2 ಸಾವಿರ ಮೊತ್ತದ ತರಕಾರಿ ಬೀಜಗಳ ಕಿಟ್ ವಿತರಣೆ | ಯಾರಲ್ಲಾ ಅರ್ಜಿ ಸಲ್ಲಿಸಬಹದು

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 11, 2025

ಶಿವಮೊಗ್ಗ|  ರೈತರಿಗೆ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಶಿಕಾರಿಪುರ ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2 ಸಾವಿರ ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗುತ್ತಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರು ಈ ಅನುಕೂಲವನ್ನು ಪಡೆಯಲು ಅರ್ಜಿ ಸಲ್ಲಿಸಬಹದು

ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ಶಿಕಾರಿಪುರ ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಆಧಾರ್‌ಕಾರ್ಡ್ ಜೇರಾಕ್ಸ್, ಬ್ಯಾಂಕ್ ಪಾಸ್ ಬುಕ್ ಜೇರಾಕ್ಸ್, ಜಾತಿ ಪ್ರಮಾಣ ಪತ್ರ(ಪ.ಜಾ/ಪ.ಪಂ.ದವರಿಗೆ ಮಾತ್ರ) ಗಳನ್ನು ಸಲ್ಲಿಸಿ ಫೆಬ್ರವರಿ 11 ರಿಂದ ತರಕಾರಿ ಬೀಜಗಳ ಕಿಟ್‌ನ್ನು ಪಡೆಯುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ತೋಟಗಾರಿಕೆ ಇಲಾಖೆ ಕಚೇರಿಯನ್ನು ಹಾಗೂ ಮೊ.ಸಂ. : ಕಸಬಾ-7019808174, ಅಂಜನಾಪುರ-8151810552, ಹೊಸೂರು-6363095898, ಉಡುಗಣೆ-9108548454, ತಾಳಗುಂದ-7975515575 ಗಳನ್ನು ಸಂಪರ್ಕಿಸುವುದು. 

SUMMARY | Under the Integrated Horticulture Development Scheme, farmers will get Rs. A kit of vegetable seeds worth Rs 2,000 is being distributed.

KEYWORDS | Horticulture Development, Scheme, vegetable seeds, farmers,   

Share This Article