ಬಿರಿಯಾನಿ ತಿಂದು 17 ಮಂದಿ ಅಸ್ವಸ್ಥ! ಏನಿದು ಘಟನೆ! ಹೇಗಾಯ್ತು! ವಿವರ ಇಲ್ಲಿದೆ
At least 17 people fell ill after consuming biryani at a family function at Maravanji in Kadur taluk. Chikkamagaluru News, Kadur Taluk, Malnad Today,
![ಬಿರಿಯಾನಿ ತಿಂದು 17 ಮಂದಿ ಅಸ್ವಸ್ಥ! ಏನಿದು ಘಟನೆ! ಹೇಗಾಯ್ತು! ವಿವರ ಇಲ್ಲಿದೆ](https://malenadutoday.com/uploads/images/202311/image_870x_655c0a4759ed9.webp)
SHIVAMOGGA NEWS / ONLINE / Malenadu today/ Nov 21, 2023 NEWS KANNADA
Chikkamagaluru | Malnenadutoday.com | ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಮಾಂಸಾಹಾರ ಸೇವಿಸಿದ ಬಳಿಕ 17 ಮಂದಿ ಅಸ್ವಸ್ಥರಾದ ಘಟನೆಯು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕು ಮರವಂಜಿ ಗ್ರಾಮದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಅಸ್ವಸ್ಥರಾದವರಿಗೆ ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
READ :ಶಿವಮೊಗ್ಗ ಜಿಲ್ಲೆಯಿಂದ ಮತ್ತೊಂದು ಪಲ್ಲಕ್ಕಿ ಬಸ್ ಸೇವೆ ಆರಂಭ! ಸಾಗರ-ಶಿವಮೊಗ್ಗ-ವಿಜಯಪುರ!
ಮರವಂಜಿ ಗ್ರಾಮದಲ್ಲಿ ಭಾನುವಾರ ಬಾಡೂಟದ ಕಾರ್ಯಕ್ರಮ ನಡೆದಿತ್ತು. ಇಲ್ಲಿ ಊಟ ಮಾಡಿದವರಲ್ಲಿ ನಿನ್ನೆ ವಾಂತಿ-ಭೇಧಿ ಕಾಣಿಸಿಕೊಂಡಿದೆ. ಬಿರಿಯಾನಿ ತಿಂದ ಹಲವರು ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
READ :ಶಿವಮೊಗ್ಗ ವಿಮಾನ ನಿಲ್ಧಾಣದಲ್ಲಿ ಸ್ಟಾರ್ ಏರ್ ಲೈನ್ಸ್ ಹಾರಾಟ ಆರಂಭ! ಸಂಚಾರದ ವಿವರ ಇಲ್ಲಿದೆ !
8 ಪುರುಷರು, 9 ಮಹಿಳೆಯರು ಆಸ್ಪತ್ರೆಗೆ ದಾಖಲಾಗಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ