರು ರಸ್ತೆ- ಅಮೀರ್ ಅಹ್ಮದ್ ಸರ್ಕಲ್ ಮಾರ್ಗವಾಗಿ ಬಿಹೆಚ್ ರಸ್ತೆ ಅಶೋಕ ಸರ್ಕಲ್ ಎನ್ ಟಿ ರಸ್ತೆ ಗುರುದೇವ ರಸ್ತೆ ರ್ಕ್ಲಾಕ್ ಪೇಟೆ, ನೂರಾನಿ ಮಸೀದಿ ಕೆಆರ್ ಪುರಂ ರಸ್ತೆ ಮಾರ್ಗವಾಗಿ ಅಮೀರ್ ಅಹಮ್ಮದ್ ಸರ್ಕಲ್ ತಲುಪುತ್ತದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಕೆಳಕಂಡ ಸ್ಥಳಗಳಲ್ಲಿ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಿದೆ.
ವಾಹನಗಳ ಮಾರ್ಗ ಬದಲಾವಣೆಯ ವಿವರ
ದಿನಾಂಕ: 22.9.2024 ರಂದು ಬೆಳಿಗ್ಗೆ 6-00 ಗಂಟೆಯಿಂದ ರಾತ್ರಿ 08-00 ಗಂಟೆವರೆಗೆ
ಭದ್ರಾವತಿ ಬೆಂಗಳೂರು ಎನ್ ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಬಸ್ ಗಳು ಎಂ.ಆರ್.ಎನ್ ಸರ್ಕಲ್ ನಿಂದ ಬೈಹಾನ್ ರಸ್ತೆ ಮುಖಾಂತರ ಹೋಗುವುದು.
ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್ ಗಳು ಹೊಳೆಹೊನ್ನೂರು ಸರ್ಕಲ್,ಎಂ.ಆರ್.ಎನ್,ಸರ್ಕಲ್ ಮಾರ್ಗವಾಗಿ ಬೈಪಾನ್ ರಸ್ತೆ ಮುಖಾಂತರ ಹೋಗುವುದು.
ಹೊನ್ನಾಳಿ,ದಾವಣಗೆರೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಬಸ್ ಗಳು ನಂಗೊಳ್ಳಿ ರಾಯಣ್ಣ ಸರ್ಕಲ್ ಶಂಕರ ಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರ, ಎಂ. ಆರ್ .ಎನ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಹರಿಹರ,ದಾವಣಗೆರೆಗೆ ಹೋಗುವ ಎಲ್ಲಾ ಬಸ್ ಗಳು ಮತ್ತು ಭಾರಿ ಸರಕು ವಾಹನಗಳು ಬೈಪಾನ್ ಮುಖಾಂತರವಾಗಿ ಎಂಆರ್ ಎಸ್ ಸರ್ಕಲ್. ವಿದ್ಯಾನಗರ ಶಂಕರಮಠ ಸರ್ಕಲ್ ಸಂಗೂಳ್ಳಿರಾಯಣ್ಣ ಸರ್ಕಲ್ ಮುಖಾಂತರ ಹೋಗುವುದು
ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಎಂ.ಆರ್ .ಎಸ್ ಸರ್ಕಲ್ ಮುಖಾಂತರ ಹೋಗುವುದು.
ಶಿಕಾರಿಪುರ ಸೊರಬ ಆನವಟ್ಟಿ, ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೊರ ಹೋಗುವ ಎಲ್ಲಾ ಬಸ್ ಗಳು ಮತ್ತು ಭಾರಿ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್,ಲಕ್ಷ್ಮೀ ಟಾಕೀಸ್ ಸರ್ಕಲ್ ಪೊಲೀಸ್ ಚೌಕಿ ಆಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸುವುದು
ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ
ಲಷ್ಕರ್ ಮೊಹಲ್ಲಾ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು.
ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ಮಾರ್ಗವಾದ ಗಾಂಧಿಬಜಾರ್ ಜಾಮೀಯ ಮಸೀದಿಯಿಂದ ಗಾಂಧಿಬಜಾಲ್ 2ನೇ ಕ್ರಾಸ್ ನಾಗಪ್ಪ ಕೇರಿ ಲಷ್ಕರ್ ಮೊಹಲ್ಲಾ ಮುಖ್ಯ ರಸ್ತೆ- ಓಲ್ಡ್ ಬಾರ್ ಲೈನ್ ರಸ್ತೆ-ಪೆನ್ನನ್ ಮೊಹಲ್ಲಾ ಬಾಲ್ ರಾಜ್ ಅರಸ್ ರಸ್ತೆ- ಮಹಾವೀರ್ ಸರ್ಕಲ್ ಗೋಪಿ ಸರ್ಕಲ್ ನೆಹರು ರಸ್ತೆ- ಅಮೀರ್ ಅಹ್ಮದ್ ಸರ್ಕಲ್- ಬಿ.ಹೆಚ್ ರಸ್ತೆ-ಅಶೋಕ ಸರ್ಕಲ್-ಎನ್ ಟಿ ರಸ್ತೆ-ಗುರುದೇವ ರಸ್ತೆ-ಕ್ಲಾರ್ಕಪೇಟೆ-ನೂರಾನಿ ಮಸೀದಿ-ಕೆ.ಆರ್.ಪುರಂ ರಸ್ತೆ ಮಾರ್ಗವಾಗಿ ಅಮೀರ್ ಅಹ್ಮದ್ ಸರ್ಕಲ್ ವರೆಗಿನ ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತ ಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ವಾಹನ ನಿಲುಗಡೆ ನಿಷೇಧಿಸುವುದು.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಅಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ.
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ