SHIVAMOGGA | MALENADUTODAY NEWS | ಮಲೆನಾಡು ಟುಡೆ Jan 21, 2025
ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ಟಿಓ) ಕಚೇರಿಯಲ್ಲಿ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಜಂಟಿ ಸಾರಿಗೆ ಆಯುಕ್ತ ಭೀಮನಗೌಡ ಪಾಟೀಲ್ ವಾಹನ ಸವಾರರಿಗೆ ರಸ್ತೆ ಸುರಕ್ಷತಾ ಮಾಸಾಚರಣೆ ಹಿನ್ನೆಲೆಯಲ್ಲಿ ಮಹತ್ವದ ಮಾಹಿತಿ ನೀಡಿದರು
-
ವಾಹನ ಚಾಲನೆ ಮಾಡುವ ಪ್ರತಿಯೊಬ್ಬರು ವಾಹನ ಚಾಲನೆ ಪರವಾನಿಗೆ ಹೊಂದಿರಬೇಕು.
-
ವಾಹನ ಚಾಲನೆ ವೇಳೆ ರಸ್ತೆ ಸುರಕ್ಷತಾ ನಿಯಮಾವಳಿಗಳನ್ನು ಪಾಲಿಸಬೇಕು.
-
ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.
-
ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸೇಫ್ಟಿ ಹಾರ್ನೆಸ್ನ್ನು ಬಳಸಬೇಕು.
-
ನಾಲ್ಕು ಚಕ್ರ ವಾಹನ ಚಾಲಕರು ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು
ಇದೇ ವೇಳೆ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮುರಗೇಂದ್ರ ಬಿ ಶಿರೋಳಕರ, ಹಿರಿಯ ಮೋಟಾರ್ ವಾಹನ ನಿರೀಕ್ಷಕರಾದ ಮಲ್ಲೇಶಪ್ಪ, ಮೋಟಾರ್ ವಾಹನ ನಿರೀಕ್ಷಕರಾದ ಮಂಜುನಾಥ್, ಕಚೇರಿ ಅಧೀಕ್ಷಕರಾದ ರಮ್ಯಾ, ಸಿಬ್ಬಂದಿ ಡಿ.ಮೋಹನ್ ಕುಮಾರ್ ಹಾಗೂ ಚಾಲನಾ ತರಬೇತಿ ಶಾಲೆಯ ಪ್ರಾಂಶುಪಾಲರು, ವಕೀಲರು, ಸಾರ್ವಜನಿಕರು ಹಾಜರಿದ್ದರು.
SUMMARY | Joint Transport Commissioner Bheemanagouda Patil gave important information at the Shivamogga Regional Transport Office in the wake of Road Safety Week.
KEY WORDS | Joint Transport Commissioner Bheemanagouda Patil , important information, Shivamogga Regional Transport Office , Road Safety month
