yellow alert / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮಳೆವರದಿ / ಶಿವಮೊಗ್ಗವೂ ಸೇರಿದಂಥೆ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಹೇಳಿದೆ. ಈ ಸಂಬಂದ ಹವಾಮಾನ ಇಲಾಖೆಯ ಬುಲೆಟಿನ್ ಪ್ರಕಾರ, ಇವತ್ತಿಂದ ಅಂದರೆ ಸೋಮವಾರದಿಂದ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆಯಂತೆ.
ಈ ಬಗ್ಗೆ ಹವಾಮಾನ ಇಲಾಖೆ ಮುನೂಚನೆ ನೀಡಿದೆ. ಮೇಲಾಗಿ ಇವತ್ತು ಅಂದರೆ, ಸೋಮವಾರ 13 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ (yellow alert) ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಉತ್ತರ ಕನ್ನಡ ಜಿಲ್ಲೆಗೂ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಯ ಒಂದೆರಡು ಕಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಅಂತಾ ತಿಳಿಸಲಾಗಿದೆ. ಇಷ್ಟೆ ಅಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಅಬ್ಬರದ ಸೂಚನೆ ನೀಡಲಾಗಿದೆ.
ಈ ಸಂಬಂಧ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಟ್ವೀಟ್ ಇಲ್ಲಿದೆ ಗಮನಿಸಿ
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ದುರ್ಬಲ ಮುಂಗಾರು ಮುಂದುವರಿಯಲಿದ್ದು, ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜೂನ್ 21 ರಿಂದ 24 ರವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂನ್ 22 & 23 ರಂದು pic.twitter.com/6qmlck7JzG
— Karnataka State Natural Disaster Monitoring Centre (@KarnatakaSNDMC) June 21, 2026
