SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 25, 2024 ಸಿಎಂ ಸಿದ್ದರಾಮಯ್ಯರ ಪರವಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಬೆನ್ನಲ್ಲೆ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಕುರಿತಾಗಿ ಮಾತನಾಡಿರುವ ಅವರು, ಸಿಎಂ ಸಿದ್ದರಾಮಯ್ಯ ಬಗ್ಗೆ ವೈಯಕ್ತಿಕವಾಗಿ ನಾನು ಏನು ಹೇಳುವುದಿಲ್ಲ. ತೀರ್ಪು ಬರುವ ಮುನ್ನ ನ್ಯಾಯ ಸಿಗುತ್ತದೆ ಅಂತಾ ಅವರು ಹೇಳಿದ್ದರು, ಆದರೆ ಹೈಕೋರ್ಟ್ ತೀರ್ಪು ಬಂದ ನಂತರ ತೀರ್ಪಿನ ಬಗ್ಗೆ ಮನ್ನಣೆ ಕೊಡಲ್ಲ ಅಂತಾ ಹೇಳ್ತಾ ಇದ್ದಾರೆ, ಹಾಗಂದರೆ, ಕೋರ್ಟ್ ತೀರ್ಪು ಗೆ ಸಿದ್ದರಾಮಯ್ಯ ಬದ್ಧರಾಗ್ತರೋ ಇಲ್ವೊ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯರ ಪತ್ನಿಗೆ ಅನ್ಯಾಯವಾಗಬಾರದು
ಭಗವಂತನ ಧಯೆಯಿಂದ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ನ್ಯಾಯ ಸಿಗಲಿ ಎಂದ ಕೆಎಸ್ ಈಶ್ವರಪ್ಪರವರು, ಈ ಪ್ರಕರಣದಲ್ಲಿ ಸಿದ್ದರಾಮಯ್ಯರವರ ಪತ್ನಿ ಮುಗ್ದ ಹೆಣ್ಣು ಮಗಳು, ಅವರಿಗೆ ಅನ್ಯಾಯ ಆಗಬಾರದು, ಆ ಸಾತ್ವಿಕ ಹೆಣ್ಣುಮಗಳಿಗೆ ಅನ್ಯಾಯ ಆಗಬಾರದು ಎಂದು ನಾನು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು. ಸಹಿ ಮಾಡು ಅಂದ್ರೆ ಮನೆಯವರು ಸಹಿ ಮಾಡ್ತಾರೆ ಹಾಗಾಗಿ ಈ ಪ್ರಕರಣದಲ್ಲಿ ಸಿದ್ದರಾಮಯ್ಯರ ಪತ್ನಿಗೆ ಅನ್ಯಾಯವಾಗಬಾರದು ಎಂದ ಕೆಎಸ್ ಈಶ್ವರಪ್ಪ
ನಿಮ್ಮ ಪರವಾಗಿ ತೀರ್ಪು ಬಂದ್ರೆ ನ್ಯಾಯ, ನಿಮ್ಮ ವಿರುದ್ಧ ತೀರ್ಪು ಬಂದ್ರೆ ಅನ್ಯಾಯನಾ, ಈಗ ರಾಜೀನಾಮೆ ಕೊಡಲ್ಲ ಅನ್ನೋದಾದರೆ ಕೋರ್ಟ್ಗಳನ್ನ ಮುಚ್ಚಿಬಿಡಿ ಎಂದು ದೂರಿದರು.
ಸಿಎಂ ಸಿದ್ದರಾಮಯ್ಯ – CM Siddaramaiah
ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಸರಿಯಾಗಿ ತೀರ್ಮಾನ ತೆಗೆದುಕೊಳ್ಳಬೇಕು , ಸಿದ್ದರಾಮಯ್ಯ ನವರೇ ನೀವು ಸುಪ್ರೀಂಕೋರ್ಟ್ ಗೆ ಹೋಗಿ , ಆದರೆ ನ್ಯಾಯಾಂಗ ವ್ಯವಸ್ಥೆಗೆ ತಲೆಬಾಗಿ, ನಿಮ್ಮಗೆ ನ್ಯಾಯ ಸಿಗಲಿ ಅನ್ನೋದು ನನ್ನ ಬಯಕೆ, ರಾಜೀನಾಮೆ ಕೊಡಲ್ಲ ಅನ್ನೋದು ಕಾಂಗ್ರೆಸ್ ಪಕ್ಷಕ್ಕೆ ಶೋಭೆ ತರೋದಿಲ್ಲ ಎಂದ ಕೆಎಸ್ಇ ತಮಗೆ ಮಾತಾನಾಡೋಕೆ ನೈತಿಕ ಹಕ್ಕಿದೆ, ಯಾಕೆಂದರೆ ನನ್ನ ಮೇಲೆ ಬಂದ ಆರೋಪದ ಬೆನ್ನಲ್ಲೆ ನಾನು ಕೂಡಲೇ ರಾಜೀನಾಮೆ ನೀಡಿದೆ ಹಾಗಾಗಿ ಕೈ ಮುಗಿದು ಪ್ರಾರ್ಥನೆ ಮಾಡ್ತೇನೆ ನ್ಯಾಯಾಂಗ ವ್ಯವಸ್ಥೆಗೆ ತಲೆ ಬಾಗಿ, ರಾಜೀನಾಮೆ ನೀಡಿ ಎಂದರು