SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 24, 2024 : SHIVAMOGGA BJP PROTEST | ಮುಡಾ ಪ್ರಕರಣದ ವಿಚಾರವಾಗಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ವಿಚಾರದಲ್ಲಿ ಹೈಕೋರ್ಟ್ ಸಿಎಂ ಸಿದ್ದರಾಮಯ್ಯರ ಪರವಾದ ಅರ್ಜಿಯನ್ನ ತಿರಸ್ಕರಿಸಿದೆ. ಇದರ ಬೆನ್ನಲ್ಲೆ ಬಿಜೆಪಿ ಬೀದಿಗಿಳಿದು ಸಿಎಂ ಸಿದ್ದರಾಮಯ್ಯರ ರಾಜೀನಾಮೆಗೆ ಆಗ್ರಹಿಸಿದೆ. ಈ ಸಂಬಂಧ ಶಿವಮೊಗ್ಗದ ಗೋಪಿ ಸರ್ಕಲ್ನಲ್ಲಿ ಸಂಸದ ಬಿವೈ ರಾಘವೇಂದ್ರ ಸೇರಿದಂತೆ ಶಾಸಕರಾದ ಡಿ.ಎಸ್ ಅರುಣ್, ಧನಂಜಯ್ ಸರ್ಜಿ ವಿವಿಧ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ
ಸಿಎಂ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ತೀರ್ಪಿನ ಪ್ರಕಾರ ಕೂಡಲೇ ಸಿಎಂ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಈ ವೇಳೆ ಮಾತನಾಡಿದ MP ರಾಘವೇಂದ್ರ ಕಳೆದ ಎರಡು-ಮೂರು ತಿಂಗಳಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಆದರೆ ಸರ್ಕಾರ ಎಸ್ಐಟಿ ತನಿಖೆ ಮಾಡಿಸುವ ಮೂಲಕ ತಮ್ಮ ಶಾಸಕರಿಗೆ ಕ್ಲಿನ್ ಚಿಟ್ ಕೊಡಿಸುತ್ತಾ ಬಂದಿದೆ ಎಂದು ಆರೋಪಿಸಿದರು.
ಅಲ್ಲದೆ ಆಪಾದನೆ ಬಂದ ತಕ್ಷಣ ರಾಜೀನಾಮೆ ಕೊಡುವುದು ಕರ್ನಾಟಕದ ಮಣ್ಣಿನ ಸಂಸ್ಕೃತಿಯಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಘನತೆಯನ್ನ ಪ್ರಶ್ನೆ ಮಾಡುತ್ತಿದೆ ಎಂದು ದೂರಿದ ಸಂಸದ ಬಿವೈ ರಾಘವೇಂದ್ರ ಅಪ್ಪಿ ತಪ್ಪಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ, ಮುಡಾ ಹಗರಣದಲ್ಲಿ ಕೇವಲ ರಾಜೀನಾಮೆ ನಿಡೋದಲ್ಲ, ಮುಡಾ ಹಗರಣದ ಸಮಗ್ರ ತನಿಖೆ ಆಗಬೇಕು ಎಂದರು. ಈ ಸಂಬಂಧ ಸಿಎಂ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದ ಬಿವೈಆರ್ ಆರೋಪ ಮುಕ್ತರಾದ ಬಳಿಕ ಅವರೇ ಸಿಎಂ ಆಗಲಿ ಎಂದರು.
