SHIVAMOGGA | MALENADUTODAY NEWS | ಮಲೆನಾಡು ಟುಡೆ Oct 16, 2024
ಶಿವಮೊಗ್ಗ | ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅಕ್ಟೋಬರ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ. ಅದಕ್ಕೆ ಸಂಬಂಧಿಸಿದ ಮಾಹಿತಿ ಇಲ್ಲಿದೆ.
ಕರ್ನಾಟಕ ಲೋಕಾಯುಕ್ತ ಪೊಲೀಸ್
ಅ. 21 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ
ಇದೇ ದಿನ ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ
ಅ.22 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ
ಇದೇ ದಿನ ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ

ಅ.23 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ
ಇದೇ ದಿನ ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭದ್ರಾವತಿ ನಗರಸಭೆ ಸಭಾಂಗಣ
ಅ.24 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.
ಯಾವೆಲ್ಲಾ ಅರ್ಜಿ ಕೊಡಬಹುದು
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
———————–
SUMMARY | district officers of Karnataka Lokayukta Police division will hold public grievances receiving complaints in various taluks of the district on the following days of October-2024. Here’s the information related to it.
KEYWORDS | district officers of Karnataka Lokayukta Police division, public grievances receiving complaints,