SHIVAMOGGA | MALENADUTODAY NEWS | Aug 27, 2024 ಮಲೆನಾಡು ಟುಡೆ
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಹಳೇಸೊರಬದ ಶಾಂತಿಕೆರೆ ಸಮೀಪ ಹಾನಗಲ್ ಕಡೆಯಿಂದ ಸೊರಬ ಪಟ್ಟಣಕ್ಕೆ ಬರುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ.
ಎದುರಿಗೆ ಬಂದ ವಾಹನ ಮುಂದಕ್ಕೆ ಸಾಗಲು ಅನುವು ಮಾಡಿಕೊಡುವ ಸಂದರ್ಭದಲ್ಲಿ ಲಾರಿ ಪಲ್ಟಿಯಾಗಿದೆ. ಲಾರಿ ಚಾಲಕನಿಗೆ ಯಾವುದೇ ಅಪಾಯವಾಗಿಲ್ಲ
ಮಾಸ್ತಿಕಟ್ಟೆಯಲ್ಲಿ ಲಾರಿ ಡಿಕ್ಕಿ
ಇನ್ನೂ ಇತ್ತ ತೀರ್ಥಹಳ್ಳಿ ತಾಲ್ಲೂಕು ಮಾಸ್ತಿಕಟ್ಟೆ ಸಮೀಪ ಯಡೂರಿನಲ್ಲಿ ಸಿಲಿಂಡರ್ ಲಾರಿಯೊಂದರ ಚಕ್ರ ಕುಸಿದು, ಲಾರಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿದೆ.
ಜಲಜೀವನ್ ಮಿಷನ್ ಕಾಮಗಾರಿಯಿಂದಾಗಿ ಮೇನ್ ರಸ್ತೆಗಳ ಪಕ್ಕದಲ್ಲಿ ಮಣ್ಣು ಕುಸಿಯುತ್ತಿದೆ. ಇದರಿಂದ ರಸ್ತೆ ಬಿಟ್ಟು ಸೈಡಿಗಿಳಿದ ಲಾರಿಗಳು ಬಸ್ಗಳ ಚಕ್ರಗಳು ನೆಲಕ್ಕೆ ಹುಗಿಯುತ್ತಿವೆ.

ಇಲ್ಲಿಯು ಅದೇ ರೀತಿಯಾಗಿದ್ದು, ಲಾರಿ ಚಕ್ರ ಹುಗಿದು ನಿಯಂತ್ರಣ ತಪ್ಪಿ ಲಾರಿಯು ಕರೆಂಟ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಲಾರಿ ಜಖಂಗೊಂಡಿದೆ. ಅದೃಷ್ಟಕ್ಕೆ ಯಾರಿಗೂ ಅಪಾಯವಾಗಿಲ್ಲ
ಇನ್ನಷ್ಟು ಸುದ್ದಿಗಳು
-
Shivamogga court | @ಜೈಲರ್ ಕೊಲೆ ಕೇಸ್ | ಇಬ್ಬರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ , ಮೂವರಿಗೆ ಐದು ವರ್ಷ ಜೈಲು
-
ವೃದ್ಧಾಪ್ಯ ವೇತನದ ದುಡ್ಡು ಕೇಳಿದ್ರೆ ಗೆಟ್ ಔಟ್ , ಹೋಗಿ ಸಾಯಿ ಅಂತಾರಂತೆ | ಅಜ್ಜಿ ಅಳಲನ್ನ ಆಲಿಸುತ್ತಾ ವ್ಯವಸ್ಥೆ?
-
Anandpur Sagar | ಐತಿಹಾಸಿಕ ಪುಷ್ಕರಣಿಯಲ್ಲಿ ಈಜುವಾಗ ಬೆಂಗಳೂರು ಮೂಲದ ಯುವಕ ಸಾವು