SHIVAMOGGA | MALENADUTODAY NEWS | Aug 18, 2024 ಮಲೆನಾಡು ಟುಡೆ
ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸುವ ಅವಕಾಶವನ್ನು ಶಿವಮೊಗ್ಗ ಪೊಲೀಸ್ ಇಲಾಖೆ ನೀಡಿದೆ.
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಹಬ್ಬಗಳ ಹಿನ್ನೆಲೆಯ ಸ್ವಯಂಸೇವಕರ ನೇಮಕ
ಈ ನಿಟ್ಟಿನಲ್ಲಿ ಪ್ರಮುಖ ಕಂಡಿಷನ್ ಎಂದರೆ, ಪೊಲೀಸರ ಜೊತೆಗೆ ಸ್ವಯಂಸೇವಕರಾಗಿ ಕೆಲಸ ಮಾಡಲು ಬಯಸುವವರು ಅಪರಾಧಿಕ ಹಿನ್ನೆಲೆ ಹೊಂದಿರಬಾರದು. ಅಂತಹ ಸಾರ್ವಜನಿಕರು ದಿನಾಂಕಃ 21-08-2024 ರ ವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದಾಗಿರುತ್ತದೆ.
ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪಿಗೆ ಒಳಪಡುವ ಸಾರ್ವಜನಿಕರು ಶಿವಮೊಗ್ಗ-ಎ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ,
ಭದ್ರಾವತಿ ತಾಲ್ಲೂಕು ವ್ಯಾಪಿಗೆ ಒಳಪಡುವ ಸಾರ್ವಜನಿಕರು ಭದ್ರಾವತಿ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ, ಸಾಗರ ತಾಲ್ಲೂಕು ವ್ಯಾಪಿಗೆ ಒಳಪಡುವ ಸಾರ್ವಜನಿಕರು ಸಾಗರ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ,
ತೀರ್ಥಹಳ್ಳಿ ಮತ್ತು ಹೊಸನಗರ ತಾಲ್ಲೂಕು ವ್ಯಾಪಿಗೆ ಒಳಪಡುವ ಸಾರ್ವಜನಿಕರು ತೀರ್ಥಹಳ್ಳಿ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ ಮತ್ತು ಸೊರಬ ಹಾಗೂ ಶಿಕಾರಿಪುರ ತಾಲ್ಲೂಕು ವ್ಯಾಪಿಗೆ ಒಳಪಡುವ ಸಾರ್ವಜನಿಕರು ಶಿಕಾರಿಪುರ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ ತಮ್ಮ ವಿವರಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದಾಗಿರುತ್ತದೆ ಎಂದು ಪೊಲೀಸ್ ಇಲಾಖೆ ತಿಳಿಸಿ
ಇದನ್ನು ಸಹ ಓದಿ :ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ